ಕೋವಿಡ್‌ ನಿಯಂತ್ರಿಸಲು ಕಠಿಣ ಕ್ರಮಕ್ಕೆ ಸೂಚನೆ


Team Udayavani, Apr 25, 2021, 6:48 PM IST

Untitled-1

ಸಿಂಧನೂರು: ಕೋವಿಡ್ 2ನೇ ಅಲೆ ಭಾರಿ ವೇಗವಾಗಿ ಹರಡುತ್ತಿರುವುದರಿಂದ ನಿಯಂತ್ರಣಕ್ಕಾಗಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಅಧಿಕಾರಿಗಳು ಹಿಂದೇಟುಹಾಕುವಂತಿಲ್ಲ ಎಂದು ಶಾಸಕ ವೆಂಕಟರಾವ ನಾಡಗೌಡ ಸೂಚನೆ ನೀಡಿದರು.

ನಗರದ ಮಿನಿ ವಿಧಾನಸೌಧದಲ್ಲಿ ಶನಿವಾರ ಕರೆದಿದ್ದ ತಾಲೂಕು ಮಟ್ಟದ ಟಾಸ್ಕ್ ಫೋರ್ಸ್‌ ಸಭೆಯಲ್ಲಿ ಅವರು ಮಾತನಾಡಿದರು. ಕೋವಿಡ್ನಿಯಂತ್ರಣಕ್ಕಾಗಿ ಸರಕಾರ ಮಾರ್ಗಸೂಚಿ ಅನುಸಾರ ಎಲ್ಲ ರೀತಿಯಿಂದಲೂ ಅಧಿಕಾರಿಗಳು ಮುನ್ನೆಚ್ಚರಿಕೆವಹಿಸಬೇಕು ಎಂದರು.

ನಿತ್ಯ 550 ಸ್ಯಾಂಪಲ್‌ ಸಂಗ್ರಹ: ತಾಲೂಕು ಆರೋಗ್ಯಾಧಿಕಾರಿ ಡಾ| ನಂದಕುಮಾರ್‌ ಮಾತನಾಡಿ,ಪ್ರತಿದಿನ 400 ಟಾರ್ಗೇಟ್‌ ಇದ್ದರೂ 500 ರಿಂದ 550 ಸ್ಯಾಂಪಲ್‌ ಕಳುಹಿಸಲಾಗುತ್ತಿದೆ. ಕಳೆದ ಒಂದುವಾರದಿಂದ ಪಾಸಿಟಿವ್‌ ಪ್ರಮಾಣ ಏರುಗತಿಯಲ್ಲಿದೆ.ಸೌಮ್ಯ ಲಕ್ಷಣಗಳಿದ್ದರೆ ಹೋಮ್‌ ಐಸೋಲೇಶನ್‌ ಗೆ ಒಳಪಡಿಸಲಾಗುತ್ತಿದೆ. ಕೆಲವರು ಸ್ವಾಬ್‌ ಪರೀಕ್ಷೆ ಮಾಡಿಸದೇ ಸಿಟಿ ಸ್ಕ್ಯಾನ್‌ಗೆ ಒಳಗಾಗುತ್ತಿದ್ದಾರೆ. ಈ ಬಗ್ಗೆಯೂ ಮಾಹಿತಿ ಸಂಗ್ರಹಿಸುತ್ತಿದ್ದು, ಸಾರ್ವಜನಿಕಆಸ್ಪತ್ರೆಯಲ್ಲಿ ಚಿಕಿತ್ಸೆ ಕಲ್ಪಿಸಲು ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರು.

