ಕೋವಿಡ್‌ ಟೆಸ್ಟ್‌ ಗೆ ಸಹಕರಿಸಿ


Team Udayavani, Nov 22, 2020, 6:02 PM IST

ಕೋವಿಡ್‌ ಟೆಸ್ಟ್‌ ಗೆ ಸಹಕರಿಸಿ

ಮುದ್ದೇಬಿಹಾಳ: ಪಟ್ಟಣ ಸೇರಿದಂತೆ ತಾಲೂಕಿನೆಲ್ಲೆಡೆ ಇರುವ ಕಾಲೇಜುಗಳ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರು ಕಡ್ಡಾಯವಾಗಿ ಕೋವಿಡ್‌-19 ತಪಾಸಣೆಗೊಳಪಡಬೇಕು. ಇದಕ್ಕಾಗಿ ಆರೋಗ್ಯ ಇಲಾಖೆ ತಂಡದೊಂದಿಗೆ ಸಹಕರಿಸಬೇಕುಎಂದು ತಹಶೀಲ್ದಾರ್‌ ಜಿ.ಎಸ್‌. ಮಳಗಿ ತಿಳಿಸಿದರು.

ತಹಶೀಲ್ದಾರ್‌ ಕಚೇರಿ ಸಭಾಂಗಣದಲ್ಲಿ ಕಾಲೇಜುಗಳ ಮುಖ್ಯಸ್ಥರ ಸಭೆ ನಡೆಸಿಕೋವಿಡ್‌-19 ಸ್ಕ್ರೀನಿಂಗ್‌ ಬಗ್ಗೆ ಮಾಹಿತಿನೀಡಿದ ಅವರು, ಜಿಲ್ಲಾಧಿಕಾರಿಗಳ ಸೂಚನೆ ಎಲ್ಲರೂ ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದರು. ತಾಲೂಕು ಆರೋಗ್ಯಾಧಿಕಾರಿ ಡಾ| ಸತೀಶ ತಿವಾರಿ ಮಾತನಾಡಿ, ಈಗಾಗಲೇ ಪದವಿ ಕಾಲೇಜುಗಳು ಆರಂಭಗೊಂಡಿವೆ. ವಿದ್ಯಾರ್ಥಿಗಳು ನಿಧಾನವಾಗಿಕಾಲೇಜಿನತ್ತ ಬರುತ್ತಿದ್ದಾರೆ. ಹೀಗೆಕಾಲೇಜಿಗೆ ಬರುವವರಿಗೆ ಕಡ್ಡಾಯವಾಗಿ ಕೋವಿಡ್‌ ಪರೀಕ್ಷೆ ನಡೆಸಬೇಕು. ಬೇರೆಕಡೆ ಇರುವವರನ್ನೂ ಕರೆಸಿ ತಪಾಸಣೆಗೆ ಒಳಪಡಿಸಬೇಕು. ನೆಗೆಟಿವ್‌ ವರದಿಬಂದವರನ್ನು ಮಾತ್ರ ಕಾಲೇಜಿನೊಳಕ್ಕೆಸೇರಿಸಿಕೊಳ್ಳಬೇಕು. ಪಾಸಿಟಿವ್‌ ವರದಿಬಂದವರಿಗೆ ಅವರು ತಮ್ಮ ಮನೆಯಲ್ಲೇ10 ದಿನಗಳ ಸ್ವಯಂ ಕ್ವಾರಂಟೈನ್‌ಗೆ ಒಳಪಡಬೇಕು. ಇದನ್ನು ಎಲ್ಲಕಾಲೇಜುಗಳ ಮುಖ್ಯಸ್ಥರು ಕಟ್ಟುನಿಟ್ಟಾಗಿಪಾಲಿಸಿ ಕೋವಿಡ್‌ ನಿಯಂತ್ರಿಸಲು ಸಹಕರಿಸಬೇಕು ಎಂದರು.

