ಕನಕದಾಸ ಬಡಾವಣೆ-ಹೆದಾರಿ ಸಂಪರ್ಕಕ್ಕೆ ಮೇಲ್ಸೇತುವೆ ನಿರ್ಮಾಣ


Team Udayavani, Jan 1, 2022, 5:54 PM IST

21propject

ವಿಜಯಪುರ: ಕನಕದಾಸ ಬಡಾವಣೆಯಿಂದ ರಾಷ್ಟ್ರೀಯ ಹೆದ್ದಾರಿ-51ಕ್ಕೆ ನೇರ ಸಂಪರ್ಕ ಕಲ್ಪಿಸುವ ರೈಲ್ವೇ ಮೇಲ್ಸೇತುವೆ ನಿರ್ಮಾಣಕ್ಕೆ ಅನುಮತಿ ನೀಡುವ ಕುರಿತು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ರೈಲ್ವೇ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.

ಸಾರ್ವಜನಿಕ ಹಿತಾಸಕ್ತಿಯ ಸದರಿ ಬೇಡಿಕೆಗೆ ನಿಯಮದ ಪ್ರಕಾರ ಒಪ್ಪಿಗೆ ನೀಡುವುದಾಗಿ ರೈಲ್ವೆ ಅಕಾರಿಗಳು ಭರವಸೆ ನೀಡಿದ್ದಾರೆ. ಹುಬ್ಬಳ್ಳಿಯ ನೈರುತ್ಯ ರೈಲ್ವೆ ಮುಖ್ಯಸ್ಥ ಜನರಲ್‌ ಮ್ಯಾನೇಜರ ಸಂಜೀವ ಕಿಶೋರ ಅವರನ್ನು ಭೇಟಿ ಮಾಡಿ ಮನವಿ ಮಾಡಿದ ಶಾಸಕ ಯತ್ನಾಳ ಅವರು, ನಗರದ ಜಿಪಂ ಹತ್ತಿರ ಕನಕದಾಸ ಬಡಾವಣೆ ಮೂಲಕ ಬಿಎಸ್‌ಎನ್‌ಎಲ್‌ ಸಿಬ್ಬಂದಿ ವಸತಿ ಗೃಹದಿಂದ ರೈಲ್ವೆ ಹಳಿ ದಾಟಿ ರಾಷ್ಟ್ರೀಯ ಹೆದ್ದಾರಿ ನಂ. 51ಕ್ಕೆ ಸಂಪರ್ಕ ಕಲ್ಪಿಸುವ ಅಗತ್ಯವಿದೆ. ನಕ್ಷೆಯ ಪ್ರಕಾರ ರಸ್ತೆ ಇದ್ದು, ಸದರಿ ರಸ್ತೆಯ ಮಧ್ಯದಲ್ಲಿ ನೈಸರ್ಗಿಕ ಗುಡ್ಡಗಳ 4 ಮೀಟರ್‌ ಕೆಳಗೆ ರೈಲ್ವೆ ಹಳಿ ಇದೆ. ಸದರಿ ಮಾರ್ಗದಲ್ಲಿ ಲೋಕೋಪಯೋಗಿ ಇಲಾಖೆಯಿಂದ ಮೇಲ್ಸೇತುವೆ ನಿರ್ಮಿಸಲು ರೈಲ್ವೇ ಇಲಾಖೆಯ ಅನುಮತಿ ಕೋರಿದರು.

