ಗ್ರಾಹಕರ ಮನೆ ಬಾಗಿಲಿಗೆ ಸಿಲಿಂಡರ್ ತಲುಪಿಸಿ: ಡಿಸಿ
Team Udayavani, Mar 11, 2022, 5:20 PM IST
ವಿಜಯಪುರ: ಜಿಲ್ಲೆಯ ಎಲ್ಲ ನಗರ, ಪಟ್ಟಣ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿನ ಗ್ರಾಹಕರಿಗೆ ಸಮರ್ಪಕವಾಗಿ ಅವರ ಮನೆ ಬಾಗಿಲಿಗೆ ಎಲ್ಪಿಜಿ ಸಿಲಿಂಡರ್ ಸರಬರಾಜು ಮಾಡುವಂತೆ ಎಲ್ಲ ಎಲ್ಪಿಜಿ ಡೀಲರ್ಗಳಿಗೆ ಜಿಲ್ಲಾಧಿಕಾರಿ ಪಿ. ಸುನೀಲಕುಮಾರ್ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಜಿಲ್ಲೆಯ ಎಲ್ಪಿಜಿ ಡೀಲರ್ ಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು.
ಮಾ.7ರಂದು ಗೃಹಬಳಕೆ ಸಿಲಿಂಡರ್ಗಳಲ್ಲಿನ ಗ್ಯಾಸನ್ನು ಅಕ್ರಮವಾಗಿ ಆಟೋಗಳಿಗೆ ತುಂಬುವುದು ಹಾಗೂ ವಾಣಿಜ್ಯ ಬಳಕೆ ಸಿಲಿಂಡರ್ಗಳಿಗೆ ತುಂಬಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿರುವ ಪ್ರಕರಣ ಪತ್ತೆ ಹಚ್ಚಿ ಅಕ್ರಮ ವಹಿವಾಟುದಾರರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲಾಗಿದ್ದು, ಇಂತಹ ಅಕ್ರಮಗಳು ಜರುಗದಂತೆ ಎಲ್ ಪಿಜಿ ವಿತರಕರು, ಡೆಲಿವರಿ ಹುಡುಗರಿಗೆ ಕಟ್ಟುನಿಟ್ಟಿನ ಸೂಚನೆ ನೀಡಬೇಕು ಎಂದು ಸೂಚಿಸಿದರು.
ಅದರಂತೆ ಜಿಲ್ಲೆಯ ಎಲ್ಲ ಹೋಟೆಲ್ ಮಾಲೀಕರಿಗೆ ಎಲ್ಪಿಜಿ ಡೀಲರ್ಗಳಿಂದ ವಾಣಿಜ್ಯ ಸಿಲಿಂಡರ್ಗಳನ್ನು ಖರೀದಿಸಿ ಪಾವತಿ ಕಡ್ಡಾಯವಾಗಿ ಪಡೆದುಕೊಳ್ಳಲು ನಿರ್ದೇಶನ ನೀಡಲಾಗಿದ್ದು, ಪಾವತಿಯಲ್ಲಿ ವಾಣಿಜ್ಯ ಸಿಲಿಂಡರಿನ ನಂಬರ್ ತಪ್ಪದೇ ನಮೂದಿಸಿ ಕೊಡಬೇಕು. ಕೆಲವೊಂದು ಎಲ್ಪಿಜಿ ವಿತರಕರು ಸರ್ಕಾರ ನಿರ್ಧಿಷ್ಟಪಡಿಸಿದ ದರಕ್ಕಿಂತ ಹೆಚ್ಚಿನ ದರ ಪಡೆಯುತ್ತಿರುವುದು ಕಂಡು ಬಂದಿದ್ದು, ಸರ್ಕಾರ ನಿಗದಿಪಡಿಸಿದ ದರದಂತೆ ಹಣ ಪಡೆಯಲು ಒಂದು ವೇಳೆ 5 ಕಿ.ಮೀ.ಗಿಂತ ಹೆಚ್ಚಿನ ದೂರ ಇದ್ದಲ್ಲಿ ಒಂದು ಕಿ.ಮೀಗೆ 1.60 ರೂ.ನಂತೆ ಹೆಚ್ಚಿನ ಹಣ ವಿಧಿ ಸಬಹುದಾಗಿದೆ. ಇದ್ದಕ್ಕಿಂತ ಹೆಚ್ಚಿನ ಹಣ ಪಡೆದಿರುವುದು ಕಂಡು ಬಂದಲ್ಲಿ ಅಂತಹ ಎಲ್ಪಿಜಿ ವಿತರಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಸಭೆಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಉಪ ನಿರ್ದೇಶಕ ಸಿದ್ಧರಾಮ ಮಾರಿಹಾಳ, ಸಹಾಯಕ ನಿರ್ದೇಶಕ ಅಮರೇಶ ತಾಂಡೂರ, ಆಹಾರ ನಿರೀಕ್ಷಕ ಅನೀಲ ಚವ್ಹಾಣ ಸೇರಿದಂತೆ ಎಲ್ಪಿಜಿ ಡೀಲರ್ಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ
Prajwal Case; ಪಕ್ಷಕ್ಕೆ ಮುಜುಗರ ಆಗಿರುವುದು ಸತ್ಯ: ಅರವಿಂದ ಲಿಂಬಾವಳಿ
Vijayapura; ಯತ್ನಾಳಗೆ ರಾಜಕೀಯ ಅಧಿಕಾರ ತಪ್ಪಿಸುವಲ್ಲಿ ಜಿಗಜಿಣಗಿ ಕೈವಾಡ: ಬಳ್ಳೊಳ್ಳಿ ಆರೋಪ
Vijayapura; ಶನಿವಾರ ಇಂಚಗೇರಿಯಲ್ಲಿ ಪಂಚಮಸಾಲಿ ಸಮಾವೇಶ; ಕಾಂಗ್ರೆಸ್ಗೆ ಬೆಂಬಲ ಎಂದ ನಾಯಕರು
Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ
MUST WATCH
ಹೊಸ ಸೇರ್ಪಡೆ
T20 World Cup: ಯುಎಸ್ಎ, ದಕ್ಷಿಣ ಆಫ್ರಿಕಾ ಕ್ರಿಕೆಟ್ ತಂಡಗಳಿಗೆ ಅಮುಲ್ ಪ್ರಾಯೋಜನೆ
Yallapur;ಚುನಾವಣ ಸಿಬಂದಿಗಳ ತರಬೇತಿಯಲ್ಲಿ ಗದ್ದಲದ ವಾತಾವರಣ
Boeing aircraft: ಬೋಯಿಂಗ್ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್
BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ
Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