ಸೌಹಾರ್ದ ಸಹಕಾರಿ ಉದ್ಘಾಟನೆ
Team Udayavani, Feb 6, 2021, 1:13 PM IST
ನಿಡಗುಂದಿ: ಸಮಾಜ ಸೇವೆ ನಮ್ಮ ಉಸಿರು, ಸಮಾಜದಲ್ಲಿ ಶೈಕ್ಷಣಿಕ, ಆರ್ಥಿಕ ಸದೃಢತೆಗೆ ಸಂಕಲ್ಪ ಹೊಂದಿ ನಿರಂತರ ಸೇವೆ ನೀಡುವಲ್ಲಿ ಜೊಲ್ಲೆ ಸಮೂಹ ಸಂಸ್ಥೆ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಪುತ್ರ ಬಸವಪ್ರಭು ಜೊಲ್ಲೆ ಹೇಳಿದರು.
ಪಟ್ಟಣದಲ್ಲಿ ಜ್ಯೋತಿ ವಿವಿಧ ಉದ್ದೇಶಗಳ ಸೌಹಾರ್ದ ಸಹಕಾರಿ ನಿ. ಯಕ್ಸಂಬಾ, ಇದರ 60ನೇ ಶಾಖೆ ಉದ್ಘಾಟಿಸಿ ಅವರು ಮಾತನಾಡಿದರು. ಮಲ್ಟಿಸ್ಟೇಟ್ ಮಾನ್ಯತೆ ಪಡೆದ ಜೊಲ್ಲೆ ಉದ್ಯೋಗ ಸಮೂಹ ಸಂಸ್ಥೆಯ ಅಂಗ ಸಂಸ್ಥೆಯಾದ ಬೀರೇಶ್ವರ ಸಹಕಾರಿ ಸಂಸ್ಥೆ ರಾಜ್ಯ ಹಾಗೂ ಮಹಾರಾಷ್ಟ್ರದಲ್ಲಿ ಶಾಖೆಗಳನ್ನು ಹೊಂದಿ ಯಶಸ್ವಿಯಾಗಿ ಕಾರ್ಯ ನಿರ್ವಹಿಸುತ್ತಿದೆ. ಸಹಕಾರಿ ಜತೆಗೆ ಶೈಕ್ಷಣಿಕ, ಆರ್ಥಿಕ, ಸಾಮಾಜಿಕ ಕಾರ್ಯ ಮಾಡುತ್ತಿದೆ ಎಂದರು.
ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ ಮಾತನಾಡಿ, ಜೊಲ್ಲೆ ಸಮೂಹ ಸಂಸ್ಥೆಯ ಸೇವೆ ಕೇವಲ ರಾಜ್ಯಕ್ಕೆ ಮಾತ್ರ ಸೀಮಿತವಾಗಿಲ್ಲ ನೆರೆ ರಾಜ್ಯಕ್ಕೂ ವಿಸ್ತರಣೆಯಾಗಿ ಬೆಳೆದಿದೆ. ಅವರ ನಿರಂತರ ಸಮಾಜ ಸೇವೆ ಕಳಕಳಿ ಮರೆಯಲು ಸಾಧ್ಯವಿಲ್ಲ. ರಾಜಕೀಯ ಜೀವನದಲ್ಲಿದ್ದರೂ ಸಮಾಜ ಸೇವೆ ಮರೆಯದೇ ವಿವಿಧ ಕ್ಷೇತ್ರದಲ್ಲಿ ಉದ್ಯೋಗ ಸೃಷ್ಟಿಗೆ ಕಾರಣವಾಗಿದ್ದಾರೆ. ಜೊಲ್ಲೆ ಸಮೂಹ ಸಂಸ್ಥೆ ಸಹಕಾರಿ, ಉದ್ಯೋಗ ಕ್ಷೇತ್ರ ಸೇರಿದಂತೆ ವಿವಿಧ ರಂಗದಲ್ಲಿ ವಿಶೇಷ ಛಾಪು ಮೂಡಿಸಿದೆ ಎಂದರು.
ಇದನ್ನೂ ಓದಿ:ಎಸ್ಟಿ ಘೋಷಣೆ ಸಿಎಂನಿಂದ ಸಾಧ್ಯವಿಲ್ಲ: ಈಶ್ವರಪ್ಪ
ಸ್ಥಳೀಯ ರುದ್ರೇಶ್ವರ ಸಂಸ್ಥಾನ ಮಠದ ರುದ್ರಮುನಿ ಶ್ರೀಗಳು ಆಶೀರ್ವಚನ ನೀಡಿದರು. ಶಿವಾನಂದ ಅವಟಿ, ಬಸವರಾಜ ಕುಂಬಾರ, ಚಂದ್ರಕಾಂತ ಕೋತ, ಬಾಬುರಾವ್ ಮಾಳಿ, ಮುತ್ತು ಚಿಕ್ಕೊಂಡ, ಡಾ| ಸಂಗಮೇಶ ಗೂಗಿಹಾಳ, ಶಂಕರ ರೇವಡಿ, ಶಿವಾನಂದ ಮುಚ್ಚಂಡಿ, ಪ್ರಹ್ಲಾದ ಪತ್ತಾರ, ಮುದ್ದಪ್ಪ ಯಳ್ಳಿಗುತ್ತಿ, ಶೇಖರ ದೊಡಮನಿ, ರವಿ ಪವಾರ, ಮಹಾಂತೇಶ ಒಣರೊಟ್ಟಿ, ಎನ್.ಎ. ಪಾಟೀಲ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ
Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್ 500 ಕೋಟಿ ರೂ. ಖರ್ಚು’
Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ
2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ
UPSC Result: ವಿಜಯಪುರದ ವಿಜೇತಾಗೆ ಯುಪಿಎಸ್ಸಿಯಲ್ಲಿ 100ನೇ ರ್ಯಾಂಕ್