ಆಲಮಟ್ಟಿ ಭರ್ತಿಗೆ ಕ್ಷಣಗಣನೆ
Team Udayavani, Jul 16, 2018, 11:06 AM IST
ಆಲಮಟ್ಟಿ: ಕೃಷ್ಣೆಯ ಉಗಮ ಸ್ಥಾನ ಮಹಾಬಳೇಶ್ವರ ಹಾಗೂ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ಆಲಮಟ್ಟಿ ಲಾಲ್ ಬಹಾದ್ದೂರ್ ಶಾಸ್ತ್ರಿ ಜಲಾಶಯಕ್ಕೆ ನೀರು ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು ಸಂಪೂರ್ಣವಾಗಿ ಭರ್ತಿಯಾಗಲು ಕ್ಷಣಗಣನೆ ಆರಂಭವಾಗಿದೆ.
519.60 ಮೀ. ಗರಿಷ್ಠ ಎತ್ತರದಲ್ಲಿ ಗರಿಷ್ಠ 123.081 ಟಿಎಂಸಿ ಅಡಿ ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ ರವಿವಾರ 517.40 ಮೀ. ಎತ್ತರದಲ್ಲಿ 89.534 ಟಿಎಂಸಿ ಅಡಿ ನೀರು ಸಂಗ್ರಹವಾಗಿ ಒಂದು ಲಕ್ಷಕ್ಕೂ ಅಧಿಕ (1,00,667 ಕ್ಯೂಸೆಕ್) ನೀರು ಒಳಹರಿವಿನ ಮೂಲಕ ಹರಿದು ಬರುತ್ತಿದೆ. ಇದರಿಂದ ಜಲಾಶಯಕ್ಕೆ ಗಣನೀಯ ಪ್ರಮಾಣದಲ್ಲಿ ನೀರು ಹರಿದು ಬಂದು ಜಲಾಶಯದಲ್ಲಿ ನೀರಿನ ಸಂಗ್ರಹಮಟ್ಟ ಏರಿಕೆಯಾಗುತ್ತಿದೆ. ಹೀಗಾಗಿ ಜಲಾಶಯ ಸಂಪೂರ್ಣವಾಗಿ ತುಂಬಲು ಕೇವಲ 2.20 ಮೀ. ಮಾತ್ರ ಬಾಕಿಯಿದೆ.
ಕಳೆದ ವರ್ಷ ಇದೇ ದಿನದಂದು ಜಲಾಶಯದಲ್ಲಿ 512.55 ಮೀ. ಎತ್ತರದಲ್ಲಿ 44.429 ಟಿಎಂಸಿ ಅಡಿ ನೀರು ಸಂಗ್ರವಾಗಿ 3831 ಕ್ಯೂಸೆಕ್ ನೀರು ಒಳಹರಿವಿತ್ತು. ಕಳೆದ ವರ್ಷಕ್ಕಿಂತಲೂ ಈ ಬಾರಿ ಜಲಾಶಯ ಬೇಗ ತುಂಬುತ್ತಿರುವುದರಿಂದ ರೈತರು ತಮ್ಮ ಜಮೀನುಗಳಿಗೆ ನೀರು ತಲುಪುತ್ತದೆ ಎಂದು ಆಶಾಭಾವನೆಯಿಂದ ನೋಡುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