ಗ್ರಾಮಾಭಿವೃದ್ಧಿಗೆ ಸಹಕಾರ ಮುಖ್ಯ


Team Udayavani, Oct 11, 2020, 7:00 PM IST

vp-tdy-1

ಹೂವಿನಹಿಪ್ಪರಗಿ: ಗ್ರಾಮೀಣ ಪ್ರದೇಶಗಳ ಸವರತೋಮುಖ ಅಭಿವೃದ್ಧಿಗೆ ಸಾರ್ವಜನಿಕರ ಸಹಕಾರ ಅತ್ಯಗತ್ಯ ಎಂದು ದೇವರಹಿಪ್ಪರಗಿ ಕ್ಷೇತ್ರದ ಜೆಡಿಎಸ್‌ ಧುರೀಣ ರಾಜುಗೌಡ ಪಾಟೀಲ ಕುದರಿ ಸಾಲವಾಡಗಿ ಹೇಳಿದರು.

ಬಸವನಬಾಗೇವಾಡಿ ತಾಲೂಕಿನ ಕುದರಿ ಸಾಲವಾಡಗಿ ಗ್ರಾಮದಲ್ಲಿ ನವೀಕರಿಸಲ್ಪಟ್ಟ ಗ್ರಾಮ ಪಂಚಾಯತ್‌ ಕಟ್ಟಡ ಉದ್ಘಾಟನೆ ಹಾಗೂ ಘನತ್ಯಾಜ್ಯ ವಿಲೇವಾರಿ ವಾಹನ ಚಾಲನೆ ಮತ್ತು ಪರಿಕರಣಗಳ ವಿತರಣಾ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಗ್ರಾಮಸ್ಥರ ಸಹಕಾರದಿಂದ ಕುದರಿ ಸಾಲವಾಡಗಿ ಪಂಚಾಯತ್‌ ಸತತವಾಗಿ ಎರಡು ಬಾರಿ ಗಾಂ ಧಿ ಗ್ರಾಮ ಪುರಸ್ಕೃತಗೊಂಡಿದ್ದು ಹೆಮ್ಮೆ ಸಂಗತಿಯಾಗಿದೆ. ಸರಕಾರ ಗ್ರಾಮೀಣ ಭಾಗದ ಅಭಿವೃದ್ಧಿಗಾಗಿ ಸಾಕಷ್ಟು ಅನುದಾನ ಬಿಡುಗಡೆ ಮಾಡುವ ಮೂಲಕ ವಿವಿಧ ಯೋಜನೆಗಳನ್ನು ಜಾರಿಗೊಳಿಸುತ್ತಿದೆ ಎಂದರು.

ಸರಕಾರದ ಯೋಜನೆಗಳು ಯಶಸ್ವಿಯಾಗಬೇಕಾದರೆ ಅಧಿಕಾರಿಗಳ ಇಚ್ಛಾಶಕ್ತಿ ಪ್ರಮುಖವಾಗಿರುತ್ತದೆ. ಇದಕ್ಕೆಲ್ಲ ಪೂರಕವೆಂಬಂತೆ ಕುದರಿ ಸಾಲವಾಡಗಿ ಗ್ರಾಪಂ ಅಭಿವೃದ್ಧಿ ಅಧಿಕಾರಿ ಸೇರಿದಂತೆ ಎಲ್ಲ ಸಿಬ್ಬಂದಿ ವರ್ಗ ಶಿಸ್ತಿನಿಂದ ಕಾರ್ಯ ನಿರ್ವಹಿಸುವ ಮೂಲಕ ಇತರ ಪಂಚಾಯತ್‌ ಅಧಿ ಕಾರಿಗಳಿಗೆ ಮಾದರಿಯಾಗಿದ್ದಾರೆ ಎಂದು ಬಣ್ಣಿಸಿದರು.

ಇಂದು ಪಂಚಾಯತ್‌ನಿಂದ ಘನತ್ಯಾಜ್ಯ ಸಂಗ್ರಹಿಸಲು ಬಿಪಿಎಲ್‌ ಕಾರ್ಡ್‌ ಹೊಂದಿದ ಹಾಗೂ ಬಡವರಿಗೆ ಎರಡು ಬಕೆಟ್‌ ನೀಡುತ್ತಿದ್ದಾರೆ. ಒಂದರಲ್ಲಿ ಹಸಿ ಕಸ ಇನ್ನೊಂದರಲ್ಲಿ ಒಣ ಕಸ ಹಾಕಬೇಕು. ಬೆಳಗ್ಗೆ ಘನತ್ಯಾಜ್ಯ ವಿಲೇವಾರಿ ವಾಹನ ನಿಮ್ಮ ಮನೆ ಮುಂದೆ ಬರುತ್ತದೆ. ನೀವು ಸಂಗ್ರಹಿಸಿದ ಕಸವನ್ನು ವಾಹನಕ್ಕೆ ಹಾಕುವ ಮೂಲಕ ಗ್ರಾಮದ ಸ್ವತ್ಛತೆಗೆ ಆದ್ಯತೆ ನೀಡಬೇಕು ಎಂದು ಹೇಳಿದರು.

