ಅಧಿಕಾರಿಗಳ ಕಾರ್ಯವೈಖರಿಗೆ ಗ್ರಾಹಕರ ಅಸಮಾಧಾನ


Team Udayavani, Feb 23, 2022, 5:28 PM IST

23officers

ಇಂಡಿ: ತೋಟದಲ್ಲಿನ ವಿದ್ಯುತ್‌ ಕಂಬ ಬಾಗಿ ಮೂರು ವರ್ಷ ಕಳೆದರೂ ಸಂಬಂಧಿಸಿದ ಅಧಿಕಾರಿಗಳು ಈವರೆಗೂ ಅದನ್ನು ಬದಲಾವಣೆ ಮಾಡಲು ಮುಂದೆ ಬಂದಿಲ್ಲ. ನಾಲ್ಕಾರು ಬಾರಿ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ ಎಂದು ರೈತ ವಜ್ರಕಾಂತ ಧನಶೆಟ್ಟಿ ಆರೋಪಿಸಿದರು.

ಪಟ್ಟಣದ ಹೆಸ್ಕಾಂ ಉಪ ವಿಭಾಗ ಕಚೇರಿಯಲ್ಲಿ ನಡೆದ ತಾಲೂಕಿನ ವಿದ್ಯುತ್‌ ಗ್ರಾಹಕರ ಕುಂದು ಕೊರತೆ ಸಭೆಯಲ್ಲಿ ಅವರು ಮಾತನಾಡಿದರು.

ರೈತರಿಗೆ ಹೆಸ್ಕಾಂ ಇಲಾಖೆ ಸರಿಯಾಗಿ ಸ್ಪಂದಿಸುತ್ತಿಲ್ಲ. ವಿದ್ಯುತ್‌ ಪರಿವರ್ತಕ ಸುಟ್ಟ 24 ಗಂಟೆಯಲ್ಲಿ ತುಂಬಿ ಕೊಡಬೇಕೆಂದು ಆದೇಶವಿದ್ದರೂ ಸಹಿತ ಅಧಿಕಾರಿಗಳು ಕಾಲಹರಣ ಮಾಡುತ್ತಿದ್ದಾರೆ ಎಂದು ಹಲವು ರೈತರು ವಿದ್ಯುತ್‌ ಅದಾಲತ್‌ ವೇಳೆ ಆರೋಪ ಮಾಡಿದರು.

ಅರ್ಜಿ ಕೊಟ್ಟ ರೈತನ ಕಾರ್ಯವನ್ನು 15 ದಿನದಲ್ಲಿ ಮಾಡದಿದ್ದರೆ ನೇರವಾಗಿ ದೂರು ದಾಖಲಿಸಿ ನಾನು ಶೀಘ್ರ ಕ್ರಮ ಕೈಗೊಳ್ಳುತ್ತೇನೆ ಎಂದು ಅಧಿಕಾರಿ ಕೆ.ಜಿ. ಹಿರೇಮಠ ತಿಳಿಸಿದರು.

ಹೆಸ್ಕಾಂ ಅಧೀಕ್ಷಕ ಅಭಿಯಂತರ ಕೆ.ಜಿ. ಹಿರೇಮಠ ಅದಾಲತ ಉದ್ದೇಶಿಸಿ ಮಾತನಾಡಿ, ಅಕ್ರಮ ಸಕ್ರಮದಲ್ಲಿ ಟ್ರಾನ್ಸ್‌ಫಾರ್ವರ್‌ ಕುರಿತು ಅರ್ಜಿ ಸಲ್ಲಿಸಿದವರಿಗೆ ಸರದಿಯ ಮೇಲೆ ಮೊದಲು ಅರ್ಜಿ ಸಲ್ಲಿಸಿದವರಿಗೆ ಆದ್ಯತೆ ನೀಡಲಾಗುತ್ತಿದೆ ಎಂದರು.

ತಾಲೂಕಿನಲ್ಲಿ ರೈತರು ಕೃಷಿಗೆ ಹಗಲು ನಾಲ್ಕು ತಾಸು ನಂತರ ರಾತ್ರಿ ಮೂರು ತಾಸು ವಿದ್ಯುತ್‌ ನೀಡಲು ವಿನಂತಿಸಿಕೊಂಡಾಗ ಈ ನಿಟ್ಟಿನಲ್ಲಿ ಇಲಾಖೆ ಪ್ರಯತ್ನಿಸುತ್ತಿದೆ. ಕೆಲವು ದಿನ ಕೆಲವು ಕಡೆ ಹಗಲು ಮೂರು ಗಂಟೆ, ರಾತ್ರಿ ನಾಲ್ಕು ಗಂಟೆ, ಕೆಲವು ಕಡೆ ಹಗಲು ನಾಲ್ಕು ಗಂಟೆ, ರಾತ್ರಿ ಮೂರು ಗಂಟೆ ವ್ಯವಸ್ಥೆಯ ಮೇಲೆ ವಿದ್ಯುತ್‌ ನೀಡಲಾಗುವದೆಂದರು.

