ಕೋಟ್ಪಾ ಪರಿಣಾಮಕಾರಿ ಅನುಷ್ಠಾನಕ್ಕೆ ಡಿಸಿ ಸೂಚನೆ
Team Udayavani, Nov 7, 2020, 6:58 PM IST
ವಿಜಯಪುರ: ಜಿಲ್ಲೆಯ ಪ್ರತಿ ಶಾಲೆ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನ ಮಾರಾಟ ನಿಷೇಧವಿದೆ. ಇಂತಹ ಸ್ಥಳಗಳಲ್ಲಿ ತಂಬಾಕು ಉತ್ಪನ್ನ ಮಾರಾಟಗಾರರ ಬಗ್ಗೆ ದೂರು ನೀಡುವಂತೆ ಜಿಲ್ಲಾಧಿಕಾರಿ ಪಿ.ಸುನೀಲ್ಕುಮಾರ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಜಿಲ್ಲಾಮಟ್ಟದ ತ್ತೈಮಾಸಿಕ, ಸಮನ್ವಯ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು. ಜಿಲ್ಲೆಯ ಪ್ರತಿ ಶಾಲೆಗಳ ನೂರು ಗಜಗಳವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನ ಮಾರಾಟ ಮಾಡುವವರ ಬಗ್ಗೆ ಆಯಾ ಶಾಲಾ ಶಿಕ್ಷಕರಿಂದ ಛಾಯಾಚಿತ್ರ ಸಹಿತ ಪರಿಶೀಲನಾವರದಿ ಪಡೆದು ಈ ಕುರಿತು ಮಾಹಿತಿ ನೀಡುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಉಪ ನಿರ್ದೇಶಕರಿಗೆ ಜಿಲ್ಲಾಧಿಕಾರಿಗಳು ಸೂಚಿಸಿದರು.
ಅದರಂತೆ ಕೋಟ್ಪಾ-2003ರ ಕಾಯ್ದೆ ಪರಿಣಾಮಕಾರಿ ಅನುಷ್ಠಾನ ಮಾಡಬೇಕು. ತಂಬಾಕು ಉತ್ಪನ್ನ ಸೇವನೆಯಿಂದ ಆಗುವ ಹಾನಿಯ ಕುರಿತು ಸಾರ್ವಜನಿಕರಲ್ಲಿ ಮನವರಿಕೆ ಮಾಡಿಕೊಡುವ ಕೆಲಸ ಮಾಡಬೇಕು. ಜೊತೆಗೆ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಜಿಲ್ಲೆಯಮಹಾನಗರ ಪಾಲಿಕೆ, ವಿವಿಧ ನಗರ, ಪಟ್ಟಣ, ಗ್ರಾಪಂ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನ ಮಾರಾಟ ನಿಯಂತ್ರಣಕ್ಕೆ ಅವಶ್ಯಕ ಕ್ರಮ ಕೈಗೊಳ್ಳಬೇಕು. ಈ ಕುರಿತು ಆರೋಗ್ಯ, ತಂಬಾಕು ನಿಯಂತ್ರಣ ಘಟಕ ಅಧಿಕಾರಿಗಳು ಸಮನ್ವಯದಿಂದ ಕೆಲಸ ಮಾಡುವಂತೆ ನಿರ್ದೇಶನ ನೀಡಿದರು.
ಜಿಲ್ಲೆಯ ಪ್ರತಿ ಶಾಲಾ ಕಾಲೇಜು, ಆಸ್ಪತ್ರೆ ಮತ್ತು ನಗರ ಸ್ಥಳೀಯ ವ್ಯಾಪ್ತಿಯಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಕಾನೂನಿನರಿತ್ಯ ಕ್ರಮಗಳನ್ನು ಕೈಗೊಳ್ಳಬೇಕು. ನಿಯಮಾವಳಿಯನ್ವಯ ಉತ್ಪನ್ನಗಳ ನಿಷೇಧ, ಜಪ್ತಿ ಮತ್ತು ಮಾರಾಟದ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಅವರು ಸೂಚನೆ ನೀಡಿದರು.
ಕೋಟ್ಪಾ ಕಾಯ್ದೆ ಅನ್ವಯ ಸಾರ್ವಜನಿಕ ಪ್ರದೇಶದಲ್ಲಿ ಧೂಮಪಾನ ನಿಷೇಧವಿದೆ. ನಿಯಮ ಪಾಲಿಸದ ವ್ಯಕ್ತಿಗೆ 200 ರೂ. ದಂಡ ಹಾಗೂ ಮಾಲೀಕರು, ವ್ಯವಸ್ಥಾಪಕರುಅಥವಾ ಅಧಿಕೃತ ಅಧಿಕಾರಿಗೆ ಸಾರ್ವಜನಿಕ ಪ್ರದೇಶದಲ್ಲಿ ನಡೆದ ನಿಯಮ ಉಲ್ಲಂಘನೆಗಳ ಸಂಖ್ಯೆಗೆ ಸರಿ ಸಮಾನವಾಗಿ ದಂಡ ವಿಧಿಸಲಾಗುವುದು.
