ಬುಡಕಟ್ಟು ವೇಷ ಧರಿಸಿ ಪ್ರತಿಭಟನೆ


Team Udayavani, Sep 1, 2020, 6:22 PM IST

ಬುಡಕಟ್ಟು  ವೇಷ ಧರಿಸಿ ಪ್ರತಿಭಟನೆ

ವಿಜಯಪುರ: ತಮ್ಮ ಸಮುದಾಯಕ್ಕೆ ಪರಿಶಿಷ್ಟ ಪಂಗಡದ ಮಾನ್ಯತೆಯ ಜಾತಿ ಪ್ರಮಾಣ ಪತ್ರ ನೀಡುವಂತೆ ಆಗ್ರಹಿಸಿ ತಳವಾರ-ಪರಿವಾರ ಸಮುದಾಯದ ಜನರು ಬೇವು, ಲೆಕ್ಕಿಗಿಡದ ತಪ್ಪಲು ಸುತ್ತಿಕೊಂಡು ಬುಡಕಟ್ಟು ವೇಷಧರಿಸಿ ಅರೆಬೆತ್ತಲೆಯಾಗಿ ವಿನೂತನ ಪ್ರತಿಭಟನೆ ನಡೆಸಿದರು.

ಸೋಮವಾರ ನಗರದ ಹೊರ ವಲದಯದಲ್ಲಿರುವ ರಾಷ್ಟ್ರೀಯ ಹೆದ್ದಾರಿಯಿಂದ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು, ನಗರದ ದರಬಾರ್‌ ಮೈದಾನಕ್ಕೆ ಬಂದು ಸಮಾವೇಶಗೊಂಡರು. ಮುಖಕ್ಕೆ, ಮೈಗೆಲ್ಲ ಕಪ್ಪು ಬಣ್ಣದಿಂದ ಪಟ್ಟಿಗಳನ್ನು ಬರೆದುಕೊಂಡು, ಮೈಗೆ ಬೇವು ಹಾಗೂ ಲೆಕ್ಕಿ ಗಿಡದ ತಪ್ಪಲು ಸುತ್ತಿಕೊಂಡು, ಕೈಯಲ್ಲಿ ಕೋಲು, ಬಿಲ್ಲು, ಬಾಣ, ಕಟ್ಟಿಗೆಗಳಂಥ ಆಯುಧಗಳನ್ನು ಹಿಡಿದು, ಬುಡಕಟ್ಟು ವೇಷಧರಿಸಿ ವಿನೂತನ ಪ್ರತಿಭಟನೆ ನಡೆಸಿದರು.

ಈಗಾಗಲೇ ರಾಜ್ಯದಲ್ಲಿ ಶೈಕ್ಷಣಿಕ ಪ್ರಕ್ರಿಯೆ ಪ್ರಾರಂಭಗೊಂಡಿದ್ದು, ವಿವಿಧ ಇಲಾಖೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಹೀಗಾಗಿ ಕೂಡಲೇ ಜಾತಿ ಪ್ರಮಾಣಪತ್ರ ನೀಡಬೇಕು. ಬರುವ 15 ದಿನಗಳಲ್ಲಿ ಈ ಕುರಿತು ಸ್ಪಷ್ಟ ನಿರ್ಧಾರ ಕೈಗೊಳ್ಳದಿದ್ದಲ್ಲಿ ಸಮಾಜ ಕಲ್ಯಾಣ ಖಾತೆ ಹೊಂದಿರುವ ಡಿಸಿಎಂ ಗೋವಿಂದ ಕಾರಜೋಳ ಅವರ ಕ್ಷೇತ್ರ ಮುಧೋಳ ಪಟ್ಟಣದಲ್ಲಿರುವ ಮನೆಗೆ ಅರೆಬೆತ್ತಲೆ ಹೋರಾಟದ ಮೂಲಕ ಮುತ್ತಿಗೆ ಹಾಕುವುದಾಗಿ ಎಚ್ಚರಿಸಿದರು.

ಈ ವೇಳೆ ತಳವಾರ-ಪರಿವಾರ ಸಮುದಾಯದ ಮುಖಂಡ ಶಿವಾಜಿ ಮೆಟಗಾರ ಮಾತನಾಡಿ, ಕೇಂದ್ರ ಸರ್ಕಾರ ತಳವಾರ, ಪರಿವಾರ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡಿ ರಾಜ್ಯಪತ್ರ ಹೊರಡಿಸಿದೆ. ರಾಜ್ಯ ಸರ್ಕಾರ ಈ ವಿಷಯದಲ್ಲಿ ಕಳೆದ 6 ತಿಂಗಳಿಂದ ರಾಜ್ಯ ಸರ್ಕಾರ ಆದೇಶ ಹೊರಡಿಸುವಲ್ಲಿ ವಿಳಂಬ ನೀತಿ ಅನುಸರಿಸುತ್ತಿದೆ. ನಮ್ಮ ಸಮುದಾಯಕ್ಕೆ ಪರಿಶಿಷ್ಟ ಪಂಗಡದ ಪ್ರಮಾಣಪತ್ರ ನೀಡುವ ವಿಷಯದಲ್ಲಿ ರಾಜ್ಯದ ಮಂತ್ರಿಗಳು, ಅಧಿ ಕಾರಿಗಳು ಒಂದೊಂದು ರೀತಿ ಹೇಳಿಕೆ ನೀಡುವ ಮೂಲಕ ಅನಗತ್ಯ ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದು ಹರಿಹಾಯ್ದರು.

