ಚಡಚಣ ಸೋದರರ ಹತ್ಯೆ: ಕಂಟ್ರಿ ಪಿಸ್ತೂಲ್ ಕೊಟ್ಟವನ ಸೆರೆ
Team Udayavani, Aug 11, 2018, 6:30 AM IST
ವಿಜಯಪುರ: ರಾಜ್ಯವನ್ನೇ ಬೆಚ್ಚಿ ಬೀಳಿಸಿರುವ ಭೀಮಾ ತೀರದ ಚಡಚಣ ಧರ್ಮರಾಜ ಎನ್ಕೌಂಟರ್ ನಕಲಿ ಎಂಬ ಆರೋಪದ ಹಿನ್ನೆಲೆಯಲ್ಲಿ ಸಿಐಡಿ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ.
ಮತ್ತೂಂದೆಡೆ ಪ್ರಕರಣದಲ್ಲಿ ನಕಲಿ ಎನ್ಕೌಂಟರ್ ಕೃತ್ಯಕ್ಕೆ ಪೊಲೀಸರೇ ಅಕ್ರಮ ಶಸ್ತ್ರಾಸ್ತ್ರ ಸಂಗ್ರಹ ಮಾಡಿದ್ದು, ಕಂಟ್ರಿ ಪಿಸ್ತೂಲ್ ಪೂರೈಕೆ ಮಾಡಿರುವ ಪ್ರಮುಖ ಆರೋಪಿಯನ್ನು ಸಿಐಡಿ ತನಿಖಾ ತಂಡ ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.
ಚಣಚಣ ಸಹೋದರಾದ ಧರ್ಮರಾಜ ಹಾಗೂ ಗಂಗಾಧರ ಇಬ್ಬರ ಹತ್ಯೆಯಲ್ಲೂ ಪೊಲೀಸರು ಹಾಗೂ ರೌಡಿ ಶೀಟರ್ಗಳ ನೇರ ಕೈವಾಡ ಇದೆ. ಈಗಾಗಲೇ ಗಂಗಾಧರ ಹತ್ಯೆ ಪ್ರಕರಣದಲ್ಲಿ ಪೊಲೀಸರ ಕೈವಾಡದ ಕುರಿತು ಸಿಐಡಿ ತನಿಖೆ ನಡೆಸುತ್ತಿದೆ. ಧರ್ಮರಾಜ ಎನ್ ಕೌಂಟರ್ ಕೂಡ ನಕಲಿ ಎಂದು ಮೃತನ ತಾಯಿ ವಿಮಲಾಬಾಯಿ ದೂರಿನ ಆಧಾರದಲ್ಲಿ ಈ ಪ್ರಕರಣವನ್ನೂ ಸಿಐಡಿ ತನಿಖೆಗೆ ವಹಿಸಲಾಗಿದೆ.
ಚಡಚಣ ಕುಟುಂಬದ ತಲೆಮಾರುಗಳ ವೈರಿಯಾದ ರೌಡಿಶೀಟರ್ ಮಹಾದೇವ ಭೈರಗೊಂಡ ಜೊತೆ ಚಡಚಣ ಎಸ್ಐ ಗೋಪಾಲ ಹಳ್ಳೂರ ಹಾಗೂ ಇತರ ಪೊಲೀಸರು ಕೈ ಜೋಡಿಸಿ ಚಡಚಣ ಸಹೋದರರ ಹತ್ಯೆ ಮಾಡಿದ ಆರೋಪ ಮಾಡಲಾಗಿದೆ. ಹೀಗಾಗಿಯೇ ಪೊಲೀಸ್ ಇಲಾಖೆ ಈ ಪ್ರಕರಣವನ್ನು ಕೂಡ ಸಿಐಡಿ ತನಿಖೆಗೆ ವಹಿಸಿದೆ. ವಿಚಾರಣೆ ವೇಳೆ ಆರೋಪಿಗಳು ನಕಲಿ ಎನ್ ಕೌಂಟರ್ಗೆ ಮುನ್ನ ಅಕ್ರಮ ಶಸ್ತ್ರಾಸ್ತ್ರಗಳನ್ನು ಪೊಲೀಸರೇ ಧರ್ಮರಾಜ ಮನೆಯಲ್ಲಿ ಸಂಗ್ರಹಿಸಿದ್ದರು ಎಂಬುದನ್ನು ಬಾಯಿ ಬಿಟ್ಟಿದ್ದಾರೆ. ಎಸ್ಐ ಗೋಪಾಲ ಹಳ್ಳೂರ ಕಂಟ್ರಿ ಪಿಸ್ತೂಲ್ ಪೂರೈಕೆದಾರನ ಜೊತೆ ಅಪವಿತ್ರ ಮೈತ್ರಿ ಇತ್ತು.
ಆತನ ಮೂಲಕ ಅಕ್ರಮ ಶಸ್ತ್ರಾಸ್ತ್ರ ಪಡೆದು, ಧರ್ಮರಾಜ ತೋಟದ ಮನೆಯಲ್ಲಿ ಸಂಗ್ರಹಿಸಿದ್ದ. ನಂತರ ದಾಳಿ ನೆಪದಲ್ಲಿ ಧರ್ಮರಾಜ ಮೇಲೆ ಎನ್ಕೌಂಟರ್ ನಡೆಸಿದ್ದಾನೆ ಎಂದು ಮಾಹಿತಿ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಈ ಮಾಹಿತಿ ಆಧರಿಸಿ ಎನ್ಕೌಂಟರ್ ಪ್ರಕರಣದಲ್ಲಿ ಎಸ್ಐ ಗೋಪಾಲ ಹಳ್ಳೂರಗೆ ಅಕ್ರಮವಾಗಿ ಕಂಟ್ರಿ ಪಿಸ್ತೂಲ್ ಪೂರೈಕೆ ಮಾಡಿರುವ ಪ್ರಮುಖ ಆರೋಪಿಯನ್ನು ವಶಕ್ಕೆ ಪಡೆದಿದ್ದಾಗಿ ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
MUST WATCH
ಹೊಸ ಸೇರ್ಪಡೆ
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!