ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ಪಾಕ್ ಪರ ಘೋಷಣೆಗಲ್ಲ, ಭಾರತ ಮಾತಾಕಿ ಎನ್ನಲು ಪರವಾನಿಗೆ ಬೇಕು

Team Udayavani, Apr 16, 2024, 5:07 PM IST

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ : ಕಾಂಗ್ರೆಸ್ ಪಕ್ಷದಲ್ಲಿ ಭಾರತ ಮಾತಾಕಿ ಜೈ ಎನ್ನಲು ಶಾಸಕ ಲಕ್ಷ್ಮಣ ಸವದಿ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪರವಾನಿಗೆ ಕೇಳುತ್ತಾರೆ. ಪಾಕಿಸ್ಥಾನ ಜಿಂದಾಬಾದ್ ಎನ್ನಲು ಇವರಿಗೆ ಯಾರ ಪರವಾನಿಗೆ ಬೇಕಿಲ್ಲ. ಪಂಚಾಯತ್‍ನಿಂದ ಪಾರ್ಲಿಮೆಂಟ್ ವರೆಗೆ ಅವರು ಪಾಕಿಸ್ತಾನ ಜಿಂದಾಬಾದ್ ಎನ್ನುತ್ತಾರೆ ಮಾಜಿ ಸಚಿವ ಸಿ.ಟಿ.ರವಿ ಕುಟುಕಿದ್ದಾರೆ.

ಮಂಗಳವಾರ ವಿಜಯಪುರ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ ರಮೇಶ ಜಿಗಜಿಣಗಿ ಪರ ಬಹಿರಂಗ ನಗರದ ದರ್ಬಾರ ಮೈದಾನದಲ್ಲಿ ಹಮ್ಮಿಕೊಂಡಿದ್ದ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಅವರು, ಆದರೆ ಬಿಜೆಪಿ ಪಕ್ಷದಲ್ಲಿ ಭಾರತ ಮಾತಾ ಕಿ ಜೈ ಎನ್ನಲು ಯಾರ ಅನುಮತಿ ಬೇಕಿಲ್ಲ. ಎಲ್ಲೆಡೆ ಭಾರತ ಮಾತಾ ಕಿ ಜೈ ಎಂಬ ಘೋಷಣೆ ಕೇಳಿ ಬರಬೇಕು ಎಂದರು.

ದೇಶದಲ್ಲಿ ಬಿಜೆಪಿ ಗೆದ್ದರೆ ಭಾರತ ಮಾತಾಕಿ ಜೈ, ಕಾಂಗ್ರೆಸ್ ಗೆದ್ದರೆ ಪಾಕಿಸ್ತಾನಕ್ಕೆ ಹುಟ್ಟಿದ ಡ್ಯಾಶ್ ಡ್ಯಾಶ್ ಅವರು ಹೇಳುತ್ತಾರೆ. ಇದನ್ನು ಶಾಸಕ ಯತ್ನಾಳ ಬಹಳ ಚನ್ನಾಗಿ ಹೇಳುತ್ತಾರೆ ಎಂದ ರವಿ, ನೆರೆದ ಜನರ ಎರಡೂ ಕೈಮುಷ್ಟಿ ಕಟ್ಟಿಸಿ ಮೇಲೆತ್ತಿ ಭಾರತ ಮಾತಾಕಿ, ಹರ ಹರ ಮಹಾದೇವ, ಬಸವಣ್ಣ, ಕನಕದಾಸ, ವಾಲ್ಮೀಕಿ, ಅಂಬೇಡ್ಕರ್ ಪರ ಜಯ ಘೋಷಣೆ ಹಾಕಿಸಿದರು.

ಈ ಚುನಾವಣೆಯಲ್ಲಿ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಕಾರ್ಯಕರ್ತರ ಮನೆಗೆ ಹೋಗಿ ಬಾಂಬ್ ಹಾಕಬೇಡಿ, ಬದಲಾಗಿ ದೇಶದ ಕುರಿತು ಮನವರಿಕೆ ಮಾಡಿಕೊಡಿ. ದೇಶ ಉಳಿಸಲು ಬಿಜೆಪಿಗೆ ಮತ ಹಾಕಿ ಎಂದು ಮನವೋಲಿಸಿ ಎಂದು ಮನವಿ ಮಾಡಿದರು.

