ಕಳಪೆ ಕಾಮಗಾರಿಗೆ ಕಡಿವಾಣ ಹಾಕಿ


Team Udayavani, Jul 10, 2018, 12:31 PM IST

vij-2.jpg

ಆಲಮಟ್ಟಿ: ಕೃಷ್ಣಾಭಾಗ್ಯಜಲ ನಿಗಮ ವತಿಯಿಂದ ನಡೆಯುತ್ತಿರುವ ವಿವಿಧ ಕಾಮಗಾರಿಗಳನ್ನು ಅತಿ ಕಡಿಮೆ ದರದಲ್ಲಿ ಗುತ್ತಿಗೆದಾರರು ಪಡೆದು ಆರಂಭಿಸಿದ್ದಾರೆ. ಇದರಿಂದ ತಾಂತ್ರಿಕ ಅಭಿಯಂತರುಗಳು ಕಾಮಗಾರಿಗಳ ಅಂದಾಜು ಪತ್ರಿಕೆ ತಯಾರಿಕೆಯಲ್ಲಿ ತಪ್ಪೆಸಗಿ ಸರ್ಕಾರಕ್ಕೆ ಮೋಸ ಮಾಡುತ್ತಿದ್ದಾರೆಯೇ ಎನ್ನುವುದು ಸಾರ್ವಜನಿಕರ ಜಿಜ್ಞಾಸೆಗೆ ಕಾರಣವಾಗಿದೆ.

ಇತ್ತೀಚೆಗೆ ಆಲಮಟ್ಟಿಯಲ್ಲಿರುವ ಕೃಷ್ಣಾ ಕಾಡಾ ವಿಭಾಗ ಹಾಗೂ ಕೃಷ್ಣಾ ಭಾಗ್ಯಜಲ ನಿಗಮದ ಆಲಮಟ್ಟಿ ವಲಯ ವ್ಯಾಪ್ತಿಯಲ್ಲಿರುವ ಅಣೆಕಟ್ಟು ವಿಭಾಗ, ಆಲಮಟ್ಟಿ ಎಡದಂಡೆ ಕಾಲುವೆ ವಿಭಾಗ, ಆಲಮಟ್ಟಿ ಬಲದಂಡೆ ವಿಭಾಗ, ಮುಳವಾಡ ಏತ ನೀರಾವರಿ ಯೋಜನೆ ವಿಭಾಗ-1 ಹಾಗೂ 2ರಲ್ಲಿ ಕರೆದಿರುವ ಕಾಮಗಾರಿಗಳಿಗೆ ಅಧಿಕಾರಿಗಳು ತಯಾರಿಸಿದ ಅಂದಾಜು ಪತ್ರಿಕೆಯ ಶೇ. 30-45ರವರೆಗೆ ಕಡಿಮೆ ದರದಲ್ಲಿ ಗುತ್ತಿಗೆದಾರರು ಕಾಮಗಾರಿ ಮುಗಿಸಿ ಬಿಲ್‌ ಪಡೆಯುತ್ತಿದ್ದಾರೆ.
 
ಹಾಗಾದರೆ ಕಾಮಗಾರಿ ಕಳಪೆ ಮಾಡುತ್ತಾರೆಯೋ ಅಥವಾ ಅಧಿಕಾರಿಗಳು ಸರ್ಕಾರಕ್ಕೆ ಮೋಸ ಮಾಡಿ ಅಂದಾಜು ಪತ್ರಿಕೆ ತಯಾರಿಸುತ್ತಾರೆಯೋ ಎನ್ನುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.

ಗುಣಮಟ್ಟ ಪರೀಕ್ಷೆ ವಿಭಾಗದ ಕಾರ್ಯವೇನು?: ಸರ್ಕಾರ ಎಲ್ಲ ಕಾಮಗಾರಿಗಳ ಗುಣಮಟ್ಟ ಪರೀಕ್ಷಿಸಲೆಂದೆ ಗುಣ ನಿಯಂತ್ರಣ ವಿಭಾಗ ಸ್ಥಾಪಿಸಿ ಅದಕ್ಕೊಬ್ಬರು ಅಧೀಕ್ಷಕ ಅಭಿಯಂತರರು,
ಕಾರ್ಯಪಾಲಕ ಅಭಿಯಂತರುಗಳು, ಸಹಾಯಕ ಕಾರ್ಯಪಾಲಕ ಅಭಿಯಂತರುಗಳು, ಶಾಖಾಧಿಕಾರಿಗಳನ್ನು ನೇಮಕ ಮಾಡಿದೆ. ಪ್ರತಿ ತಿಂಗಳು ಸಂಬಳದೊಂದಿಗೆ ಅವರಿಗೆ ವಿಶೇಷ ಪ್ರಯೋಗಾಲಯದ ವಾಹನ ವ್ಯವಸ್ಥೆ, ಕಾರು, ಜೀಪುಗಳು ಸೇರಿದಂತೆ ಹಲವಾರು ಸೌಲಭ್ಯ ಒದಗಿಸಿದ್ದರೂ ಅವರು ಮಾಡುತ್ತಿರುವುದಾದರೂ ಏನು? ಕಳಪೆ ಕಾಮಗಾರಿಗಳು ಕಣ್ಣಿಗೆ ರಾಚುತ್ತಿದ್ದರೂ ಕೂಡ ಯಾವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗಿದೆ ಎಂದು ಜನ ಪ್ರಶ್ನಿಸುತ್ತಿದ್ದಾರೆ. 

