ಅನ್ನದಾತರ ಮೊಗದಲ್ಲಿ ಸಂತಸದ ಅಲೆ

ಮಾಸಾಂತ್ಯದವರೆಗೆ ಕಾಲುವೆಗಳಿಗೆ ನೀರು ಹರಿಸಲು ಡಿಸಿಎಂ ಗೋವಿಂದ ಕಾರಜೋಳ ಆದೇಶ

Team Udayavani, Mar 18, 2021, 8:20 PM IST

Vijaypura water

ಆಲಮಟ್ಟಿ: ಬೇಸಿಗೆಯ ಬಿಸಿಲು ತಾರಕಕ್ಕೇರುತ್ತಿರುವ ಮಧ್ಯದಲ್ಲಿ ಜನರ ದಾಹ ನೀಗಿಸಲು ಕೃಷ್ಣಾಭಾಗ್ಯಜಲ ನಿಗಮದ ಅಧಿಕಾರಿಗಳ ಮುಂಜಾಗ್ರತಾ ಕ್ರಮದಿಂದ ಶಾಸ್ತ್ರಿ ಜಲಾಶಯದಲ್ಲಿ ನೀರು ಸಂಗ್ರಹವಾಗಿರುವುದಕ್ಕೆ ರೈತರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಉತ್ತರ ಕರ್ನಾಟಕ ಭಾಗದಲ್ಲಿ ಅದರಲ್ಲೂ ವಿಜಯಪುರ ಜಿಲ್ಲೆಯೆಂದರೆ ಸಾಕು ಬೇಸಿಗೆಯ ಅವಧಿಯಲ್ಲಿ ಕುಡಿಯುವ ನೀರಿಗಾಗಿ ಜನಜಾನುವಾರುಗಳು ಕಿ.ಮೀ.ಗಟ್ಟಲೇ ಅಲೆದಾಡಬೇಕು ಎನ್ನುವುದು ರೂಢಿಯಲ್ಲಿನ ಮಾತು. ಇಷ್ಟೇ ಅಲ್ಲದೇ ಮಳೆಗಾಲದಲ್ಲಿ ಮಳೆಯಾದರೆ ಮಳೆ ಇಲ್ಲದಿದ್ದರೆ ಹೊಟ್ಟೆ ತುಂಬಿಸಿಕೊಳ್ಳಲು ಗುಳೆ ಎನ್ನುವ ಸ್ಥಿತಿಯಿತ್ತು. ಇದೆಲ್ಲದರ ನಿರ್ನಾಮಕ್ಕಾಗಿ ಆಲಮಟ್ಟಿಯಲ್ಲಿ 1964 ಮೇ 22ರಂದು ಆಗಿನ ಪ್ರಧಾನಿ ಲಾಲ್‌ ಬಹದ್ದೂರ್‌ ಶಾಸ್ತ್ರಿ ಜಲಾಶಯಕ್ಕೆ ಭೂಮಿಪೂಜೆ ನೆರವೇರಿಸಿದ್ದರು.

ಜಲಾಶಯ ನಿರ್ಮಾಣಕ್ಕೆ ಭೂಮಿ ಪೂಜೆಯ ಕಾರ್ಯಕ್ರಮಕ್ಕೆ ದಿ|ಎಸ್‌.ನಿಜಲಿಂಗಪ್ಪನವರು ಮುಖ್ಯಮಂತ್ರಿಯಾಗಿ ಅಧ್ಯಕ್ಷತೆಯನ್ನು ವಹಿಸಿದ್ದರು. ಇನ್ನು ಜಲಾಶಯ ಲೋಕಾರ್ಪಣೆಯ ಸಮಾರಂಭವನ್ನು ಖ್ಯಾತ ವಿಜ್ಞಾನಿ ಹಾಗೂ ರಾಷ್ಟ್ರಪತಿಗಳೂ ಆಗಿದ್ದ ಡಾ| ಎಪಿಜೆ ಅಬ್ದುಲ ಕಲಾಂ ಅವರು 2006ರಲ್ಲಿ ನೆರವೇರಿಸಿದರು. ಈ ಸಂದರ್ಭದಲ್ಲಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೆಡಿಎಸ್‌ ಹಾಗೂ ಬಿಜೆಪಿ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿಯಾಗಿದ್ದ ಎಚ್‌.ಡಿ. ಕುಮಾರಸ್ವಾಮಿಯವರು ವಹಿಸಿದ್ದರು. ಇದಕ್ಕೆ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ, ಈಗಿನ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪನವರು ಉಪ ಮುಖ್ಯಮಂತ್ರಿಯಾಗಿದ್ದರು ಹಾಗೂ ಜಲ ಸಂಪನ್ಮೂಲ ಸಚಿವರಾಗಿದ್ದ ಕೆ.ಎಸ್‌. ಈಶ್ವರಪ್ಪ ಸೇರಿದಂತೆ ಸಂಪುಟದ ಸಚಿವರುಗಳು, ಶಾಸಕರು ಸೇರಿ ಈ ಭಾಗದ ಎಲ್ಲ ಜನಪ್ರತಿನಿ ಧಿಗಳು ಮತ್ತು ರೈತರು ಸಾಕ್ಷಿಯಾಗಿದ್ದರು.