ಕೇಂದ್ರದಲ್ಲಿ 2004 ರಿಂದ 2014 ರವರೆಗೆ ಆಡಳಿತ ನಡೆಸಿದ ಕಾಂಗ್ರೆಸ್‍ನವರು ಆಕಾಶ, ಭೂಮಿ, ಪಾತಾಳದಲ್ಲೂ ಲೂಟಿ ಹೊಡೆದರು. ಆದರೆ ಮೋದಿ ನೇತೃತ್ವದಲ್ಲಿ ಕಳೆದ ಹತ್ತು ವರ್ಷಗಳಲ್ಲಿ ಹಗರಣ ರಹಿತ ಆಡಳಿತದ ಮೂಲಕ ಮಾಡಿದ ಸಾಧನೆ ಜನತೆಯ ಮುಂದಿದೆ. ಭವಿಷ್ಯದಲ್ಲೂ ದೇಶಕ್ಕೆ ಮೋದಿ ಗ್ಯಾರಂಟಿ ಎಂದರು.

ಗಂಡನಿಂದ ಕಿತ್ತು ಹೆಂಡತಿಗೆ ಗ್ಯಾರಂಟಿ : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ವಿರುದ್ಧ ವಾಗ್ದಾಳಿ ನಡೆಸಿದ ಸಿ.ಟಿ.ರವಿ, ಕ್ವಾಟರ್ ಮದ್ಯದ ಬೆಲೆ 50 ಏರಿಕೆ ಮಾಡಿ, ಅದೇ ಹಣವನ್ನು ಮಹಿಳೆಯರಿಗೆ ನೀಡಲಾಗುತ್ತಿದೆ. ಪಹಣಿ ದರ ಏರಿಕೆ, ವಿದ್ಯುತ್ ಸಂರ್ಪಕ, ಬಸ್ ದರ ಹೀಗೆ ಎಲ್ಲವನ್ನೂ ಏರಿಕೆ ಮಾಡಿದ್ದಾರೆ. ಗಂಡನಿಂದ ಕಿತ್ತು ಹೆಂಡತಿಗೆ ನೀಡುವುದೇ ಸಿದ್ಧರಾಮಯ್ಯ ಕಾಂಗ್ರೆಸ್ ಗ್ಯಾರಂಟಿ ಎಂದು ಟೀಕಿಸಿದರು.

10 ಕೆಜಿ ಅಕ್ಕಿ ಎಲ್ಲಿ : ಕೇಂದ್ರದಿಂದ ಪ್ರಧಾನಿ ನರೇಂದ್ರ ಮೊದಿ ಅವರು ಕೊಡುವ ಅಕ್ಕಿ ಬಿಟ್ಟು ರಾಜ್ಯದ ಕಾಂಗ್ರೆಸ್ ಹೇಳಿದ್ದ ಅವರ ಸರ್ಕಾರದ 10 ಕೆ.ಜಿ. ಅಕ್ಕಿ ಎಲ್ಲಿದೆ ಎಂದು ಸಿದ್ಧರಾಮಯ್ಯ ಶೈಲಿಯಲ್ಲೇ ಕೆಣಕಿದ ರವಿ, ನುಡಿದಂತೆ ನಡೆದಿದ್ದೇವೆ ಎಂದರೆ ಏನು ಎಂದು ಪ್ರಶ್ನಿಸಿದರು.

ದಳ-ಬಿಜೆಪಿ ಹಳೆಯ ಸಂಬಂಧ : ಬಿಜೆಪಿ ಹಾಗೂ ಜನತಾ ದಳದ ಸಂಬಂಧ ಹೊಸದಲ್ಲ, ಹಳೆಯ ಸಂಬಂಧ. 1977 ರ ತುರ್ತು ಪರಸ್ಥಿತಿಯಲ್ಲಿ ಹಾಗೂ ರಾಮಕೃಷ್ಣ ಹೆಗಡೆ ಅವರು ಮುಖ್ಯಮಂತ್ರಿ ಆಗಿದ್ದಾಗ ಬಿಜೆಪಿ ಪಕ್ಷದಿಂದ ನಾವು ಬೆಂಬಲ ನೀಡಿದ್ದೇವು ಎಂದರು.

ಈ ಹಿಂದೆ ಕೂಡ 20-20 ಮ್ಯಾಚ್ ಇದ್ದಾಗ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡಿದ್ದೇವೆ. ಮಾಜಿ ಪ್ರಧಾನಿ ದೇವೇಗೌಡರು ನಮಗೆ ಮಂಡಿ ನೋವಿದೆ ಆದರೆ ಬುದ್ದಿ ಇದೆ ಹಾಗಾಗಿ ಮೋದಿ ಅವರಿಗೆ ಬೆಂಬಲ ನೀಡಿದ್ದೇವೆ ಎಂದಿದ್ದಾರೆ ಎಂದ ಸಿ.ಟಿ.ರವಿ.

