Shettar ನಡೆಯಿಂದ ಕಾಂಗ್ರೆಸ್ ಗೆ ಹಾನಿಯಿಲ್ಲ, ಸವದಿ ಪಕ್ಷ ಬಿಡುವುದಿಲ್ಲ: ಎಂ.ಬಿ.ಪಾಟೀಲ್
Team Udayavani, Jan 26, 2024, 12:08 PM IST
ವಿಜಯಪುರ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿ ಸೇರ್ಪಡೆಯಿಂದ ಕಾಂಗ್ರೆಸ್ ಪಕ್ಷಕ್ಕೆ ಯಾವುದೇ ಹಾನಿ ಇಲ್ಲ. ಅಲ್ಲದೇ ಮಾಜಿ ಡಿಸಿಎಂ, ಶಾಸಕ ಲಕ್ಷ್ಮಣ ಸವದಿ ಶೆಟ್ಟರ ಹಾದಿಯಲ್ಲಿ ಸಾಗುವುದಿಲ್ಲ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಪ್ರತಿಕ್ರಿಯಿಸಿದ್ದಾರೆ.
ಗಣರಾಜ್ಯೋತ್ಸವ ಸಂದರ್ಭದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಸಚಿವ ಎಂ.ಬಿ.ಪಾಟೀಲ್, ಬಿಜೆಪಿ ಪಕ್ಷದಿಂದ ಜಗದೀಶ ಶೆಟ್ಟರ ಅವಮಾನಿತರಾಗಿದ್ದರು. ಆಗ ನಾನು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ರಣದೀಪ್ ಸಿಂಗ್ ಸುರ್ಜೆವಾಲಾ ಸೇರಿದಂತೆ ಹಲವರು ಜಗದೀಶ ಶೆಟ್ಟರ್ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಕರೆತರಲು ಶ್ರಮಿಸಿದ್ದೆವು. ವಿಧಾನಸಭೆ ಟಿಕೆಟ್ ಕೊಟ್ಟ ಬಳಿಕ ಸೋತರೂ ಅವರನ್ನು ಕಾಂಗ್ರೆಸ್ ಪಕ್ಷ ವಿಧಾನ ಪರಿಷತ್ ಶಾಸಕರಾಗಿ ಮಾಡಿತ್ತು. ಇಷ್ಟೆಲ್ಲ ಗೌರವ ನೀಡಿದರೂ ಏಕಾಏಕಿ ಬಿಜೆಪಿ ಸೇರ್ಪಡೆಯಾಗಿರುವುದು ಏಕೆಂದು ಗೊತ್ತಿಲ್ಲ ಎಂದರು.
ಜಗದೀಶ್ ಶೆಟ್ಟರ್ ನಡೆ ಬಗ್ಗೆ ನಾವು ಪ್ರತಿಕ್ರಿಯಿಸುವುದಕ್ಕಿಂತ ಜನರೇ ನಿರ್ಧಾರ ಮಾಡುತ್ತಾರೆ. ಜನ ಏನನ್ನುತಾರೆ ಎನ್ನುವುದು ಅವರೇ ತಿಳಿದುಕೊಳ್ಳಲಿ ಎಂದರು.
ಜಗದೀಶ ಶೆಟ್ಟರ್ ಅವರಿಗೆ ಬಿಜೆಪಿ ಏನು ಹೇಳಿದೆ, ಏನು ಭರವಸೆ ನೀಡಿದೆ, ಯಾವ ಒತ್ತಡ ಹಾಕಿದೆ ಎಂಬುದು ಗೊತ್ತಿಲ್ಲ. ವಾಸ್ತವ ಏನಿದೆ ಎಂಬುದನ್ನು ಶೆಟ್ಟರ್ ಅವರೇ ಬಹಿರಂಗ ಮಾಡಬೇಕು ಎಂದರು.
ಒಬ್ಬರು ಹೋಗಿದ್ದಾರೆ ಎಂದ ಮಾತ್ರಕ್ಕೆ ಮತ್ತೊಬ್ಬರ ಹೆಸರನ್ನು ತಳುಕು ಹಾಕುವುದು ತರವಲ್ಲ. ಲಕ್ಷ್ಮಣ ಸವದಿ ಕೂಡ ಬಿಜೆಪಿ ಸೇರುತ್ತಾರೆ ಎಂಬ ಪ್ರಶ್ನೆಗೆ ಉತ್ತರಿಸಿದರು.
ಯಾರ ಬಗ್ಗೆಯೂ ಈ ರೀತಿ ಇಲ್ಲ ಸಲ್ಲದ ಮಾತನಾಡಬಾರದು. ಲಕ್ಷ್ಮಣ ಸವದಿ ಉಪ ಮುಖ್ಯಮಂತ್ರಿಯಾಗಿದ್ದವರು. ಜಗದೀಶ ಶೆಟ್ಟರ ಮಾಡಿದಂತೆ ಸವದಿ ಮಾಡುದಿಲ್ಲ ಎಂದು ವಿಶ್ವಾಸವಿದೆ ಎಂದು ಎಂ.ಬಿ.ಪಾಟೀಲ ವಿಶ್ವಾಸ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ
Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