ಉಚಿತ ಕೋವಿಡ್‌ ತಪಾಸಣೆಗಾಗಿಯೇ ಸಾಕಷ್ಟು ಪ್ರಮಾಣದಲ್ಲಿ ಆರ್‌ಟಿಪಿಸಿಆರ್‌ ಕಿಟ್‌ಗಳು ಲಭ್ಯವಿವೆ. ಈ ತಾಲೂಕಿಗೆ ದಿನಕ್ಕೆ 375 ಆರ್‌ಟಿಪಿಸಿಆರ್‌ ಹಾಗೂ 100 ಆರ್‌ಎಟಿ ತಪಾಸಣೆ ಗುರಿ ನಿಗದಿಪಡಿಸಲಾಗಿದೆ. ಈ ಗುರಿ ಸಾಧಿಸಲೇಬೇಕೆಂದು ಜಿಲ್ಲಾಧಿಕಾರಿ, ಜಿಲ್ಲಾ ಆರೋಗ್ಯಾಧಿಕಾರಿಗಳು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಹೀಗಾಗಿ ಕಾಲೇಜಿನ ಮುಖ್ಯಸ್ಥರು, ಪ್ರಾಂಶುಪಾಲರು ತಮ್ಮ ಕಾಲೇಜಿಗೆ ಬರುವ ಕೋವಿಡ್‌ ಟೆಸ್ಟಿಂಗ್‌ ತಂಡದೊಂದಿಗೆ ಸಹಕರಿಸಬೇಕು. ವಿದ್ಯಾರ್ಥಿಗಳು ಹಾಗೂ ಪಾಲಕರಿಗೂ ತಪಾಸಣೆ ಮಹತ್ವದ ಬಗ್ಗೆ ಅರಿವು ಮೂಡಿಸಬೇಕು ಎಂದರು.

ಪಿಯುಸಿ ಗೊಂದಲ: ಈಗ ಪದವಿ ಕಾಲೇಜುಗಳು ಮಾತ್ರ ಆರಂಭಗೊಂಡಿದೆ. ಪಿಯುಸಿ ಕಾಲೇಜುಗಳು ಇನ್ನೂಆರಂಭಗೊಂಡಿಲ್ಲ. ಇದಕ್ಕೆ ಸರ್ಕಾರಅನುಮತಿ ಕೊಟ್ಟಿಲ್ಲ. ಹೀಗಿದ್ದರೂ ಆರೋಗ್ಯ ಇಲಾಖೆಯವರು ಪಿಯುಸಿ ಪ್ರಥಮ, ದ್ವಿತೀಯ ವರ್ಷದವಿದ್ಯಾರ್ಥಿಗಳನ್ನೂ ಕಾಲೇಜಿಗೆ ಕರೆಸಿಕೋವಿಡ್‌ ತಪಾಸಣೆ ನಡೆಸಲು ಸಹಕರಿಸಬೇಕು ಎಂದು ಹೇಳಿದ್ದು ಗೊಂದಲ ಮೂಡಿಸಿದಂತಾಗಿತ್ತು.ಪಿಯುಸಿ ವಿದ್ಯಾರ್ಥಿಗಳನ್ನು ಈಗಲೇಕರೆಸಿ ತಪಾಸಣೆ ನಡೆಸುವುದರಿಂದಉಂಟಾಗುವ ಗೊಂದಲ ಅರಿತಆರೋಗ್ಯಾಧಿಕಾರಿಗಳು ಸರ್ಕಾರದ ಆದೇಶದವರೆಗೂ ಪಿಯು ವಿದ್ಯಾರ್ಥಿಗಳ ತಪಾಸಣೆಗೆ ಒತ್ತಡ ಹೇರದಿರಲು ತೀರ್ಮಾನಿಸಿದರು. ಸರ್ಕಾರ ಅನುಮತಿ ಕೊಟ್ಟ ನಂತರ ಪಿಯು ಕಾಲೇಜುಗಳು ಆರಂಭಗೊಂಡಲ್ಲಿ ಆಗ ವಿದ್ಯಾರ್ಥಿಗಳತಪಾಸಣೆಗೆ ಮುಂದಾಗುವ ಕುರಿತು ಚರ್ಚಿಸಲಾಯಿತು.

ತಾಲೂಕು ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ| ಅನಿಲಕುಮಾರ ಶೇಗುಣಸಿ, ನಗರ ಕೋವಿಡ್‌-19 ಮೇಲ್ವಿಚಾರಕ ಎಂ.ಎಸ್‌. ಗೌಡರ, ವಿವಿಧ ಕಾಲೇಜುಗಳು ಪ್ರಾಂಶುಪಾಲರು ಸಭೆಯಲ್ಲಿ ಇದ್ದರು.

ಟಾಪ್ ನ್ಯೂಸ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್‌ 500 ಕೋಟಿ ರೂ. ಖರ್ಚು’

Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್‌ 500 ಕೋಟಿ ರೂ. ಖರ್ಚು’

Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ

Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.