ಕಾಂಗ್ರೆಸ್ ಗಂಡೇ ಇಲ್ಲ : ಕಾಂಗ್ರೆಸ್ ನಲ್ಲಿ ಮದುವೆ ಗಂಡೇ ಇಲ್ಲ. ಗಂಡು ಯಾರೆಂದು ಗೊತ್ತಿಲ್ಲದೇ ಮದುವೆ ಆಗೋದು ಹೇಗೆ ಎಂದು ಛೇಡಿಸಿದ ಅವರು, ರಾಹುಲ್ ಗಾಂಧಿ ಮದುವೆ ಗಂಡು ಎಂದರೆ ಓಡಿ ಹೋಗುತ್ತಾರೆ, ನಮ್ಮ ಗಂಡು ನರೇಂದ್ರ ಮೋದಿ ಹತ್ತಾರು ಯೋಜನೆ ಮಾಡಿರೋ ಗಂಡು ಮೋದಿ ಎಂದು ಶ್ಲಾಘಿಸಿದರು.

ಡಿಕೆಶಿ `ಬ್ರದರ್ಸ್’ ವಿಚಾರಣೆ : ಕಾಂಗ್ರೆಸ್ ಸರ್ಕಾರ ಇದ್ದಾಗ ದೇಶದಲ್ಲಿ ಬಾಂಬ್ ಸ್ಫೋಟಗಳದ್ಧೇ ಸುದ್ದಿ ಇರುತ್ತಿತ್ತು. ಮಂಗಳೂರಿನ ಶಾಲೆಯಲ್ಲಿ ಬಾಂಬ್ ಇಡುವ ಮುನ್ನವೇ ಸ್ಫೋಟಗೊಂಡ ಪ್ರಕರಣದ ಆರೋಪಿಗಳನ್ನು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ನಮ್ಮ ಬ್ರದರ್ಸ್ ಎಂದಿದ್ದರು. ಇದೀಗ ಶಿವಕುಮಾರ ಅವರ 41 ಬ್ರದರ್ಸ್‍ಗಳನ್ನು ಎನ್‍ಐಎ ವಿಚಾರಣೆ ನಡೆಸುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ಇದೀಗ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಲೇ ರಾಜ್ಯದಲ್ಲಿ ಬಾಂಬ್ ತಯಾರಿಕೆ, ಸ್ಫೋಟ ಆರಂಭಗೊಂಡಿದೆ. ಉತ್ತರ ಪ್ರದೇಶದ ಯೋಗಿ ರೀತಿಯಲ್ಲಿ ಬುಲ್ಡೋಜರ್ ಆರಂಭಿಸಿದರೆ ಇಂಥವರನ್ನು ಮಟ್ಟ ಹಾಕಲು ಸಾಧ್ಯವಿದೆ ಎಂದರು.

ಜಾತಿಯಲ್ಲ ನೀತಿ ಚುನಾವಣೆ : ಪ್ರಸಕ್ತ ಚುನಾವಣೆ ಜಾತಿ ಆಧಾರಿತವಾಗಿ ನಡೆಯುತ್ತಿಲ್ಲ, ಬದಲಾಗಿ ನೀತಿ ಮೇಲೆ ಚುನಾವಣೆ ನಡೆಯುತ್ತಿದೆ. ದೇಶ ಉಳಿಸುವ ನಾಯಕ ಯಾರೆಂದು ಅರಿತು ದೇಶದ ಭವಿಷ್ಯಕ್ಕಾಗಿ ಜನರು ಬಿಜೆಪಿ ಪಕ್ಷಕ್ಕೆ ಮಹ ಹಾಕಲಿದ್ದಾರೆ ಎಂದರು.

ಕಾಂಗ್ರೆಸ್ ಉರಿಯೋ ಮನೆ : ಡಾ.ಬಿ.ಆರ್,ಅಂಬೇಡ್ಕರ್ ಅವರೇ ಹೇಳಿದಂತೆ ಕಾಂಗ್ರೆಸ್ ಹೊತ್ತಿ ಉಇರಿಯುವ ಮನೆ, ಹತ್ತಿರ ಹೋದರೆ ಭಸ್ಮವಾಗುತ್ತೀರಿ ಎಂದಿದ್ದರು. ಇದೇ ಕಾಂಗ್ರೆಸ್ ಡಾ.ಅಂಬೇಡ್ಕರ್ ಅವರನ್ನು ಸೋಲಿಸಿತ್ತು ಎಂಬುದನ್ನು ಮರೆಯಬಾರದು ಎಂದರು.