ಲಾಲ್‌ ಬಹದ್ದೂರ್‌ ಶಾಸ್ತ್ರಿ ಜಲಾಶಯದ ಕಟ್ಟಡ ಪೂರ್ಣಗೊಂಡು ಕೆಲ ಕಾಲುವೆಗಳಲ್ಲಿ ನೀರು ಹರಿಯಬೇಕಾದರೆ ಅರ್ಧ ಶತಮಾನವೇ ಬೇಕಾಯಿತು. ಇಷ್ಟಾದರೂ ಕೂಡ ಜಲಾಶಯ ನಿರ್ಮಾಣಗೊಂಡಿರುವ ಜಿಲ್ಲೆಗೆ ಸಮಗ್ರವಾಗಿ ನೀರಾವರಿಯಾಗದಿರುವುದು ಬೇರೆ ಮಾತು. 123.081 ಟಿಎಂಸಿ ಗರಿಷ್ಠ ನೀರು ಸಂಗ್ರಹ ಸಾಮರ್ಥ್ಯದ 519.60 ಮೀ. ಗರಿಷ್ಠ ಎತ್ತರದ ಶಾಸ್ತ್ರಿ ಜಲಾಶಯದಲ್ಲಿ ಅಧಿಕಾರಿಗಳ ಹಾಗೂ ಜನಪ್ರತಿನಿಧಿಗಳ ಸಂವಹನ ಕೊರತೆಯಿಂದ 2017 ಮಾರ್ಚ್‌ 27ರಂದು ಜಲಾಶಯದಲ್ಲಿ 505.140 ಮೀ. ಎತ್ತರವಾಗಿ 13.037 ಟಿಎಂಸಿ ಅಡು ಕನಿಷ್ಠ ನೀರು ಸಂಗ್ರಹವಾಗಿದ್ದರಿಂದ ಜಲಚರಗಳು ಸಾವಿಗೀಡಾಗುವಂತಾಗಿತ್ತು.

ಬೃಹತ್‌ ಜಲಾಶಯವಿರುವ ಜಿಲ್ಲೆಯ ಜನರು ಜೂನ್‌-ಜುಲೈವರೆಗೆ ಕುಡಿಯುವ ನೀರಿಗಾಗಿ ಪರದಾಡುವಂತಾಗುತ್ತಿತ್ತು. ಇದರಿಂದ ಪಾಠ ಕಲಿತ ಕೃಷ್ಣಾಭಾಗ್ಯಜಲ ನಿಗಮದ ಅಧಿಕಾರಿಗಳು ಇತ್ತೀಚಿನ ದಿನಗಳಲ್ಲಿ ಅವಳಿ ಜಲಾಶಯಗಳಾಗಿರುವ ಆಲಮಟ್ಟಿ ಶಾಸ್ತ್ರಿ ಜಲಾಶಯ ಹಾಗೂ ನಾರಾಯಣಪುರದ ಬಸವಸಾಗರ ಜಲಾಶಯಗಳಲ್ಲಿ ನೀರು ಸಂಗ್ರಹ ಮಾಡಿಕೊಳ್ಳುವಲ್ಲಿ ಜಾಣ್ಮೆ ತೋರುತ್ತಿದ್ದಾರೆ.

ಶಾಸ್ತ್ರಿ ಜಲಾಶಯದಲ್ಲಿ ಬುಧವಾರ 512.45 ಮೀ.ಎತ್ತರವಾಗಿ 43.775 ಟಿಎಂಸಿ ಅಡಿ ನೀರು ಸಂಗ್ರಹವಿದೆ. ಇದರಲ್ಲಿ 17.620 ಟಿಎಂಸಿ ಅಡಿ ಜಲಚರಗಳಿಗಾಗಿ ಮೀಸಲಿದ್ದು ಇನ್ನುಳಿದ 26.155 ಟಿಎಂಸಿ ಅಡಿ ನೀರಿನಲ್ಲಿ ಭಾಷ್ಪೀಭವನ, ವಿವಿಧ ಗ್ರಾಮಗಳ ಕುಡಿಯುವ ನೀರು ಹಾಗೂ ನಗರ ಪ್ರದೇಶಗಳ ಜನತೆಗೆ ಕುಡಿಯುವ ನೀರನ್ನು ಸಂಗ್ರಹಿಸಿಕೊಂಡು ಕೃಷಿಗಾಗಿ ಮಾರ್ಚ್‌-31ರವರೆಗೂ ಕಾಲುವೆಗಳ ಮೂಲಕ ನೀರು ಹರಿಸಲು ತೀರ್ಮಾನಿಸಿರುವುದು ರೈತರ ಮುಖದಲ್ಲಿ ಮಂದಹಾಸ ಮೂಡುವಂತಾಗಿದೆ.

ಶಂಕರ ಜಲ್ಲಿ

 

ಟಾಪ್ ನ್ಯೂಸ್

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.