ನಿಗಾ ಕೇಂದ್ರದಲ್ಲಿ ನರಕಯಾತನೆ

ಕೋವಿಡ್‌ ಕೇಂದ್ರದ ದುರವಸ್ಥೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಬಾಧಿತರು

Team Udayavani, Aug 3, 2020, 1:38 PM IST

VP-TDY-1

ವಿಜಯಪುರ: ಜಿಲ್ಲೆಯ ಹಲವು ಕೋವಿಡ್‌ ನಿಗಾ ಕೇಂದ್ರಗಳಲ್ಲಿ ದುರವಸ್ಥೆ ಕುರಿತು ದೂರುಗಳು ಕೇಳಿ ಬರುತ್ತಿವೆ. ಕೋವಿಡ್‌ ಕೇಂದ್ರಗಳಲ್ಲಿ ನಾಯಿಗಳಿಗಿಂತ ಕಡೆಯಾಗಿ ನೋಡಿಕೊಳ್ಳಲಾಗುತ್ತಿದೆ ಎಂಬ ಸಂಗತಿ ಬಯಲಾಗಿದೆ. ಇದೀಗ ಕೋವಿಡ್‌ ನಿಗಾ ಕೇಂದ್ರವೊಂದರ ಅವ್ಯವಸ್ಥೆ ಕುರಿತು ಕೇಂದ್ರದ ಕ್ವಾರಂಟೈನ್‌ ನಿಗಾದಲ್ಲಿ ಇರುವವರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಜಮ್ಮಲದಿನ್ನಿ ಗ್ರಾಮದಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ನಡೆಯುತ್ತಿರುವ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯಲ್ಲಿ ಕೋವಿಡ್‌ ಕೇರ್‌ ಕೇಂದ್ರ ತೆರೆಯಲಾಗಿದೆ. ಈ ಕೇಂದ್ರದಲ್ಲಿ ಮಹಿಳೆಯರು, ಪುರುಷರು ಸೇರಿ 32 ಸೋಂಕಿತರಿದ್ದಾರೆ. ಆದರೆ ಸದರಿ ಕೇಂದ್ರದಲ್ಲಿ ಕುಡಿಯುವ ಹಾಗೂ ಬಳಕೆ ನೀರಿನ ಕೊರತೆ, ಶೌಚಾಲಯಗಳ ದುರವಸ್ಥೆ, ಸ್ವಚ್ಛತೆ ಸೇರಿದಂತೆ ಕೇಂದ್ರದಲ್ಲಿ ತಾಂಡವಾಡುತ್ತಿರುವ ತ್ಯಾಜ್ಯದ ದುರ್ವಾಸನೆ ಕುರಿತು ಕ್ವಾರಂಟೈನ್‌ ಆಗಿರುವ ಸೋಂಕು ಶಂಕಿತರು ದೂರು ಹೇಳಿಕೊಂಡರೂ ಯಾರೊಬ್ಬರೂ ಗಮನ ಹರಿಸಿಲ್ಲ.  ಹೀಗಾಗಿ ಸದರಿ ಕೇಂದ್ರದಲ್ಲಿ ಕ್ವಾರಂಟೈನ್‌ ಆದವರೇ ತಮ್ಮ ತಮ್ಮ ಕೋಣೆಗಳ ಕಸ ಗೂಡಿಸಿಕೊಳ್ಳಬೇಕು. ಇಷ್ಟಾದರೂ ಸಮಸ್ಯೆ ಆಲಿಸಿ, ಪರಿಹಾರ ಕ್ರಮಕ್ಕೆ ಮುಂದಾಗಿಲ್ಲ ಎಂದು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿ ಬಿಟ್ಟು ಹರಿಹಾಯ್ದಿದ್ದಾರೆ.

ಜಮ್ಮಲದಿನ್ನಿ ಗ್ರಾಮದ ಕೋವಿಡ್‌ ಕೇರ್‌ ಕೇಂದ್ರದಲ್ಲಿ ಮಹಿಳೆಯರು, ಪುರುಷರು ಒಂದೇ ಕೇಂದ್ರದಲ್ಲಿ ನೆಲ ಮಾಳಿಗೆ ಹಾಗೂ ಮೊದಲ ಮಾಳಿಗೆಯಲ್ಲಿ ಕ್ವಾರಂಟೈನ್‌ ಮಾಡಲಾಗಿದೆ. ಆದರೆ ಇಲ್ಲಿರುವ ಶೌಚಾಲಯಗಳಿಗೆ ನಳ ಇದ್ದರೂ ನೀರಿಲ್ಲ. ಜೋಡಿಸಿದ್ದ ಬಾಗಿಲು ಮುರಿದಿದ್ದು, ದುರಸ್ತಿ ಮಾಡಿಸಿಲ್ಲ. ಶೌಚಾಲಯಗಳಲ್ಲಿ ಸ್ವತ್ಛತೆ ಇಲ್ಲದ ಕಾರಣ ಸೊಳ್ಳೆಗಳ ಹಾವಳಿ ಹೆಚ್ಚಿದೆ. ಹೀಗಾಗಿ ಸದರಿ ಕೇಂದ್ರದಲ್ಲಿ ಶೌಚಕ್ಕೆ ಗೋಡೆಗಳಿದ್ದರೂ ಬಾಗಿಲಿಲ್ಲ. ಮಹಿಳೆಯರಂತೂ ಮುಜುಗುರದಿಂದಲೇ ಜೀವನ ನಡೆಸುತ್ತಿದ್ದಾರೆ. ಈ ಕೇಂದ್ರದಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಗಂಭೀರವಾಗಿದೆ. ಕೇಂದ್ರದಲ್ಲಿರುವ ಎಲ್ಲರಿಗೂ ಒಂದೇ ಟ್ಯಾಂಕರ್‌ ನೀರಿನ ಬಳಕೆ ಮಾಡಬೇಕಿದೆ. ಹೀಗಾಗಿ ಮೇಲಿರುವ ಟ್ಯಾಂಕರ್‌ನಿಂದ ಬಕೇಟ್‌ಗಳಲ್ಲಿ ಕ್ವಾರಂಟೈನ್‌ ಆದವರೇ ಹೊತ್ತೂಯ್ಯಬೇಕು. ನೀರಿನ ಕೊರತೆ ಕಾರಣ ನೀರಿಗಾಗಿ ಸೋಂಕಿತರಲ್ಲಿ ಕಿತ್ತಾಡಿಕೊಳ್ಳುವ ದಯನೀಯ ಸ್ಥಿತಿ ಇದೆ.

