ಗ್ರಾಮಾಭಿವೃದ್ಧಿಗೆ ಸಹಕಾರ ಮುಖ್ಯ
Team Udayavani, Oct 11, 2020, 7:00 PM IST
ಹೂವಿನಹಿಪ್ಪರಗಿ: ಗ್ರಾಮೀಣ ಪ್ರದೇಶಗಳ ಸವರತೋಮುಖ ಅಭಿವೃದ್ಧಿಗೆ ಸಾರ್ವಜನಿಕರ ಸಹಕಾರ ಅತ್ಯಗತ್ಯ ಎಂದು ದೇವರಹಿಪ್ಪರಗಿ ಕ್ಷೇತ್ರದ ಜೆಡಿಎಸ್ ಧುರೀಣ ರಾಜುಗೌಡ ಪಾಟೀಲ ಕುದರಿ ಸಾಲವಾಡಗಿ ಹೇಳಿದರು.
ಬಸವನಬಾಗೇವಾಡಿ ತಾಲೂಕಿನ ಕುದರಿ ಸಾಲವಾಡಗಿ ಗ್ರಾಮದಲ್ಲಿ ನವೀಕರಿಸಲ್ಪಟ್ಟ ಗ್ರಾಮ ಪಂಚಾಯತ್ ಕಟ್ಟಡ ಉದ್ಘಾಟನೆ ಹಾಗೂ ಘನತ್ಯಾಜ್ಯ ವಿಲೇವಾರಿ ವಾಹನ ಚಾಲನೆ ಮತ್ತು ಪರಿಕರಣಗಳ ವಿತರಣಾ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಗ್ರಾಮಸ್ಥರ ಸಹಕಾರದಿಂದ ಕುದರಿ ಸಾಲವಾಡಗಿ ಪಂಚಾಯತ್ ಸತತವಾಗಿ ಎರಡು ಬಾರಿ ಗಾಂ ಧಿ ಗ್ರಾಮ ಪುರಸ್ಕೃತಗೊಂಡಿದ್ದು ಹೆಮ್ಮೆ ಸಂಗತಿಯಾಗಿದೆ. ಸರಕಾರ ಗ್ರಾಮೀಣ ಭಾಗದ ಅಭಿವೃದ್ಧಿಗಾಗಿ ಸಾಕಷ್ಟು ಅನುದಾನ ಬಿಡುಗಡೆ ಮಾಡುವ ಮೂಲಕ ವಿವಿಧ ಯೋಜನೆಗಳನ್ನು ಜಾರಿಗೊಳಿಸುತ್ತಿದೆ ಎಂದರು.
ಸರಕಾರದ ಯೋಜನೆಗಳು ಯಶಸ್ವಿಯಾಗಬೇಕಾದರೆ ಅಧಿಕಾರಿಗಳ ಇಚ್ಛಾಶಕ್ತಿ ಪ್ರಮುಖವಾಗಿರುತ್ತದೆ. ಇದಕ್ಕೆಲ್ಲ ಪೂರಕವೆಂಬಂತೆ ಕುದರಿ ಸಾಲವಾಡಗಿ ಗ್ರಾಪಂ ಅಭಿವೃದ್ಧಿ ಅಧಿಕಾರಿ ಸೇರಿದಂತೆ ಎಲ್ಲ ಸಿಬ್ಬಂದಿ ವರ್ಗ ಶಿಸ್ತಿನಿಂದ ಕಾರ್ಯ ನಿರ್ವಹಿಸುವ ಮೂಲಕ ಇತರ ಪಂಚಾಯತ್ ಅಧಿ ಕಾರಿಗಳಿಗೆ ಮಾದರಿಯಾಗಿದ್ದಾರೆ ಎಂದು ಬಣ್ಣಿಸಿದರು.
ಇಂದು ಪಂಚಾಯತ್ನಿಂದ ಘನತ್ಯಾಜ್ಯ ಸಂಗ್ರಹಿಸಲು ಬಿಪಿಎಲ್ ಕಾರ್ಡ್ ಹೊಂದಿದ ಹಾಗೂ ಬಡವರಿಗೆ ಎರಡು ಬಕೆಟ್ ನೀಡುತ್ತಿದ್ದಾರೆ. ಒಂದರಲ್ಲಿ ಹಸಿ ಕಸ ಇನ್ನೊಂದರಲ್ಲಿ ಒಣ ಕಸ ಹಾಕಬೇಕು. ಬೆಳಗ್ಗೆ ಘನತ್ಯಾಜ್ಯ ವಿಲೇವಾರಿ ವಾಹನ ನಿಮ್ಮ ಮನೆ ಮುಂದೆ ಬರುತ್ತದೆ. ನೀವು ಸಂಗ್ರಹಿಸಿದ ಕಸವನ್ನು ವಾಹನಕ್ಕೆ ಹಾಕುವ ಮೂಲಕ ಗ್ರಾಮದ ಸ್ವತ್ಛತೆಗೆ ಆದ್ಯತೆ ನೀಡಬೇಕು ಎಂದು ಹೇಳಿದರು.
