Congress; ಎಂ.ಬಿ.ಪಾಟೀಲ್ ಮುಖ್ಯಮಂತ್ರಿಯಾಗುವುದು ಖಚಿತ: ಭವಿಷ್ಯ ನುಡಿದ ಡಾ.ಮಹದೇವಶ್ರೀ
Team Udayavani, Mar 9, 2024, 6:12 PM IST
ವಿಜಯಪುರ : ಬರುವ ದಿನಗಳಲ್ಲಿ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ ರಾಜ್ಯದ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಆಲಗೂರು ವೀರಶೈವ ಪಂಚಮಸಾಲಿ ಪೀಠದ ಜಗದ್ಗುರು ಡಾ.ಮಹದೇವ ಶ್ರೀಗಳು ಭವಿಷ್ಯ ನುಡಿದಿದ್ದಾರೆ.
ಬಬಲೇಶ್ವರ ಪಟ್ಟಣದಲ್ಲಿ ನಡೆದ ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶದಲ್ಲಿ ಮಾತನಾಡಿದ ಶ್ರೀಗಳು, ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಈಗ ಕೇವಲ ಮಂತ್ರಿಯಾಗಿದ್ದು, ಬರುವ ದಿನಗಳಲ್ಲಿ ಮುಖ್ಯಮಂತ್ರಿಯೇ ಆಗಲಿದ್ದಾರೆ.
ಎಂ.ಬಿ.ಪಾಟೀಲ ಅವರು ಮುಖ್ಯಮಂತ್ರಿಯಾಗಲು ನಮ್ಮ ಗುರು ಗುರುಪಾದೇಶ್ವರರು, ಸಿದ್ಧೇಶ್ವರ ಶ್ರೀಗಳು, ನಮ್ಮ ಹಾಗೂ ಕ್ಷೇತ್ರ ಜನರ ಆಶೀರ್ವಾದದಿಂದ ಇದು ಸಾಧ್ಯವಾಗಲಿದೆ ಎಂದು ಭವಿಷ್ಯ ನುಡಿದರು.
ವಿಜಯಪುರ ಬರನಾಡು ಎಂಬ ಅಪಕೀರ್ತಿ ಅಳಿಸುವಲ್ಲಿ ಜಲಸಂಪನ್ಮೂಲ ಸಚಿವರಾಗಿದ್ದಾಗ ಜಿಲ್ಲೆಯಲ್ಲಿ ನೀರಾವರಿ ಯೋಜನೆಗಳನ್ನು ಜಾರಿಗೆ ತಂದರು. ಪರಿಣಾಮ ಬರದ ನಾಡಿನ ರೈತರ ಬದುಕು ಬಂಗಾರವಾಗಿದೆ. ಹೀಗಾಗಿ ಅಭಿವೃದ್ಧಿ ಪರ ಕಾಳಜಿಯ ಎಂ.ಬಿ.ಪಾಟೀಲ ರಾಜ್ಯದ ಮುಖ್ಯಮಂತ್ರಿಯಾಗುವುದು ಖಚಿತ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drought Relief: ಕಾಂಗ್ರೆಸ್-ಬಿಜೆಪಿ ಬರ ಪರಿಹಾರ ಜಟಾಪಟಿ
Drought Relief: ಎಕ್ಸ್ (ಟ್ವಿಟರ್)ನಲ್ಲೂ ಕಾಂಗ್ರೆಸ್-ಬಿಜೆಪಿ ವಾಕ್ಸಮರ
Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್ ಏಜೆಂಟ್ ಟ್ರಿಫ್’: ಬಿಜೆಪಿ ಆರೋಪ
HDK ಪೆನ್ಡ್ರೈವ್ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ
Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್.ಡಿ. ಕುಮಾರಸ್ವಾಮಿ