ರೈತರ ಹಿತ ಕಾಪಾಡಿ
ಕೃಷ್ಣಾ ಮೇಲ್ದಂಡೆ ಯೋಜನೆ ವ್ಯಾಪ್ತಿಯ ಆಲಮಟ್ಟಿ ಲಾಲ್‌ ಬಹಾದ್ದೂರ್‌ ಶಾಸ್ತ್ರಿ ಹಾಗೂ ನಾರಾಯಣಪುರ ಬಸವಸಾಗರ ಜಲಾಶಯಗಳಿಂದ ಸುಮಾರು 6.5 ಲಕ್ಷ ಹೆಕ್ಟೇರ್‌ ಜಮೀನು ನೀರಾವರಿಗೊಳಪಡಲಿದೆ.

ಆಲಮಟ್ಟಿ ಜಲಾಶಯ ವ್ಯಾಪ್ತಿಯಲ್ಲಿ ಸುಮಾರು 85,300 ಹೆಕ್ಟೇರ್‌ ಭೂಮಿ ನೀರಾವರಿಗೊಳಪಟ್ಟರೆ ಬಸವಸಾಗರ ಜಲಾಶಯದ ನಾರಾಯಣಪುರ ಎಡದಂಡೆ, ಬಲದಂಡೆ, ಇಂಡಿ ಶಾಖಾ ಕಾಲುವೆ, ಇಂಡಿ ಏತ ನೀರಾವರಿ ಕಾಲುವೆ, ಜೇವರ್ಗಿ ಶಾಖಾ ಕಾಲುವೆ, ಮುಡಬಾಳ ಶಾಖಾ ಕಾಲುವೆ, ಮುಡಬಾಳ ಶಾಖಾ ಕಾಲುವೆ, ಶಹಾಪುರ ಶಾಖಾ ಕಾಲುವೆ, ರಾಂಪುರ ಏತ ನೀರಾವರಿ, ಬಂದಾಳ, ರಾಜನ ಕೊಳೂರ ಸೇರಿ ಸುಮಾರು 5.57 ಲಕ್ಷ ಹೆಕ್ಟೇರ್‌ ಜಮೀನು ನೀರಾವರಿಗೊಳಪಡಲಿದೆ. ಕಳಪೆ ಕಾಮಗಾರಿ ತಪ್ಪಿಸಿ ರೈತರಿಗೆ ಅನುಕೂಲ ಮಾಡಿಕೊಡುವುದು ಅವಶ್ಯವಾಗಿದೆ.

ನಿಗಮದಿಂದ ನಿರ್ವಹಿಸುತ್ತಿರುವ ಕಾಮಗಾರಿಗಳಲ್ಲಿ ಕಳಪೆಗೆ ಅವಕಾಶವಾಗದಂತೆ ಕ್ಲೋಜರ್‌ ಹಾಗೂ ಸ್ಪೇಷಲ್‌ ದುರಸ್ತಿ ಕಾಮಗಾರಿಗಳ ಸ್ಥಾನಿಕ ಪರಿಶೀಲನೆ ಮಾಡಿದ್ದೇನೆ. ಗುತ್ತಿಗೆದಾರರು ಕಡಿಮೆ ದರದಲ್ಲಿ ಕಾಮಗಾರಿ ಪಡೆದಿರುವುದು ಗಮನಕ್ಕೆ ಬಂದಿದೆ. ಆದರೆ ಕಾಮಗಾರಿ ನಿರ್ವಹಣೆಯಲ್ಲಿ ಕಳಪೆ ಕಂಡು ಬಂದರೆ ಬಿಲ್‌ ಪಾವತಿ ಮಾಡದಂತೆ ಸೂಚಿಸಲಾಗಿದೆ. 
 ಎಸ್‌.ಎಚ್‌.ಮಂಜಪ್ಪ ,ಕೆಬಿಜೆಎನ್ನೆಲ್‌ ಮುಖ್ಯ ಅಭಿಯಂತರ

ಸರ್ಕಾರದ ಮಾರ್ಗಸೂಚಿ ದರದಂತೆ ಪಡೆದು ಕಾಮಗಾರಿ ನಿರ್ವಹಿಸಿದರೆ ಕಳಪೆಯಾಗಲು ಸಾಧ್ಯವಿಲ್ಲ. ಶೇ. 30-40 ಕಡಿಮೆ ದರದಲ್ಲಿ ಗುತ್ತಿಗೆ ಪಡೆಯುತ್ತಿರುವ ಗುತ್ತಿಗೆದಾರರು ನಿಜವಾದ ಗುತ್ತಿಗೆದಾರರಲ್ಲ, ಅಧಿಕಾರಿಗಳೊಂದಿಗೆ ಹೊಂದಾಣಿಕೆಯಾಗಿರುವವರು.
 ಹಿರಿಯ ಗುತ್ತಿಗೆದಾರ

„ಶಂಕರ ಜಲ್ಲಿ

ಟಾಪ್ ನ್ಯೂಸ್

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.