ಜಿಲ್ಲಾ ಕೃಷಿಕ ಸಮಾಜ ಅಧ್ಯಕ್ಷ ಬಿ.ಎಲ್. ಪಾಟೀಲ ಮಾತನಾಡಿ, ಎರಡು ಬಾರಿ ಸತತವಾಗಿ ಗಾಂಧಿ ಪುರಸ್ಕಾರ ಮೂಲಕ ಕುದರಿ ಸಾಲವಾಡಗಿ ಪಂಚಾಯತ್ ತಾಲೂಕಿನಲ್ಲಿಯೇ ಮಾದರಿಯಾಗಿ ಹೊರ ಹೊಮ್ಮಿದೆ. ಗ್ರಾಮದ ಅಭಿವೃದ್ಧಿಗೆ ಪಂಚಾಯತ್ ಅಧಿ ಕಾರಿಗಳೊಂದಿಗೆ ಗ್ರಾಮಸ್ಥರು ಕೈ ಜೋಡಿಸಬೇಕು. ಕೊವೀಡ್-19 ಹೊಡೆದೊಡಿಸುವಲ್ಲಿ ಆಶಾ, ಅಂಗನವಾಡಿ ಕಾರ್ಯಕರ್ತೆಯರು ತಮ್ಮ ಜೀವದ ಹಂಗುತೊರೆದು ಹೋರಾಡುತ್ತಿದ್ದಾರೆ. ಅಂತಹ ಮಹನೀಯರನ್ನು ಇಲ್ಲಿ ಸನ್ಮಾನಿಸುತ್ತಿರುವ ಕಾರ್ಯ ಶ್ಲಾಘನೀಯ ಎಂದರು.ಅರಣ್ಯಾಧಿಕಾರಿ ಎ.ಎಸ್. ಪಾಕಿ ಅಧ್ಯಕ್ಷತೆ ವಹಿಸಿದ್ದರು. ಮುಖಂಡ ಬಸವರಾಜ ದೇಸಾಯಿ, ಎಸ್.ಬಿ. ಪಾಟೀಲ, ಎ.ಬಿ. ಪಾಟೀಲ, ತಾಪಂ ಸದಸ್ಯ ಜಾಕೀರ್ ಹುಸೇನ್ ಶಿವಣಗಿ, ದೇವಮ್ಮ ಹಚಡದ, ಪಿ.ಎಸ್. ಲಗಳಿ, ಬೆಳ್ಳೆಪ್ಪ ಜಕ್ಕೆನಾಳ, ಭೀಮನಗೌಡ ಹಚಡದ, ಶೇಖರಗೌಡ ಪಾಟೀಲ, ರುದ್ರಗೌಡ ಹಚಡದ, ಗುರುನಗೌಡ ಪಾಟೀಲ, ಪಿಡಿಒ ಬಿ.ಎಸ್.ಬಡಿಗೇರ ವೇದಿಕೆಯಲ್ಲಿದ್ದರು. ಪಂಚಾಯತ್ ಕಾರ್ಯದರ್ಶಿ ಎನ್.ಶೈಲಜಾ ಸ್ವಾಗತಿಸಿದರು. ಶಿಕ್ಷಕ ಎಸ್.ಬಿ. ಬಾಗೇವಾಡಿ ನಿರೂಪಿಸಿದರು. ಎಂ.ವಿ. ಅಣ್ಣಪ್ಪನವರ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ
Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್ 500 ಕೋಟಿ ರೂ. ಖರ್ಚು’
Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ
2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ
UPSC Result: ವಿಜಯಪುರದ ವಿಜೇತಾಗೆ ಯುಪಿಎಸ್ಸಿಯಲ್ಲಿ 100ನೇ ರ್ಯಾಂಕ್
MUST WATCH
ಹೊಸ ಸೇರ್ಪಡೆ
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Drama: ಪ್ರೇಕ್ಷಕರ ಮನಗೆದ್ದ “ಸೀತಾರಾಮ ಚರಿತಾ”
Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