ಜಿಲ್ಲಾ ಕೃಷಿಕ ಸಮಾಜ ಅಧ್ಯಕ್ಷ ಬಿ.ಎಲ್‌. ಪಾಟೀಲ ಮಾತನಾಡಿ, ಎರಡು ಬಾರಿ ಸತತವಾಗಿ ಗಾಂಧಿ  ಪುರಸ್ಕಾರ ಮೂಲಕ ಕುದರಿ ಸಾಲವಾಡಗಿ ಪಂಚಾಯತ್‌ ತಾಲೂಕಿನಲ್ಲಿಯೇ ಮಾದರಿಯಾಗಿ ಹೊರ ಹೊಮ್ಮಿದೆ. ಗ್ರಾಮದ ಅಭಿವೃದ್ಧಿಗೆ ಪಂಚಾಯತ್‌ ಅಧಿ ಕಾರಿಗಳೊಂದಿಗೆ ಗ್ರಾಮಸ್ಥರು ಕೈ ಜೋಡಿಸಬೇಕು. ಕೊವೀಡ್‌-19 ಹೊಡೆದೊಡಿಸುವಲ್ಲಿ ಆಶಾ, ಅಂಗನವಾಡಿ ಕಾರ್ಯಕರ್ತೆಯರು ತಮ್ಮ ಜೀವದ ಹಂಗುತೊರೆದು ಹೋರಾಡುತ್ತಿದ್ದಾರೆ. ಅಂತಹ ಮಹನೀಯರನ್ನು ಇಲ್ಲಿ ಸನ್ಮಾನಿಸುತ್ತಿರುವ ಕಾರ್ಯ ಶ್ಲಾಘನೀಯ ಎಂದರು.ಅರಣ್ಯಾಧಿಕಾರಿ ಎ.ಎಸ್‌. ಪಾಕಿ ಅಧ್ಯಕ್ಷತೆ ವಹಿಸಿದ್ದರು. ಮುಖಂಡ ಬಸವರಾಜ ದೇಸಾಯಿ, ಎಸ್‌.ಬಿ. ಪಾಟೀಲ, ಎ.ಬಿ. ಪಾಟೀಲ, ತಾಪಂ ಸದಸ್ಯ ಜಾಕೀರ್‌ ಹುಸೇನ್‌ ಶಿವಣಗಿ, ದೇವಮ್ಮ ಹಚಡದ, ಪಿ.ಎಸ್‌. ಲಗಳಿ, ಬೆಳ್ಳೆಪ್ಪ ಜಕ್ಕೆನಾಳ, ಭೀಮನಗೌಡ ಹಚಡದ, ಶೇಖರಗೌಡ ಪಾಟೀಲ, ರುದ್ರಗೌಡ ಹಚಡದ, ಗುರುನಗೌಡ ಪಾಟೀಲ, ಪಿಡಿಒ ಬಿ.ಎಸ್‌.ಬಡಿಗೇರ ವೇದಿಕೆಯಲ್ಲಿದ್ದರು. ಪಂಚಾಯತ್‌ ಕಾರ್ಯದರ್ಶಿ ಎನ್‌.ಶೈಲಜಾ ಸ್ವಾಗತಿಸಿದರು. ಶಿಕ್ಷಕ ಎಸ್‌.ಬಿ. ಬಾಗೇವಾಡಿ ನಿರೂಪಿಸಿದರು. ಎಂ.ವಿ. ಅಣ್ಣಪ್ಪನವರ ವಂದಿಸಿದರು.