ಹೀಗಾಗಿ ನೀರಿನ ಸಮಸ್ಯೆಯಿಂದಾಗಿ ಹಲವರು ವಾರವಾದರೂ ಸ್ನಾನ ಮಾಡಲು ಸಾಧ್ಯವಾಗಿಲ್ಲ ಎಂದು ದೂರಿದ್ದಾರೆ. ಇನ್ನು ಸದರಿ ಕೋವಿಡ್‌ ಕೇಂದ್ರದಲ್ಲಿ ಎಲ್ಲೆಂದರಲ್ಲಿ ಕೋವಿಡ್‌ ಕ್ವಾರಂಟೈನ್‌ ಆದವರಿಗೆ, ಇವರ ಮೇಲೆ ನಿಗಾ ಇರಿಸಲು ನೇಮಿಸಿರುವ ಅಧಿಕಾರಿ-ಸಿಬ್ಬಂದಿ ಬಳಸಿ ಬಿಸಾಡಿದ ವೈದ್ಯಕೀಯ ತ್ಯಾಜ್ಯ ಸೇರಿದಂತೆ ಎಲ್ಲೆಂದರಲ್ಲಿ ಕಸದ ರಾಶಿ ಸೃಷ್ಟಿಸಿದೆ. ಸದರಿ ಕೇಂದ್ರದಲ್ಲಿ ಕಸ ಗೂಡಿಸಲು ಕೂಡ ಸಿಬ್ಬಂದಿ ಇಲ್ಲದ ದುಸ್ಥಿತಿ ಇದ್ದು ಹಲವು ದಿನಗಳಿಂದ ಕಸ ವಿಲೇವಾರಿ ಮಾಡದ ಕಾರಣ ಕೇಂದ್ರದಲ್ಲಿ ದುರ್ವಾಸನೆ ಹರಡಿಕೊಂಡಿದೆ. ವೈದ್ಯಕೀಯ ಆರೈಕೆಗೆ ಬಂದಿರುವ ಈ ಕೇಂದ್ರದಲ್ಲಿ ರೋಗ ಇಲ್ಲದವರಿಗೂ ರೋಗ ಬಾಧಿಸುವ ಪರಿಸ್ಥಿತಿ ಇದೆ ಎಂದು ದೂರುತ್ತಿದ್ದಾರೆ.

ಬೆಂಗಳೂರಿನಿಂದ ಬಂದಿರುವ ಸೋಂಕಿತರೊಬ್ಬರು ಸದರಿ ಕೋವಿಡ್‌ ಕೇಂದ್ರದಲ್ಲಿ ಇರುವ ದುಸ್ಥಿತಿ ಕಣ್ಣಿನಿಂದ ನೋಡುವುದೇ ಅಸಾಧ್ಯವಾಗಿದೆ. ಇಂತ ಸ್ಥಿತಿಯಲ್ಲಿ ನಾವು ಕ್ವಾರಂಟೈನ್‌ ಜೀವನ ನಡೆಸುವುದು ದುಸ್ಥರವಾಗಿದೆ. ಇಂತ ಅವ್ಯವಸ್ಥೆಯ ಕ್ವಾರಂಟೈನ್‌ ನಿಗಾದಲ್ಲಿ ನಮ್ಮನ್ನು ಇರಿಸುವುದಕ್ಕಿಂತ ಮನೆಯಲ್ಲೇ ಕ್ವಾರಂಟೈನ್‌ ಆಗಲು ಅವಕಾಶ ಕಲ್ಪಿಸಬೇಕು ಎಂದು ಆಗ್ರಹಿಸಿದ್ದಾರೆ.

ಸದರಿ ಕೇಂದ್ರದ ಉಸ್ತುವಾರಿಗೆ ಇರುವ ಅಧಿಕಾರಿಗಳು ಇತ್ತ ಗಮನವನ್ನೇ ಹರಿಸುತ್ತಿಲ್ಲ. ಕೂಡಲೇ ಸ್ಥಳೀಯ ಶಾಸಕ ಎ.ಎಸ್‌. ಪಾಟೀಲ ನಡಹಳ್ಳಿ, ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ ಸದರಿ ಕೋವಿಡ್‌ ಕೇಂದ್ರದ ಸಮಸ್ಯೆ ಸರಿಪಡಿಸಬೇಕು. ಇಲ್ಲವಾದಲ್ಲಿ ಕೇಂದ್ರದಲ್ಲಿರುವ ರೋಗಿಗಳನ್ನು ಬಿಡುಗಡೆ ಮಾಡಿ, ಮನೆಗಳಲ್ಲೇ ಕ್ವಾರಂಟೈನ್‌ ಆಗಲು ಅವಕಾಶ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.