ತಳವಾರ ಮತ್ತು ಪರಿವಾರ ಎಂಬುದು ನಾಯಕ ಮತ್ತು ನಾಯಕಡ ಪದದ ಪರ್ಯಾಯ ಪದ ಎಂದು ಕೇಂದ್ರ ಸರ್ಕಾರ ರಾಜ್ಯ ಪತ್ರದಲ್ಲಿ ಸ್ಪಷ್ಟವಾಗಿ ತಿಳಿಸಲಾಗಿದೆ. ಅದರೂ ಕೆಲ ಹಿತಾಸಕ್ತಿಗಳು ತಳವಾರ ಮತ್ತು ಪರಿವಾರ ಎಂಬುದು ಕೋಲಿ, ಕಬ್ಬಲಿಗ, ಗಂಗಾಮತ, ಅಂಬಿಗ ಸಮುದಾಯದ ಜತೆ ತಳಕು ಹಾಕಿ ಮೀಸಲಾತಿಯಿಂದ ವಂಚಿತಗೊಳಿಸುವ ಹುನ್ನಾರ ನಡೆಸಿವೆ. ತಳವಾರ ಮತ್ತು ಪರಿವಾರ ಎಂಬುದು ನಾಯಕ ಸಮುದಾಯದ ಪಂಗಡ ಎಂಬುದಕ್ಕೆ ಹಲವು ಸಾಕ್ಷ್ಯ ಒದಗಿಸಲಾಗಿದ್ದರೂ ಸರ್ಕಾರ ಗಂಭೀರವಾಗಿ ಪರಿಗಣಿಸುತ್ತಿಲ್ಲ ಎಂದು ದೂರಿದರು.

ಈಗಾಗಲೇ ರಕ್ತದಾನ ಚಳವಳಿ, ಪತ್ರ ಚಳವಳಿ, ಜನಪ್ರತಿನಿ ಧಿಗಳ ಮನೆ ಮುಂದೆ ಧರಣಿ ನಡೆಸುವ ಮೂಲಕ ರಾಜ್ಯ ಸರ್ಕಾರದ ಗಮನ ಸೆಳೆಯುವ ಕೆಲಸ ಮಾಡಿದ್ದೇವೆ. ಅಲ್ಲದೇ ಇದೀಗ ಬುಡಕಟ್ಟು ಸಮುದಾಯಕ್ಕೆ ಸೇರಿದ ತಮಗೆ ಪರಿಶಿಷ್ಟ ಪಂಗಡದ ಮಾನ್ಯತೆಯ ಜಾತಿ ಪ್ರಮಾಣಪತ್ರ ನೀಡುವ ಕುರಿತು ಸರ್ಕಾರ ಅಧಿಕೃತ ಆದೇಶ ಹೊರಡಿಸಿ ಎಲ್ಲ ಗೊಂದಲಗಳಿಗೆ ತೆರೆ ಎಳೆಯಬೇಕು ಎಂದು ಆಗ್ರಹಿಸಿದರು.

ಪ್ರತಿಭಟನಾ ಸ್ಥಳಕ್ಕೆ ಬಂದು ಮನವಿ ಸ್ವೀಕರಿಸಿದ ಜಿಲ್ಲಾಧಿಕಾರಿ ಪಿ.ಸುನೀಲಕುಮಾರ, ಎಸ್‌ಪಿ ಅನುಪಮ್‌ ಅಗರವಾಲ, ಈಗಾಗಲೇ ತಳವಾರ ಮತ್ತು ಪರಿವಾರ ಸಮುದಾಯದ ಗೊಂದಲ ಬಗೆ ಹರಿಸುವಂತೆ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದು ಮತ್ತೂಮ್ಮೆ ಪತ್ರ ಬರೆದು ಶೀಘ್ರವೇ ಎಲ್ಲ ಗೊಂದಲ ನಿವಾರಿಸುವುದಾಗಿ ಭರವಸೆ ನೀಡಿದರು.

ಸುಕ್ಷೇತ್ರ ಗೊರವಗುಂಡಗಿ ವರಲಿಂಗೇಶ್ವರಶ್ರೀಗಳು, ದಸ್ತಗಿರಿ ಮುಲ್ಲಾ, ಅಲೋಕ್‌ ರೂಢಗಿ, ಪ್ರಶಾಂತ ಕತ್ತರಕಿ, ರಾಜು ಕೋಳಿ, ಶ್ರೀಶೈಲ ಕೋಳಿ, ಬಾಬುರಾವ್‌ ಕೋಲಕಾರ ಇದ್ದರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್‌ 500 ಕೋಟಿ ರೂ. ಖರ್ಚು’

Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್‌ 500 ಕೋಟಿ ರೂ. ಖರ್ಚು’

Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ

Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.