Ad

ಟಾಪ್ ನ್ಯೂಸ್

ಮೂಡುಬಿದಿರೆಯ ಮಹಿಳೆ ನಾಪತ್ತೆ; ಪ್ರಕರಣ ದಾಖಲು

ಮೂಡುಬಿದಿರೆಯ ಮಹಿಳೆ ನಾಪತ್ತೆ; ಪ್ರಕರಣ ದಾಖಲು

Davanagere: RTO ಹೆಸರಲ್ಲಿ ನಾಗರಿಕರ ಹಣ ದೋಚಲು ತಂತ್ರ ರೂಪಿಸಿ ಸೈಬರ್ ವಂಚಕರು

Davanagere: RTO ಹೆಸರಲ್ಲಿ ನಾಗರಿಕರ ಹಣ ದೋಚಲು ತಂತ್ರ ರೂಪಿಸಿ ಸೈಬರ್ ವಂಚಕರು

ಏಷ್ಯಾದ ಅತ್ಯಂತ ಹಿರಿಯ ಆನೆ ‘ವತ್ಸಲ’ ಸಾವು…

Oldest Elephant: ಬದುಕಿನ ಯಾನ ನಿಲ್ಲಿಸಿದ ವತ್ಸಲಾ.. ಏಷ್ಯಾದ ಅತ್ಯಂತ ಹಿರಿಯ ಆನೆ ಇನ್ನಿಲ್ಲ

Rekha-Gupta-CM

ದಿಲ್ಲಿ ಸಿಎಂ ಅಧಿಕೃತ ನಿವಾಸ ನವೀಕರಣ ಟೆಂಡರ್‌ ರದ್ದುಗೊಳಿಸಿದ ಸರಕಾರ

ಸಿಎಂ ನೇತೃತ್ವದ ನಿಯೋಗದಿಂದ ರಕ್ಷಣಾ ಸಚಿವರ ಭೇಟಿ, 2 ಡಿಫೆನ್ಸ್‌ ಕಾರಿಡಾರ್‌ಗೆ ಮನವಿ

ಸಿಎಂ ನೇತೃತ್ವದ ನಿಯೋಗದಿಂದ ರಕ್ಷಣಾ ಸಚಿವರ ಭೇಟಿ, 2 ಡಿಫೆನ್ಸ್‌ ಕಾರಿಡಾರ್‌ಗೆ ಮನವಿ

ರಾಜ್ಯದ ಮನವಿಗಳಿಗೆ ಕೇಂದ್ರ ರಕ್ಷಣಾ ಸಚಿವರ ಸಕಾರಾತ್ಮಕ ಸ್ಪಂದನೆ: ಸಿದ್ದರಾಮಯ್ಯ

ರಾಜ್ಯದ ಮನವಿಗಳಿಗೆ ಕೇಂದ್ರ ರಕ್ಷಣಾ ಸಚಿವರ ಸಕಾರಾತ್ಮಕ ಸ್ಪಂದನೆ: ಸಿದ್ದರಾಮಯ್ಯ

Aranthodu: ಆಕಸ್ಮಿಕ ಬೆಂಕಿ… ಹೊತ್ತಿ ಉರಿದ ಗ್ರಾಮ ಪಂಚಾಯತ್‌ನ ಘನತ್ಯಾಜ್ಯ ಘಟಕ

Aranthodu: ಆಕಸ್ಮಿಕ ಬೆಂಕಿ… ಹೊತ್ತಿ ಉರಿದ ಗ್ರಾಮ ಪಂಚಾಯತ್‌ನ ಘನತ್ಯಾಜ್ಯ ಘಟಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18

Muddebihal: ಆಕಾಶದತ್ತ ಮುಖ ಮಾಡಿದ ಅನ್ನದಾತ

ಜಿಲ್ಲಾಧಿಕಾರಿ ಟಿ.ಭೂಬಾಲನ್ ಮತ್ತು ನೂತನ ಜಿಲ್ಲಾಧಿಕಾರಿ ಡಾ.ಆನಂದ‌ ಕೆ.

Vijayapura: ಜಿಲ್ಲಾಧಿಕಾರಿ ಟಿ.ಭೂಬಾಲನ್ ವರ್ಗಾವಣೆ

18

Nalatawad ಇದ್ದೂ ಇಲ್ಲದಂತಾಗಿದೆ ದೋಬಿಘಾಟ್‌

17

Vijayapura: ಸ್ನಾತಕೋತ್ತರ ಕೇಂದ್ರಕ್ಕೆ ಬೇಕಿದೆ ಕಾಯಕಲ್ಪ

19

Vijayapura: ಖಾಸಗಿ ಶಾಲೆ-ತರಗತಿ: ವಿಜಯಪುರದ್ದೇ ಸಿಂಹಪಾಲು

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

ಮೂಡುಬಿದಿರೆಯ ಮಹಿಳೆ ನಾಪತ್ತೆ; ಪ್ರಕರಣ ದಾಖಲು

ಮೂಡುಬಿದಿರೆಯ ಮಹಿಳೆ ನಾಪತ್ತೆ; ಪ್ರಕರಣ ದಾಖಲು

Davanagere: RTO ಹೆಸರಲ್ಲಿ ನಾಗರಿಕರ ಹಣ ದೋಚಲು ತಂತ್ರ ರೂಪಿಸಿ ಸೈಬರ್ ವಂಚಕರು

Davanagere: RTO ಹೆಸರಲ್ಲಿ ನಾಗರಿಕರ ಹಣ ದೋಚಲು ತಂತ್ರ ರೂಪಿಸಿ ಸೈಬರ್ ವಂಚಕರು

3

Kundapura: ಹೊಟೇಲ್‌ನಲ್ಲಿ ಹ*ಲ್ಲೆ; ಪ್ರಕರಣ ದಾಖಲು

24

Udyavara: ಕಂಟೈನರ್‌ಗೆ ಪಿಕಪ್‌ ಢಿಕ್ಕಿ; ಓರ್ವ ಸಾವು

4

Sullia: ವಿದ್ಯುತ್‌ ಶಾಕ್‌; ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.