ಬಿಜೆಪಿ ಸುನಾಮಿಗೆ ಕಾಂಗ್ರೆಸ್‌ ಧೂಳಿಪಟ


Team Udayavani, May 5, 2018, 1:23 PM IST

vij-1.jpg

ತಾಳಿಕೋಟೆ: ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಬ್ರಿಟಿಷರ ಹಾಗೆ ಆಳ್ವಿಕೆ ನಡೆಸುತ್ತಿರುವ ಕಾಂಗ್ರೆಸ್‌ ಪಕ್ಷ ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಸುನಾಮಿ ಅಲೆಗೆ ಧೂಳಿಪಟವಾಗಲಿದೆ ಎಂದು ಬಿಜೆಪಿ ಅಭ್ಯರ್ಥಿ ಎ.ಎಸ್‌. ಪಾಟೀಲ (ನಡಹಳ್ಳಿ) ಹೇಳಿದರು.

ಪಟ್ಟಣದ ಬಸವೇಶ್ವರ ಮಾರ್ಕೆಟ್‌ ಯಾರ್ಡ್‌ನಲ್ಲಿ ಚುನಾವಣಾ ಪ್ರಚಾರಾರ್ಥ ನಡೆದ ಭಹಿರಂಗ ಸಭೆಯಲ್ಲಿ ಅವರು
ಮಾತನಾಡಿದರು. 25 ವರ್ಷಗಳಿಂದ ಮುದ್ದೇಬಿಹಾಳ ಕ್ಷೇತ್ರವನ್ನು ಆಳ್ವಿಕೆ ಮಾಡಿರುವ ಸಿ.ಎಸ್‌. ನಾಡಗೌಡರು ಜನರ ಎದುರಿಗೆ ಅಭಿವೃದ್ಧಿ ಕುರಿತು ಮಾತನಾಡಲು ನೈತಿಕತೆ ಉಳಿಸಿಕೊಂಡಿಲ್ಲ. ಕ್ಷೇತ್ರದಲ್ಲಿಯ ಯಾವುದೇ ಒಂದು ಸಣ್ಣ ಸಮಾಜಕ್ಕೆ ಯಾವುದೇ ಕೊಡುಗೆಗಳನ್ನು ನೀಡಿಲ್ಲ. ಕ್ಷೇತ್ರದಲ್ಲಿ ರಸ್ತೆ, ಕುಡಿಯುವ ನೀರು, ಶೈಕ್ಷಣಿಕವಾಗಿಯೂ ಯಾವುದೇ ಅಭಿವೃದ್ದಿ ಮಾಡಿಲ್ಲ ಎಂದರು.

ಈ ಭಾಗದಲ್ಲಿರುವ ಎಲ್ಲ ರೈತರು ಮಳೆ ಕೊರತೆಯನ್ನು ಎದುರಿಸುತ್ತ ಸಾಗಿದ್ದಾರೆ. ಕೇವಲ 30 ಕಿ.ಮೀ. ಅಂತರದಲ್ಲಿ ನಾರಾಯಣಪುರ ಡ್ಯಾಂ ಇದ್ದರೂ ಕೂಡಾ ನಾಡಗೌಡರಿಂದ ನೀರಾವರಿ ಮಾಡಲು ಸಹ ಆಗಿಲ್ಲ. ಆದರೆ ನಾನು ದೇವರಹಿಪ್ಪರಗಿ ಕ್ಷೇತ್ರದಲ್ಲಿ ಫಿರಾಪುರ-ಬೂದಿಹಾಳ ಏತ ನೀರಾವರಿ ಯೋಜನೆ ರೂಪಿಸಿ ಅನುಷ್ಠಾನಗೊಳಿ ರೈತರ ಕಷ್ಟಕ್ಕೆ ಸ್ಪಂದಿಸುವಂತಹ ಕಾರ್ಯ ಮಾಡಿದ್ದೇನೆ. 

ಮುದ್ದೇಬಿಹಾಳ ಮತ್ತು ದೇವರಹಿಪ್ಪರಗಿ ಕ್ಷೇತ್ರದಲ್ಲಿ ಅನೇಕ ಸಾಮಾಜಿಕ ಕಾರ್ಯಗಳನ್ನು ಮಾಡಿದ್ದೇನೆ. ಸುಮಾರು 4 ಸಾವಿರ ಜನರಿಗೆ ಸಾಮೂಹಿಕ ವಿವಾಹ ಮಾಡಿದ್ದೇನೆ.
 