ಗ್ರಾಹಕರು ತಮ್ಮ ಸಮಸ್ಯೆಗಳಿಗೆ ಉಪ ವಿಭಾಗಕ್ಕೆ ಬಂದು ದಾಖಲಿಸಿದರೆ ಪರಿಹಾರ ನೀಡಲಾಗುವದು. ಅದಲ್ಲದೆ ಇನ್ನು ಮುಂದೆ ತಿಂಗಳ ಮೂರನೇ ಶನಿವಾರ ಗ್ರಾಹಕರ ಸಭೆ ನಡೆಸಲಾಗುವದು ಎಂದರು.

ಗ್ರಾಹಕರು ಹೊಸ ಲೇಔಟ್‌ ದಲ್ಲಿ ಗಿರಣಿಗೆ ವಿದ್ಯುತ್‌ ಸಂಪರ್ಕ ನೀಡದೇ ಇರುವ ಕುರಿತು, ಮನೆಯ ಮೇಲೆ ವಿದ್ಯುತ್‌ ತಂತಿ ಹೋಗಿರುವ ಕುರಿತು, ಟಿಸಿ ಸುಟ್ಟ, ರಸ್ತೆಯಲ್ಲಿ ಕಂಬು ಇರುವ ಕುರಿತು, ಲೈನ್‌ಮನ್‌ ಸ್ಪಂದನೆ ಮಾಡುತ್ತಿಲ್ಲ, ಆಕ್ರಮ ಸಕ್ರಮ ಟಿಸಿ ಬಂದಿಲ್ಲ, ಕೆಇಬಿಯವರು ಸೇವಾ ಪ್ರಮಾಣ ಪತ್ರ ನೀಡದೇ ಇರುವ ಕುರಿತು, ಟಿಸಿಯ ಕಂಬ ಶಿಥಿಲಗೊಂಡ ಸೇರಿದಂತೆ ಅನೇಕ ಸಮಸ್ಯೆ ಕುರಿತು ಚರ್ಚಿಸಿ ಕೆಲವೊಂದು ಸ್ಥಳದಲ್ಲಿಯೇ ಪರಿಹಾರ ನೀಡಿ ಕೆಲವು ಸಮಸ್ಯೆಗಳಿಗೆ ಕಾಲಾವಕಾಶ ಕೋರಿ ಸಮಸ್ಯೆ ಬಗೆ ಹರಿಸುವ ಭರವಸೆ ನೀಡಿದರು.

ರೈತರು ಮತ್ತು ಗ್ರಾಹಕರಾದ ಇಂಡಿಯ ಕಿರಣ ಧನಶೆಟ್ಟಿ, ಗುಲಾಬಚಂದ ಪಾಂಡರೆ, ಲಚ್ಯಾಣ ಗ್ರಾಮದ ನಿಂಗಪ್ಪ ಯಳಮೇಲಿ, ಸಾತಪುರ ಗ್ರಾಮದ ನಿಂಗಪ್ಪ ವಾಲೀಕಾರ, ಭೂಯ್ನಾರ ಗ್ರಾಮದ ಶಂಕರ ಚಿಕ್ಕಮಣೂರ, ಹಂಚಿನಾಳದ ಅಶೋಕ ಬರಗುಡಿ, ತಡವಲಗಾ ಗ್ರಾಮದ ಮಹಾಂತೇಶ ಅಂಗಡಿ ಸೇರಿದಂತೆ ಅನೇಕರು ತಮ್ಮ ಸಮಸ್ಯೆಗಳನ್ನು ಅರ್ಜಿ ಸಲ್ಲಿಸಿ ತೊಂದರೆ ಹೇಳಿ ಚರ್ಚಿಸಿದರು.

ವೇದಿಕೆಯಲ್ಲಿ ಎಇಇ ಎಸ್‌.ಆರ್‌. ಮೆಂಡೆಗಾರ, ಡಿ.ಎಂ. ಮೂಲಿಮನಿ, ಸುಧೀರ ಮದಭಾವಿ, ಆರ್‌.ಕೆ. ಚವ್ಹಾಣ, ಜಿ.ಡಿ. ಬಾಬಾನಗರ ಸಂತೋಷ ಬನಗೋಡೆ, ಸಂಗಮೇಶ ಇಮ್ಮನದ, ಆರ್‌.ಬಿ. ಕುಂಬಾರ ಸೇರಿದಂತೆ ಅನೇಕರಿದ್ದರು.

ಟಾಪ್ ನ್ಯೂಸ್

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-muddebihala

Muddebihal: ನೇಹಾ ಕೊಲೆ ಖಂಡಿಸಿ ಪ್ರತಿಭಟನೆ: ಮುಸ್ಲಿಂ ಮುಖಂಡರು ಭಾಗಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

O2 movie review

O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…

9

Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.