ಶಾಸಕ ನಾಡಗೌಡ ಮಾತನಾಡಿ, ಕೋವಿಡ್ ತಡೆಗೆ ಯುದೊœàಪಾದಿಯಲ್ಲಿ ಕೆಲಸ ಮಾಡಬೇಕು. ಪರೀಕ್ಷೆ-ಸಂಪರ್ಕ-ಚಿಕಿತ್ಸೆ ನೀಡಲು ಮೊದಲ ಆದ್ಯತೆ ಕೊಡಬೇಕು. ಪರೀಕ್ಷೆ ಪ್ರಮಾಣ ಹೆಚ್ಚಿಸುವುದಕ್ಕೆ ಸಂಬಂಧಿಸಿ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಲಾಗುವುದು. ಸ್ವಾಬ್‌ ಟೆಸ್ಟ್‌ಗೆ ನೀಡಿದ 24 ಗಂಟೆಯಲ್ಲೇ ವರದಿ ಬಂದರೆ ಪಾಸಿಟಿವ್‌ ಬಂದವರನ್ನು ಸಂಪರ್ಕ ಮಾಡುವುದರಿಂದ ಹರಡುವಿಕೆ ನಿಯಂತ್ರಣ ಮಾಡಬಹುದು. ಕಳೆದ ವರ್ಷದಂತೆಯೂ ಈ ವರ್ಷವೂ ಈ ಬಗ್ಗೆ ಪತ್ತೆ ಹಚ್ಚುವ ತಂಡ ರಚನೆ ಮಾಡಬೇಕು ಎಂದು ತಹಶೀಲ್ದಾರ್‌ ಕವಿತಾ ಅವರಿಗೆ ಸೂಚಿಸಿದರು.

ಸೌಲಭ್ಯ ಕಲ್ಪಿಸಿ: ಫ್ರಂಟ್‌ಲೆçನ್‌ ವರ್ಕರ್ಸ್‌ಗೆ ಅಗತ್ಯವಾದ ಸ್ಯಾನಿಟೈಸರ್‌, ಮಾಸ್ಕ್ ಹಾಗೂ ಇತರ ಸೌಲಭ್ಯಗಳು ಕೊರತೆಯಾಗಬಾರದು. ಸಿಬ್ಬಂದಿ ಭಯದ ನಡುವೆಯೂ ಕೆಲಸ ಮಾಡುತ್ತಿರುವುದರಿಂದ ಅವರ ಕಾಳಜಿಯೂ ಬಹುಮುಖ್ಯ. ಏನೇ ಕೊರತೆಗಳು ಕಂಡುಬಂದರೆ ಕೂಡಲೇ ತಮ್ಮ ಗಮನಕ್ಕೆ ತರುವಂತೆ ಟಿಎಚ್‌ಒ ಅವರಿಗೆ ಶಾಸಕರು ಸೂಚಿಸಿದರು. ಇಡೀ ನಗರವನ್ನು ಸ್ಯಾನಿಟೈಸ್‌ ಮಾಡುವಂತೆ ಪೌರಾಯುಕ್ತ ಆರ್‌.ವಿರೂಪಾಕ್ಷ ಮೂರ್ತಿ ಅವರಿಗೆ ತಿಳಿಸಿದರು.

ರೆಮ್‌ಡೆಸಿವಿಯರ್‌ ಅಭಾವ ಇಲ್ಲ: ರಾಯಚೂರು ಹಾಗೂ ಕೊಪ್ಪಳ ಜಿಲ್ಲೆಗಳಲ್ಲಿ ಕೋವಿಡ್‌ಗೆ ನೀಡುವ ರೆಮ್‌ಡೆಸಿವಿಯರ್‌ ಚುಚ್ಚುಮದ್ದು ಕೊರತೆಯಿಲ್ಲ. ಡ್ರಗ್‌ ಕಂಟ್ರೋಲರ್‌ ಬಳಿ ಬೇಡಿಕೆ ಸಲ್ಲಿಸಿಚುಚ್ಚುಮದ್ದು ಪಡೆದುಕೊಳ್ಳಬಹುದು. ಸಿಂಧನೂರು ನಗರದ ಶಾಂತಿ, ಆದರ್ಶ, ಗವಿಸಿದ್ದೇಶ್ವರ ಆಸ್ಪತ್ರೆಗಳಲ್ಲಿಕೋವಿಡ್‌ ಚಿಕಿತ್ಸೆ ಲಭ್ಯವಿರುವುದರಿಂದ ಮೊದಲು ಈಆಸ್ಪತ್ರೆಗಳಿಗೆ ಬೇಡಿಕೆಗೆ ತಕ್ಕಂತೆ ರೆಮ್‌ಡೆಸಿವಿಯರ್‌ಚುಚ್ಚುಮದ್ದು ಪೂರೈಕೆ ಮಾಡುವಂತೆ ಆರೋಗ್ಯ ಇಲಾಖೆಗೆ ಸೂಚಿಸಲಾಯಿತು.

