ಸುವ್ಯವಸ್ಥಿತ ಚುನಾವಣೆಗೆ ಸ್ಪರ್ಧಿಗಳ ಸಹಕಾರ ಅಗತ್ಯ


Team Udayavani, Nov 29, 2021, 4:51 PM IST

21election

ವಿಜಯಪುರ: ಸ್ಥಳೀಯ ಸಂಸ್ಥೆಗಳಿಂದ ನಡೆಯುತ್ತಿರುವ ಮೇಲ್ಮನೆಯ ಚುನಾವಣೆಯಲ್ಲಿ ವಿಜಯಪುರ ಕ್ಷೇತ್ರದಿಂದ ಸ್ಪರ್ಧಿಸಿರುವ ಎಲ್ಲ ಅಭ್ಯರ್ಥಿಗಳು ತಮಗೆ ನೀಡಿದ ಗುರುತಿನ ಚೀಟಿಗಳನ್ನು ಕೌಂಟಿಂಗ್‌ ಮುಗಿಯುವವರೆಗೂ ಸುರಕ್ಷಿತವಾಗಿ ಇರಿಸಿಕೊಳ್ಳಬೇಕು ಎಂದು ಚುನಾವಣಾಧಿಕಾರಿ ಸುನೀಲಕುಮಾರ ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ವಿಜಯಪುರ-ಬಾಗಲಕೋಟೆ ವಿಧಾನ ಪರಿಷತ್‌ ಚುನಾವಣೆಗೆ ಸಂಬಂಧಪಟ್ಟಂತೆ ಸ್ಪರ್ಧಿಗಳು ಹಾಗೂ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಪರಿಷ್ಕೃತಗೊಂಡು ಚುನಾವಣಾ ಆಯೋಗದಿಂದ ಅಂತಿಮವಾಗಿ 411 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ ಎಂದರು.

ಅಂತಿಮವಾಗಿ ಕಣದಲ್ಲಿ ಏಳು ಜನ ಅಭ್ಯರ್ಥಿಗಳು ಉಳಿದಿದ್ದು ಸುವ್ಯವಸ್ಥಿತ ಚುನಾವಣೆಗೆ ಎಲ್ಲ ಅಭ್ಯರ್ಥಿಗಳು ಹಾಗೂ ಅವರ ಏಜೆಂಟರು ಚುನಾವಣೆ ಸಹಕರಿಸಬೇಕೆಂದು ಹೇಳಿದರು.

ಅದರಂತೆ ಕೋವಿಡ್‌ ಹಿನ್ನೆಲೆಯಲ್ಲಿ ಚುನಾವಣಾ ಪ್ರಚಾರ ಕಾರ್ಯದಲ್ಲಿ 500ಕ್ಕಿಂತ ಹೆಚ್ಚಿನ ಜನ ಸೇರುವಂತಿಲ್ಲ ಎಂದು ನಿರ್ದೇಶನವಿದ್ದು, ಇದರೊಂದಿಗೆ ಮಾಸ್ಕ್, ಸ್ಯಾನಿಟೈಸರ್‌ ಬಳಕೆ ಸೇರಿದಂತೆ ಸಾಮಾಜಿಕ ಅಂತರದಂತಹ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ತಿಳಿಸಿದರು.

ಈಗಾಗಲೇ ಈ ಚುನಾವಣೆಗೆ ಸಂಬಂಧಪಟ್ಟಂತೆ ಎರಡು ಜಿಲ್ಲೆಗಳಿಗೆ ಎಂಸಿಸಿ ನೋಡಲ್‌ ಅಧಿಕಾರಿಗಳನ್ನು ನೇಮಿಸಲಾಗಿದೆ. ಪ್ರಚಾರಕ್ಕೆ ಬಳಸುವ ವಾಹನಗಳ ಪರವಾನಿಗೆಯನ್ನು ಚುನಾವಣಾಧಿಕಾರಿಗಳಿಂದ ಪಡೆಯಬೇಕೆಂದು ತಿಳಿಸಿದ ಅವರು, ಈ ಚುನಾವಣೆಯ ಪ್ರತಿಯೊಂದು ಬೂತ್‌ನಲ್ಲಿ ಮೈಕ್ರೋ ಅಬ್ಸರ್ವರ್‌ಗಳನ್ನು ನೇಮಿಸಲಾಗಿದ್ದು ಅವರು ಎಲ್ಲದರ ಬಗ್ಗೆ ನಿಗಾ ವಹಿಸುತ್ತಾರೆ. ಚುನಾವಣಾ ಕಾರ್ಯದಲ್ಲಿ ಅಕ್ರಮ ಎಸಗಿದವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ಹೇಳಿದರು.

ಹಾಗೆಯೇ ಮತದಾನ ಜಾಗೃತಿಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ ಎಂದು ತಿಳಿಸಿದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ರಮೇಶ ಕಳಸದ, ಚೋರಗಸ್ತಿ, ಹಾದಿಮನಿ ಸೇರಿದಂತೆ ಕ್ಷೇತ್ರದ ವಿವಿಧ ಸ್ಪರ್ಧಿಗಳು, ವಿವಿಧ ಪಕ್ಷಗಳು, ಸ್ಪರ್ಧಿಗಳ ಪ್ರತಿನಿಧಿಗಳು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.