ಮಾಸಾಶನ ಬಿಡುಗಡೆಗೆ ಆಗ್ರಹ
Team Udayavani, Dec 30, 2017, 4:18 PM IST
ಇಂಡಿ: ಮಾಸಾಶನ ಬಿಡುಗಡೆಗೆ ಆಗ್ರಹಿಸಿ ನೂರಾರು ಫಲಾನುಭವಿಗಳು ಪಟ್ಟಣದ ಅಂಚೆ ಕಚೇರಿ ಹಾಗೂ ಉಪ
ಖಜಾನೆ ಕಚೇರಿ ಎದುರು ಪ್ರತಿಭಟನೆ ನಡೆಸಿ ಅಂಚೆ ಕಚೇರಿ ಮುಖ್ಯಾಧಿಕಾರಿಗೆ ಮನವಿ ಸಲ್ಲಿಸಿದರು. ಜೆಡಿಎಸ್ ತಾಲೂಕಾಧ್ಯಕ್ಷ ಬಿ.ಡಿ. ಪಾಟೀಲ ಮಾತನಾಡಿ, ವೃದ್ಧರಿಗೆ, ವಿಧವೆಯರಿಗೆ ಮತ್ತು ಅಂಗವಿಕಲರಿಗೆ ಸುಮಾರು ನಾಲ್ಕು ತಿಂಗಳುಗಳಿಂದ ಮಾಸಾಶನ ಸ್ಥಗಿತಗೊಂಡಿದೆ.
ಇದರಿಂದ ಅವರು ಜೀವನ ಸಾಗಿಸುವುದು ಕಷ್ಟವಾಗಿದೆ. ಎಷ್ಟೋ ಬಡ ಜನತೆ ಇವುಗಳಿಂದ ತಮ್ಮ ಜೀವನ ಸಾಗಿಸಿಕೊಂಡು ಹೊಗುತ್ತಿದ್ದಾರೆ. ಕೂಡಲೆ ಸರ್ಕಾರ ಅವರ ಉಳಿದ ಮಾಸಾಶನ ಮಂಜೂರು ಮಾಡಬೇಕು ಹಾಗೂ ಪ್ರತಿ ತಿಂಗಳಿಗೊಮ್ಮೆ ಸಮಯಕ್ಕೆ ಸರಿಯಾಗಿ ಮಾಸಾಶನ ಕೊಡಬೇಕು ಎಂದು ಆಗ್ರಹಿಸಿದರು.
ಇವರ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಅಂಚೆ ಇಲಾಖೆ ಮತ್ತು ಖಜಾನೆ ಇಲಾಖೆಯಲ್ಲಿ ಬಾಕಿ ಉಳಿದಿರುವ ಮಾಸಾಶನ ನೀಡಬೇಕು. ಸರಕಾರ ಬಡ ಜನರತೆಯ ಅನುಕೂಲಕ್ಕಾಗಿ ಜಾರಿಗೆ ತಂದಿರುವ ಹಲವಾರು ಯೋಜನೆಗಳು ಯಾವುದೇ ಸಮಸ್ಯೆಯಾಗದಂತೆ ಅರ್ಹ ಫಲಾನುಭವಿಗಳಿಗೆ ಅವುಗಳ ಲಾಭ ಮುಟ್ಟುವಂತೆ
ನೋಡಿಕೊಳ್ಳಬೇಕು. ಅದನ್ನು ಬಿಟ್ಟು ಬಡ ನಿರ್ಗತಿಕರ ಜೀವನದ ಜೊತೆಗೆ ಚೆಲ್ಲಾಟವಾಡುತ್ತಿರುವುದು ಸರಿಯಲ್ಲ
ಎಂದರು. ಈ ಕೂಡಲೇ ಎಲ್ಲರ ಮಾಸಾಶನದ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ತಿಳಿಸಬೇಕು. ಇನ್ನು ಮುಂದೆ ಹೀಗಾಗದಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಒತ್ತಾಯಿಸಿದರು.
ಈ ವೇಳೆ ಪುರಸಭೆ ಸದಸ್ಯ ಸಿದ್ದುಡಂಗಾ, ಪ್ರಧಾನ ಕಾರ್ಯದರ್ಶಿ ಶ್ರೀಶೈಲಗೌಡ ಪಾಟೀಲ, ಸಂತೋಷ
ರಾಠೊಡ, ದುಂಡಪ್ಪ ಬಿರಾದಾರ, ಸಧೀರ ಕರಕಟ್ಟಿ, ಎಲ್ಲೂ ಹೂಗಾರ, ಸಂತೋಷ ಅಳ್ಳಗಿ, ಮಾಳಪ್ಪ ಪೂಜಾರಿ,
ಶ್ರೀಮಂತ ನಾಟೀಕಾರ ಹಾಗೂ ನೂರಾರು ವೃದ್ಧರು, ವಿಧವೆಯರು, ಅಂಗವಿಕಲರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