ಎಲ್ಲ ಕ್ಯಾಂಪ್‌ಗಲ್ಲಿ ಸ್ಯಾನಿಟೇಶನ್‌: ಮಲ್ಕಾಪುರಗ್ರಾಮದಲ್ಲಿ 23 ಹಾಗೂ ದೇವಿಕ್ಯಾಂಪಿನಲ್ಲಿ 15 ಪಾಸಿಟಿವ್‌ ಬಂದಿದ್ದು, ಆತಂಕ ಮೂಡಿಸಿದೆ.ನರೇಗಾ ಕೆಲಸಕ್ಕಾಗಿ ಹೆಚ್ಚು ಜನ ಸೇರುವುದರಿಂದಇಂತಹ ಕಡೆಗಳಲ್ಲಿ ಎಚ್ಚರಿಕೆ ಅಗತ್ಯವಿದೆ. ಗ್ರಾಪಂ ವ್ಯಾಪ್ತಿಯಲ್ಲಿ ಟಾಸ್ಕ್ ಪೋರ್ಸ್‌ ಸಮಿತಿ ರಚನೆಯಾಬೇಕು. ನಾಳೆಯಿಂದಲೇ ಎಲ್ಲಾ ಗ್ರಾಮ,ಕ್ಯಾಂಪುಗಳಲ್ಲಿ ಸ್ಯಾನಿಟೇಶನ್‌ ಮಾಡಬೇಕು.ಜೊತೆಗೆ ಅನಗತ್ಯವಾಗಿ ಓಡಾಡುವುದು, ಮಾಸ್ಕ್ಇಲ್ಲದೇ ಸಾರ್ವಜನಿಕ ಸ್ಥಳದಲ್ಲಿ ಸೇರದಂತೆ ಜಾಗೃತಿಮೂಡಿಸಲು ಬೈಕ್‌ ಮೂಲಕ ಪ್ರಚಾರ ಮಾಡುವಂತೆ ಸೂಚನೆ ನೀಡಿದರು.

ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಅಮರೇಗೌಡ ವಿರುಪಾಪುರ, ತಹಶೀಲ್ದಾರ್‌ ಕವಿತಾ ಆರ್‌, ಸಾರ್ವಜನಿಕ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಸುರೇಶಗೌಡ, ಕೋವಿಡ್‌ ತಾಲೂಕು ನೋಡಲ್‌ ಅಧಿಕಾರಿ ಡಾ| ಜೀವನೇಶ್ವರಯ್ಯ, ನಗರಸಭೆ ಪೌರಾಯುಕ್ತ ಆರ್‌.ವಿರೂಪಾಕ್ಷಮೂರ್ತಿ, ಐಎಂಎ ಅಧ್ಯಕ್ಷ ಡಾ| ಸುಬ್ಬರಾವ್‌, ಸಿಪಿಐ ಶ್ರೀಕಾಂತ, ಬಿಇಒ ಶರಣಪ್ಪ ವಟಗಲ್‌, ಎಸಿಡಿಪಿಒ ಲಿಂಗನಗೌಡ, ಜೆಡಿಎಸ್‌ ಮುಖಂಡ ಬಿ.ಶ್ರೀಹರ್ಷ ಇದ್ದರು

ಟಾಪ್ ನ್ಯೂಸ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-muddebihala

Muddebihal: ನೇಹಾ ಕೊಲೆ ಖಂಡಿಸಿ ಪ್ರತಿಭಟನೆ: ಮುಸ್ಲಿಂ ಮುಖಂಡರು ಭಾಗಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Department of Health: ಜನರಿಗೆ ಅರಿವಿನ ಟಾನಿಕ್‌ ನೀಡುತ್ತಿರುವ ಆರೋಗ್ಯ ಇಲಾಖೆ

Department of Health: ಜನರಿಗೆ ಅರಿವಿನ ಟಾನಿಕ್‌ ನೀಡುತ್ತಿರುವ ಆರೋಗ್ಯ ಇಲಾಖೆ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.