ಬಬಲೇಶ್ವರದಲ್ಲಿ ಮರು ಚುನಾವಣೆಗೆ ಆಗ್ರಹ


Team Udayavani, May 22, 2018, 12:39 PM IST

vij-1.jpg

ವಿಜಯಪುರ: ರಾಷ್ಟ್ರೀಯ ಹೆದ್ದಾರಿ 13ರಲ್ಲಿ ಮನಗೂಳಿ ಬಳಿ ವಿವಿ ಪ್ಯಾಟ್‌ ಬಾಕ್ಸ್‌ ಪತ್ತೆ ಹಿನ್ನೆಲೆಯಲ್ಲಿ ಬಬಲೇಶ್ವರ ವಿಧಾನಸಭಾ ಕ್ಷೇತ್ರದಲ್ಲಿ ಮರು ಚುನಾವಣೆ ನಡೆಸುವಂತೆ ಆಗ್ರಹಿಸಿ ಬಿಜೆಪಿ ಪರಾಜಿತ ಅಭ್ಯರ್ಥಿ ವಿಜುಗೌಡ ಪಾಟೀಲ ನೇತೃತ್ವದಲ್ಲಿ ಬೃಹತ್‌ ಪ್ರತಿಭಟನೆ ನಡೆಯಿತು.

ಸೋಮವಾರ ಬಬಲೇಶ್ವರ ನಾಕಾದಲ್ಲಿರುವ ವಿಜುಗೌಡ ನಿವಾಸದಿಂದ ಹೊರಟ ಬೃಹತ್‌ ಪ್ರತಿಭಟನಾ ರ್ಯಾಲಿ ಜಿಲ್ಲಾಧಿಕಾರಿಗಳ ಕಚೇರಿ ತಲುಪಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿತು.

ಈ ವೇಳೆ ಮಾತನಾಡಿದ ವಿಜುಗೌಡ ಪಾಟೀಲ, ಬಬಲೇಶ್ವರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಮತದಾನದ ಮುನ್ನಾ ದಿನ ಆಲಮಟ್ಟಿ ಪ್ರವಾಸಿ ಮಂದಿರದಲ್ಲಿ ಮಧ್ಯರಾತ್ರಿ 11:45ಕ್ಕೆ ಚುನಾವಣಾ ಅಧಿಕಾರಿಯೊಡನೆ ಮಾತುಕತೆ ನಡೆಸಿದ್ದು ನನ್ನ ಮಾಹಿತಿಗೆ ಬಂದಿದೆ. ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದ ಸಂದರ್ಭದಲ್ಲಿ, ಮಧ್ಯರಾತ್ರಿ ಸಚಿವರಾಗಿದ್ದರೂ ಅಭ್ಯರ್ಥಿಗೆ ಸರ್ಕಾರಿ ಪ್ರವಾಸಿ ಮಂದಿರದಲ್ಲಿ ಕ್ಷೇತ್ರದ ಚುನಾವಣಾ ಅಧಿಕಾರಿಗಳನ್ನು ಭೇಟಿ ಮಾಡಿದ್ದಾರೆ. ಅದರ ಫಲವೇ ನನ್ನ ಕ್ಷೇತ್ರದ ಮತಯಂತ್ರಗಳ ಅದಲು-ಬದಲಾಗಿ, ಮನಗೂಳಿ ಬಳಿ ಅದಕ್ಕೆ ಸಾಕ್ಷಿ ದೊರಕಿದೆ ಎಂದು ದೂರಿದರು. 

ನಾನು ಸ್ಪರ್ಧಿಸಿದ್ದ ಬಬಲೇಶ್ವರ ಕ್ಷೇತ್ರದಲ್ಲಿ ಚುನಾವಣಾ ಅಕ್ರಮ ಮಿತಿ ಮೀರಿದ ಕುರಿತು ಚುನಾವಣಾ ಪೂರ್ವದಲ್ಲೇ ಹೇಳಿದ್ದೆ. ಮತದಾನದ ಬಳಿಕ ಮತಯಂತ್ರಗಳ ಬದಲಾವಣೆ ಮಾಡಿದ್ದಾಗಿಯೂ ಸೂಕ್ತ ದಾಖಲೆ ಸಮೇತ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದೆ. ಆದರೂ ಯಾವೊಬ್ಬ ಅಧಿಕಾರಿಗಳೂ ಕನಿಷ್ಠ ಕ್ರಮಕ್ಕೂ ಮುಂದಾಗಲಿಲ್ಲ. ಇದೀಗ
ರಾಷ್ಟ್ರೀಯ ಹೆದ್ದಾರಿ 13ರಲ್ಲಿನ ಮನಗೂಳಿ ಗ್ರಾಮದ ಬಳಿ ಕಾರ್ಮಿಕರ ಶೆಡ್‌ನ‌ಲ್ಲಿ ವಿವಿ ಪ್ಯಾಟ್‌ ಸಿಕ್ಕಿದ್ದು, ಬಬಲೇಶ್ವರ ಕ್ಷೇತ್ರದಲ್ಲಿನ ಚುನಾವಣಾ ಅಕ್ರಮಕ್ಕೆ ಜೀವಂತ ಸಾಕ್ಷಿ ಎಂದು ಕಿಡಿ ಕಾರಿದರು. 

ಇನ್ನಾದರೂ ಚುನಾವಣಾ ಆಯೋಗದ ಅಧಿಕಾರಿಗಳು ಬಬಲೇಶ್ವರ ಕ್ಷೇತ್ರದ ಫಲಿತಾಂಶವನ್ನು ರದ್ದು ಮಾಡಿ, ಮರು ಚುನಾವಣೆ ನಡೆಸಬೇಕು. ಇಡಿ ಪ್ರಕರಣವನ್ನು ಸಿಬಿಐಗೆ ವಹಿಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಭವಿಷ್ಯದಲ್ಲಿ ಇನ್ನೆಂದೂ ಚುನಾವಣಾ ಅಕ್ರಮ ನಡೆಯದಂತೆ ಅಗತ್ಯ ಇರುವ ಎಲ್ಲ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ನಂತರ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿದ ವಿಜಯಕುಮಾರ ಪಾಟೀಲ, ಬಬಲೇಶ್ವರ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಅಧಿಕಾರಿಗಳ ಸಂಪೂರ್ಣ ಸಹಕಾರದಿಂದಲೇ ಚುನಾವಣೆ ಅಕ್ರಮ ನಡೆದಿದೆ. ಈ ಕುರಿತು ನನ್ನ ಬಳಿ ಅಗತ್ಯ ದಾಖಲೆಗಳಿದ್ದು ಚುನಾವಣಾ ಆಯೋಗಕ್ಕೂ ಈ ದಾಖಲೆ ನೀಡುತ್ತೇನೆ ಎಂದು ಎಚ್ಚರಿಸಿದರು.

ಆರ್‌.ಎಸ್‌. ಪಾಟೀಲ ಕುಚಬಾಳ, ರವಿ ಖಾನಾಪುರ, ಕೃಷ್ಣಾ ಗುನ್ನಾಳಕರ, ವಿಜಯಕುಮಾರ ಕುಡಿಗನೂರ ಇತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. 

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.