ಅದರಂತೆ ಸೆಕ್ಷನ್ 5ರನ್ವಯ ಸಿಗರೇಟ್ಮತ್ತು ಇತರ ತಂಬಾಕು ಉತ್ಪನ್ನಗಳ ಜಾಹೀರಾತು ನಿಷೇಧ ನಿಯಮದ ಮೊದಲ ಉಲ್ಲಂಘನೆಗೆ 2 ವರ್ಷ ಜೈಲು ಶಿಕ್ಷೆ, 1 ಸಾವಿರ ರೂ. ದಂಡ ವಿಧಿಸಲಾಗುತ್ತದೆ. ಎರಡನೇ ಉಲ್ಲಂಘನೆಗೆ 5 ವರ್ಷ ಜೈಲು ಶಿಕ್ಷೆ ಹಾಗೂ 5 ಸಾವಿರ ರೂ. ದಂಡ, ಸೆಕ್ಷನ್ 6ರನ್ವಯ 18ವರ್ಷದೊಳಗಿನ ಮಕ್ಕಳಿಗೆ ತಂಬಾಕು ಉತ್ಪನ್ನ ಮಾರಾಟ ಮಾಡುವುದು ನಿಷಿದ್ಧ. ಶಾಲಾ ಕಾಲೇಜುಗಳ 100 ಗಜಗಳ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನ ಮಾರುವುದರ ನಿಷೇಧ 200 ರೂ.ರವರೆಗೆ ದಂಡ ವಿಧಿಸುವ ಕುರಿತು ಜನರಲ್ಲಿ ಅರಿವು ಮೂಡಿಸಬೇಕು ಎಂದು ನಿರ್ದೇಶನ ನೀಡಿದರು.
ಸೆಕ್ಷನ್-7ರಿಂದ 9ರವರೆಗೆ ಸಿಗರೇಟ್ಮತ್ತು ಇತರ ತಂಬಾಕು ಉತ್ಪನ್ನಗಳ ಮೇಲೆ ನಿರ್ದಿಷ್ಟ ಆರೋಗ್ಯದ ಎಚ್ಚರಿಕೆ ಸಂದೇಶ ನೀಡದ, ಮಾರುವುದೂ ನಿಷೇಧವಿದೆ.
ತಂಬಾಕು ಉತ್ಪನ್ನ ಉತ್ಪಾದಕರಿಗೆ ಮೊದಲ ಉಲ್ಲಂಘನೆಗೆ 2 ವರ್ಷ ಜೈಲು ಶಿಕ್ಷೆ ಹಾಗೂ 5 ಸಾವಿರ ರೂ. ದಂಡ ವಿಧಿಸಲಾಗುವುದು. ಎರಡನೇ ಉಲ್ಲಂಘನೆಗೆ 5 ವರ್ಷ ಜೈಲು ಶಿಕ್ಷೆ 10 ಸಾವಿರ ರೂ. ದಂಡ ವಿಧಿಸುವ ಕುರಿತು ಜನರಿಗೆ ತಿಳಿವಳಿಕೆ ನೀಡಬೇಕು ಎಂದು ಸೂಚಿಸಿದರು.
ಮಾರಾಟ, ಚಿಲ್ಲರೆ ವ್ಯಾಪಾರಕ್ಕಾಗಿ ಮೊದಲ ಉಲ್ಲಂಘನೆಗೆ 2 ವರ್ಷ ಜೈಲು ಶಿಕ್ಷೆ 1000 ರೂ. ದಂಡ ಹಾಗೂ ಎರಡನೇ ಉಲ್ಲಂಘನೆಗಾಗಿ 5 ವರ್ಷ ಜೈಲು ಶಿಕ್ಷೆ ಹಾಗೂ 3000 ರೂ. ದಂಡ ವಿಧಿಸಲಾಗುವುದು ಎಂದು ತಿಳಿಸಿದರು. ಸಭೆಯಲ್ಲಿ ಪಾಲಿಕೆ ಆಯುಕ್ತ ಹರ್ಷಾ ಶೆಟ್ಟಿ, ಡಿಎಚ್ಒ ಡಾ| ಮಹೇಂದ್ರ ಕಾಪ್ಸೆ, ಸರ್ಕಾರಿ ಜಿಲ್ಲಾಸ್ಪತ್ರೆಯ ಡಾ| ಶರಣಪ್ಪ ಕಟ್ಟಿ, ಡಿಡಿಪಿಐ ಪ್ರಸನ್ನಕುಮಾರ, ತಂಬಾಕು ನಿಷೇಧ ಘಟಕದ ಅಧಿಕಾರಿ ಡಾ| ಮಲ್ಲನಗೌಡ ಬಿರಾದಾರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