ಬಬಲೇಶ್ವರ ಕ್ಷೇತ್ರದ ಕಾರಜೋಳ, ತಿಕೋಟಾದಲ್ಲಿ ಕೋವಿಡ್ ಕೇರ್ ಕೇಂದ್ರ: ಎಂ.ಬಿ.ಪಾಟೀಲ್
Team Udayavani, May 17, 2021, 5:28 PM IST
ವಿಜಯಪುರ: ಬಬಲೇಶ್ವರ ವಿಧಾನಸಭಾ ಕ್ಷೇತ್ರ್ರದಲ್ಲಿ ಕಾರಜೋಳ ಹಾಗೂ ತಿಕೋಟಾ ಪಟ್ಟಣದಲ್ಲಿ ಮೊದಲ ಹಂತದಲ್ಲಿ ಕೋವಿಡ್ ಕೇರ್ ಸೆಂಟರ್ ಆರಂಭಿಸಲಾಗುತ್ತಿದೆ ಎಂದು ಬಬಲೇಶ್ವರ ಶಾಸಕ ಎಂ.ಬಿ.ಪಾಟೀಲ್ ಹೇಳಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಬಬಲೇಶ್ವರ ತಹಶೀಲ್ದಾರ ಮಲ್ಲಿಕಾರ್ಜುನ ಅರಕೇರಿ ಹಾಗೂ ತಿಕೋಟಾ ತಹಶೀಲ್ದಾರ ಸಂತೋಷ ಮ್ಯಾಗೇರಿ ಹಾಗೂ ತಾಲೂಕಾ ಆರೋಗ್ಯಾಧಿಕಾರಿ ಡಾ.ಕವಿತಾ ದೊಡಮನಿ ಅವರೊಂದಿಗೆ ಈ ಕುರಿತು ಚರ್ಚೆ ನಡೆಸಿದ್ದು, ಪ್ರಥಮ ಹಂತದಲ್ಲಿ ಬಬಲೇಶ್ವರ ತಾಲೂಕಿನ ಕಾರಜೋಳ ಗ್ರಾಮದ ಕಿತ್ತೂರ ರಾಣಿ ಚನ್ನಮ್ಮ ವಸತಿ ಶಾಲೆಯಲ್ಲಿ ಹಾಗೂ ತಿಕೋಟಾ ಪಟ್ಟಣದ ಬಿ.ಸಿ.ಎಂ ವಸತಿ ನಿಲಯ ಹಾಗೂ ಬಿ.ಎಲ್.ಡಿ.ಇ ಸಂಸ್ಥೆ ಹಾಸ್ಟೇಲ್ ನಲ್ಲಿ ಕೋವಿಡ್ ಕೇರ್ ಸೆಂಟರ್ ಸ್ಥಾಪಿಸಲು ತಾಲೂಕು ಆಡಳಿತದಿಂದ ಅಗತ್ಯ ಕ್ರಮ ಜರುಗಿಸಲಾಗುತ್ತಿದೆ. ಪ್ರಥಮ ಹಂತದಲ್ಲಿ ಕಾರಜೋಳದಲ್ಲಿ 90 ಹಾಸಿಗೆಗಳ ಕೇಂದ್ರ ಆರಂಭಿಸಲಾಗುತ್ತಿದೆ. ಅಗತ್ಯವಿದ್ದರೆ ಬೇರೆ ಸ್ಥಳಗಳಲ್ಲಿಯೂ ವಿಸ್ತರಿಸಲಾಗುವುದು ಎಂದು ಎಂ.ಬಿ.ಪಾಟೀಲ ಹೇಳಿದ್ದಾರೆ.
ಇದನ್ನೂ ಓದಿ:ಕುವೈತ್ ನಿಂದ ಧಾರವಾಡಕ್ಕೆ 75 ಮೆಟ್ರಿಕ್ ಟನ್ ಆಕ್ಸಿಜನ್ ಪೂರೈಕೆ: ಸಚಿವ ಪ್ರಹ್ಲಾದ್ ಜೋಶಿ
ಗ್ರಾಮೀಣ ಪ್ರದೇಶದಲ್ಲಿ ಸೋಂಕು ಹಬ್ಬಿದ ಕುರಿತು ಜಿಲ್ಲಾಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ನಂತರ ಎಲ್ಲ ಕಡೆ ಮನೆ-ಮನೆ ಸರ್ವೇ ಮಾಡಿ, ರೋಗ ಲಕ್ಷಣಗಳನ್ನು ಗುರುತಿಸುವ ಕಾರ್ಯ ಆರಂಭ ಮಾಡಿರುವುದು ಸ್ವಾಗತಾರ್ಹ. ಅಂತವರಿಗೆ ಪ್ರಾಥಮಿಕ ಚಿಕಿತ್ಸೆಗೆ ಈ ಕೋವಿಡ್ ಕೇರ್ ಸೆಂಟರ್ ಗಳನ್ನು ಬಳಸಬಹುದು. ಸಾರ್ವಜನಿಕರು ಕೋವಿಡ್ ಕೇರ್ ಸೆಂಟರ್ ಸ್ಥಾಪಿಸಲು ಅಗತ್ಯ ಮೂಲಭೂತ ಸೌಕರ್ಯಗಳನ್ನು ಸ್ಥಳ, ಸಮುದಾಯ ಭವನಗಳು, ಶಾಲೆಗಳು, ಗೋಡಾವನಗಳು, ವಿಶಾಲ ಕಟ್ಟಡಗಳನ್ನು ಸ್ವಯಂ ಪ್ರೇರಿತವಾಗಿ ನೀಡಲು ಮುಂದೆ ಬರಬೇಕು ಹಾಗೂ ಕೋವಿಡ್ ಕೇರ್ ಸೆಂಟರ್ ಗಳಲ್ಲಿ ದಾಖಲಾದವರಿಗೆ ಎಲ್ಲ ರೀತಿಯ ನೆರವು ನೀಡಲು ದಾನಿಗಳು ಮುಂದಾಗಬೇಕು ಎಂದು ಎಂ.ಬಿ.ಪಾಟೀಲ್ ಕೋರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್ ಕಡ್ಡಾಯ
Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ
ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ
ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ
ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ
MUST WATCH
ಹೊಸ ಸೇರ್ಪಡೆ
Box office: ಈ ವಾರ ಬಾಲಿವುಡ್ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?
Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ
Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್
Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ
Fraud: ರೈಸ್ ಪುಲ್ಲಿಂಗ್ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