ಸಂವಿಧಾನ ಬದಲಾವಣೆ ಇಲ್ಲ : ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಾವಣೆ ಮಾಡುತ್ತದೆ ಎಂಬ ಸುಳ್ಳು ಸುದ್ದಿ ಹರಡಿಸಲಾಗಿದೆ. ಸಂವಿಧಾನ ಬದಲಾವಣೆ ಮಾಡುತ್ತೇವೆ ಎಂಬುದು ಸುಳ್ಳು. ಬದಲಾಗಿ ವಿಬಿಜೆಪಿ ಅಧಿಕಾರದಲ್ಲಿದ್ದಾಗ ುೀಸಲಾತಿ ಹೆಚ್ಚಿಸಿ, ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡಿದೆ.

ಇದನ್ನೂ ಓದಿ: Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

ಟಾಪ್ ನ್ಯೂಸ್

car

Road Mishap: ಕಮರಿಗೆ ಉರುಳಿದ ಕಾರು… ಐದು ಮಕ್ಕಳು ಸೇರಿ ಎಂಟು ಮಂದಿ ಮೃತ್ಯು

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

gajanur3

ತುಂಗಾ ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ… ಮತ್ತೆ ಜಲಾವೃತಗೊಂಡ ಪತ್ತೆಪೂರ್ ರಸ್ತೆ

g t devegowda

Mysore; ನಾನು ಮುಡಾದಿಂದ ಎಲ್ಲಿಯೂ ನಿವೇಶನ ಪಡೆದುಕೊಂಡಿಲ್ಲ: ಜಿ ಟಿ ದೇವೇಗೌಡ

Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ

Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ

Desi Swara: ಶ್ರೀಕೃಷ್ಣನ ಮುಕುಟದಲ್ಲಿ ನವಿಲುಗರಿ ಹೇಗೆ ಬಂತು?

Desi Swara: ಶ್ರೀಕೃಷ್ಣನ ಮುಕುಟದಲ್ಲಿ ನವಿಲುಗರಿ ಹೇಗೆ ಬಂತು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

gajanur3

ತುಂಗಾ ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ… ಮತ್ತೆ ಜಲಾವೃತಗೊಂಡ ಪತ್ತೆಪೂರ್ ರಸ್ತೆ

mudhola

ಪ್ರವಾಹದ ನೀರಿನಲ್ಲಿ ಪಂಪ್ ಸೆಟ್ ತರಲು ಹೋದ ರೈತರು… ನೀರಿಗಿಳಿಯದಂತೆ ಮನವಿ ಮಾಡಿದ ಸಚಿವರು

ರಬಕವಿ-ಬನಹಟ್ಟಿ: ಅಪಾಯ ಮಟ್ಟದಲ್ಲಿ ಹರಿಯುತ್ತಿರುವ ಕೃಷ್ಣಾ ನದಿ

ರಬಕವಿ-ಬನಹಟ್ಟಿ: ಅಪಾಯ ಮಟ್ಟದಲ್ಲಿ ಹರಿಯುತ್ತಿರುವ ಕೃಷ್ಣಾ ನದಿ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

7-uv-fusion

UV Fusion: ಮಂಗನ ಕೈಯಲ್ಲಿದೆ ಮಾಣಿಕ್ಯ

car

Road Mishap: ಕಮರಿಗೆ ಉರುಳಿದ ಕಾರು… ಐದು ಮಕ್ಕಳು ಸೇರಿ ಎಂಟು ಮಂದಿ ಮೃತ್ಯು

Editorial: ಯುಪಿಎಸ್ಸಿ ಪರೀಕ್ಷಾ ಸುಧಾರಣೆ ಕ್ರಮ: ಸ್ವಾಗತಾರ್ಹ ಹೆಜ್ಜೆ

Editorial: ಯುಪಿಎಸ್ಸಿ ಪರೀಕ್ಷಾ ಸುಧಾರಣೆ ಕ್ರಮ: ಸ್ವಾಗತಾರ್ಹ ಹೆಜ್ಜೆ

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.