ಸದರಿ ರೈಲ್ವೇ ಹಳಿಯ ಪಶ್ಚಿಮ ಭಾಗದಲ್ಲಿ ಸಾಕಷ್ಟು ಬಡಾವಣೆಗಳ ಜೊತೆಗೆ ಸರಕಾರಿ ಕಚೇರಿಗಳಾದ ಜಿಲ್ಲಾಡಳಿತ ಭವನ, ಜಿಲ್ಲಾ ಪಂಚಾಯತ, ತಹಶೀಲ್ದಾರ್‌ ಕಚೇರಿ, ಸಮಾಜ ಕಲ್ಯಾಣ, ನಗರಾಭಿವೃದ್ಧಿ ಪ್ರಾಧಿಕಾರ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸೇರಿದಂತೆ ಅನೇಕ ಸರಕಾರಿ ಕಚೇರಿಗಳೂ ಇವೆ ಎಂದು ಮೇಲ್ಸೇತುವೆ ನಿರ್ಮಾಣದ ಅಗತ್ಯವನ್ನು ಮನವರಿಕೆ ಮಾಡಿಕೊಟ್ಟಿದ್ದಾರೆ. ಇದಲ್ಲದೇ ಈ ಪರಿಸರದಲ್ಲಿ ಮಂಗಲ ಕಾರ್ಯಾಲಯ, ಸರಕಾರಿ-ಖಾಸಗಿ ಶಾಲಾ-ಕಾಲೇಜುಗಳಿವೆ.

ಪೂರ್ವ ಭಾಗಗದಲ್ಲಿ ಸಾಕಷ್ಟು ಬಡಾವಣೆಗಳ ಮನೆಗಳು, ವಾಣಿಜ್ಯ ಮತ್ತು ವಿವಿಧ ಕಂಪನಿಗಳ ವಾಹನಗಳ ಶೊರೋಂಗಳು, ಹೈಪರ್‌ ಮಾರ್ಕೇಟ್‌ ಹಾಗೂ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡೇ ಇವೆ. ಇದರಿಂದ ಪೂರ್ವ-ಪಶ್ಚಿಮ ಭಾಗದ ಜನರಿಗೆ ಪರಸ್ಪರ ಸುಲಭವಾಗಿ ಸಂಪರ್ಕಕ್ಕೆ ಅವಕಾಶವಾಗುತ್ತದೆ. ಮೇಲ್ಸೇತುವೆ ಇಲ್ಲದ ಕಾರಣ ಇದೀಗ 7 ಕಿ.ಮೀಟರ್‌ ಸುತ್ತುವರಿದು ಸಂಚರಿಸಬೇಕಿದೆ. ಸಮೀಪದ ರೈಲ್ವೇ ಹಳಿಗೆ ನೈಸರ್ಗಿಕ ಪರಿಸರದಲ್ಲಿ ಮೇಲ್ಸೇತುವೆ ನಿರ್ಮಿಸುವುದರಿಂದ ಸಮಸ್ಯೆ ಬಗೆಹರೆಯಲಿದೆ. ಸಂಚಾರ ದಟ್ಟಣೆಯೂ ಕಡಿಮೆ ಆಗಲಿದೆ. ರಾಷ್ಟ್ರೀಯ ಇಂಧನದ ಉಳಿತಾಯದ ಮೂಲಕ ರಾಷ್ಟ್ರೀಯ ಅಪವ್ಯಯವೂ ತಪ್ಪಲಿದೆ ಎಂದು ವಿವರಿಸಿದ್ದಾರೆ.

ಮನವಿಗೆ ಸ್ಪಂದಿಸಿರುವ ನೈರುತ್ಯ ರೈಲ್ವೆ ಜನರಲ್‌ ಮ್ಯಾನೇಜರ್‌ ಕಿಶೋರ ಅವರು, ಲೋಕೋಪಯೋಗಿ ಇಲಾಖೆ ಅಂದಾಜು ಪತ್ರಿಕೆ, ನೀಲ ನಕ್ಷೆ ಸಹಿತ ಸಮಗ್ರ ಯೋಜನಾ ವರದಿಯ ಪ್ರಸ್ತಾವನೆ ಸಲ್ಲಿಸಿದಲ್ಲಿ ಸಾರ್ವಜನಿಕ ಹಿತದೃಷ್ಟಿಯಿ ಸದರಿ ಯೋಜನೆಗೆ ಅನುಮತಿಸುವುದಾಗಿ ಭರವಸೆ ನೀಡಿದ್ದಾರೆ.

ಟಾಪ್ ನ್ಯೂಸ್

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.