ನಾನು ಶ್ರೀಮಂತರಿಗಿಂತ ಅತಿಯಾಗಿ ಪ್ರೀತಿಸುವುದು ಬಡವರನ್ನು. ಆ ಬಡವರು ನನ್ನ ಮನೆಗೆ ಬಂದಾಗ ನನ್ನ ಕೈಲಾದ ಮಟ್ಟಿಗೆ ಸಹಾಯ ಮಾಡುತ್ತ ಬಂದಿದ್ದೇನೆ. ನಾಡಗೌಡರು ಬಡವರಿಗಾಗಿ, ದೀನ ದಲಿತರಿಗಾಗಿ, ತಾಲೂಕಿನ ಅಭಿವೃದ್ಧಿಗಾಗಿ ಯಾವ ಕೊಡೆಗೆಗಳನ್ನು ನೀಡಿದ್ದಾರೆಂಬುದನ್ನು ಯೋಚಿಸಿ ನೋಡಿದರೆ ಎಲ್ಲದರಲ್ಲಿಯೂ ಅವರು ಶೂನ್ಯ ಸಾಧನೆ ಮಾಡಿದ್ದಾರೆ. ಇಂತಹ ಬ್ರಿಟಿಷರ ಸಂಸ್ಕೃತಿ ಹೊಂದಿರುವ ಕಾಂಗ್ರೆಸ್‌ ಪಕ್ಷವನ್ನು ಮೇ 12ರಂದು ಅಬ್ಬರಿಸಲಿರುವ ಬಿಜೆಪಿ ಸುನಾಮಿಯ ಅಲೆಗೆ ಧೂಳಿಪಟ ಮಾಡಲು ಎಲ್ಲ ವರ್ತಕ ಬಂಧುಗಳು, ಕಾರ್ಯಕರು ಬಿಜೆಪಿಗೆ ಮತ ನೀಡುವ ಮೂಲಕ ಬೆಂಬಲಿಸಬೇಕೆಂದರು.
 
ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆರ್‌. ಎಸ್‌. ಪಾಟೀಲ (ಕೂಚಬಾಳ) ಮಾತನಾಡಿ, ದೇಶದೆಲ್ಲೆಡೆ ಬದಲಾವಣೆ ಗಾಳಿ ಬೀಸುತ್ತಿದೆ. ನರೇಂದ್ರ ಮೋದಿಜಿ ಅವರ ನೇತೃತ್ವದ ಸರ್ಕಾರ ಒಳ್ಳೆ ಆಡಳಿತ ನೀಡುವಲ್ಲಿ ಯಶಸ್ವಿಯಾಗಿದೆ. ಈ ಬಾರಿಯ ಚುನಾವಣೆಗೆ ಮುದ್ದೇಬಿಹಾಳ ಕ್ಷೇತ್ರದಿಂದ ಎ.ಎಸ್‌. ಪಾಟೀಲ (ನಡಹಳ್ಳಿ) ಅವರು ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ದಿಸಿದ್ದಾರೆ. ಎಲ್ಲ ಸಂಘಟಕರು ಅವರಿಗೆ ಬೆಂಬಲಿಸಬೇಕೆಂದು ಹೇಳಿದರು.

 ಎ.ಎಸ್‌. ಪಾಟೀಲ (ನಡಹಳ್ಳಿ) ಬಗ್ಗೆ ಇಲ್ಲ ಸಲ್ಲದ ಉಹಾಪೋಹಗಳನ್ನು ಕೆಲವರು ಎಬ್ಬಿಸುತ್ತಿದ್ದು ಅದಕ್ಕೆ ಯಾರು ಕಿವಿ ಗೊಡಬಾರದು. ನಡಹಳ್ಳಿ ಅವರು ಅಭಿವೃದ್ಧಿಗಾಗಿ ಹೋರಾಟಗಳನ್ನು ಮಾಡಿಯಶಸ್ಸನ್ನೂ ಕಂಡಿದ್ದಾರೆ. ಆದರೆ ನಾಡಗೌಡರು ಅಭಿವೃದ್ಧಿ ವಿಷಯದಲ್ಲಿ ಹೋರಾಟ ಮಾಡಿಲ್ಲ. ಕೇವಲ ಹಿಂಬಾಲಕರಿಗೆ ಮಣೆ ಹಾಕಿ ಅವರನ್ನು ಶ್ರೀಮಂತರನ್ನಾಗಿಸಿದ್ದಾರೆ. ಕಾಂಗ್ರೆಸ್‌ ಪಕ್ಷವು ಜಾತಿ ಜಾತಿಗಳ ನಡುವೆ ಧರ್ಮ ಧರ್ಮಗಳ ನಡುವೆ ವಿಷ ಬೀಜ ಬಿತ್ತಿ ದೇಶದ ಸಂಸ್ಕೃತಿ ನಾಶ ಮಾಡಲು ಹೊರಟಿದೆ. ಇದನ್ನು ಬದಾಲಾಯಿಸಿ ಸೌಹಾರ್ದ ತರಲು ಬಿಜೆಪಿ ಅಭ್ಯರ್ಥಿ ಎ.ಎಸ್‌. ಪಾಟೀಲ (ನಡಹಳ್ಳಿ) ಅವರಿಗೆ ಬೆಂಬಲಿಸಿ ಮತ ನೀಡಬೇಕೆಂದು ವಿನಂತಿಸಿದರು.

ಬಿಜೆಪಿ ಮುಖಂಡ ಎಂ.ಎಸ್‌. ಪಾಟೀಲ (ನಾಲತವಾಡ) ಮಾತನಾಡಿ, 25 ವರ್ಷಗಳಿಂದ ಮುದ್ದೇಬಿಹಾಳ ಕ್ಷೇತ್ರದ ಶಾಸಕರಾಗಿರುವ ನಾಡಗೌಡರು ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಮಾಡಿಲ್ಲ. ಬೇರೆ ಕ್ಷೇತ್ರಗಳಿಗೆ ಹೋಲಿಸಿದರೆ ಅತಿ ಹಿಂದುಳಿದ ಕ್ಷೇತ್ರ ಮುದ್ದೇಬಿಹಾಳ. ನಾಡಗೌಡರನ್ನು ಬದಲಿಸಲು ಒಂದು ಒಳ್ಳೆಯ ಅವಕಾಶ ಒದಗಿ ಬಂದಿದೆ. ಈ ಬಾರಿಗೆ ಬಿಜೆಪಿ ಅಭ್ಯರ್ಥಿ ಎ.ಎಸ್‌. ಪಾಟೀಲ (ನಡಹಳ್ಳಿ) ಅವರಿಗೆ ಬೆಂಬಲಿಸಿ ಅವರಿಗೆ ತಕ್ಕ ಪಾಠ ಕಲಿಸಬೇಕೆಂದರು. 

ವಿ.ಎ. ಹಜೇರಿ, ಎಸ್‌.ಪಿ. ಸರಶೆಟ್ಟಿ, ಎಸ್‌.ಎ. ಸರೂರ, ಮಹಾದೇವ ಕುಂಬಾರ, ಗಣ್ಯರಾದ ದತ್ತಾತ್ರೇಯ ಹೆಬಸೂರ, ಗೊಲ್ಲಾಳೆಪ್ಪ ಹಿರೇಗೌಡರ, ಚಿಂತಪ್ಪಗೌಡ ಯಾಳಗಿ, ಬಾಬು ಹಜೇರಿ, ವಾಸುದೇವ ಹೆಬಸೂರ, ಕೆ.ಎಂ. ಮಠ, ಮಲ್ಲು ದುಮಗುಂಡಿ, ಎಚ್‌.ಎಸ್‌.ಗೂಗಲ್ಲ, ವಿಶ್ವನಾಥ ಬಿದರಕುಂದಿ, ಪ್ರಭು ಬಿಳೇಭಾವಿ, ಯಂಕಣ್ಣ ಬಿಳೇಭಾವಿ, ಸುಭಾಷ್‌ ಗಾಣೂರ, ಚನಬಸು ದೇಸಾಯಿ, ಚನ್ನಬಸು ಸರಶೆಟ್ಟಿ, ಮುತ್ತು ಕಶೆಟ್ಟಿ, ಮಲ್ಲು ನಾಗರಾಳ, ನಾಗಪ್ಪ ಚುನಗುಡಿ ಇದ್ದರು. 

30ನೇ ವರ್ಷದಲ್ಲಿ ರಾಜಕೀಯ ಪ್ರವೇಶಿಸಿದ ನಾಡಗೌಡರಿಗೆ ಈಗ 60 ವರ್ಷವಾಗಿದೆ. 30 ವರ್ಷದ ರಾಜಕೀಯದಲ್ಲಿ ಕ್ಷೇತ್ರದ ಅಭಿವೃದ್ಧಿ ಮಾಡಲು ಅವರಿಂದ ಆಗಿಲ್ಲ. ಈ ಬಾರಿ ಅವರು ರಾಜಕೀಯವಾಗಿ ನಿವೃತ್ತಿ ಘೋಷಿಸಿಕೊಳ್ಳಬೇಕಿತ್ತು. ಅದನ್ನು ಅವರು ಮಾಡಲಿಲ್ಲ. ಅದಕ್ಕೆ ಈ ಬಾರಿ ಕ್ಷೇತ್ರದ ಜನತೆಯೇ ನಿವೃತ್ತಿಗೊಳಿಸಿ ಮನೆಗೆ ಕಳುಹಿಸಲು ಸಜ್ಜಾಗಿದ್ದಾರೆ.
 ಎ.ಎಸ್‌ .ಪಾಟೀಲ (ನಡಹಳ್ಳಿ) ಬಿಜೆಪಿ ಅಭ್ಯರ್ಥಿ

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.