ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ
Team Udayavani, Nov 24, 2018, 12:21 PM IST
ನಾಲತವಾಡ: ಇಲ್ಲಿನ ಪಟ್ಟಣ ಪಂಚಾಯತ್ನಲ್ಲಿ ವಸತಿ ಯೋಜನೆ ಅಡಿ ಹಗರಣ ನಡೆದಿದ್ದು ಕೂಡಲೇ ಆಯ್ಕೆ ಪಟ್ಟಿ ರದ್ದುಪಡಿಸಿ ಹೊಸದಾಗಿ ಆಯ್ಕೆ ಪ್ರಕ್ರಿಯೆ ನಡೆಸಿ ಅರ್ಹರಿಗೆ ಮನೆ ಹಂಚಿಕೆ ನಡೆಸುವುದು ಸೇರಿದಂತೆ ಕೆಲ ಪ್ರಮುಖ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪಪಂ ಕಚೇರಿ ಎದುರು ಯುವಜನ ಸೇನೆ ಸಂಘಟನೆ ನಡೆಸುತ್ತಿರುವ ಧರಣಿ ಸತ್ಯಾಗ್ರಹ ಶುಕ್ರವಾರ ಎರಡು ದಿನ ಪೂರೈಸಿದೆ. ಶನಿವಾರದಿಂದ ಬೇಡಿಕೆ ಈಡೇರುವರೆಗೆ ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಲು ಸಂಘಟನೆ ಪದಾಧಿಕಾರಿಗಳು, ಸದಸ್ಯರು ತೀರ್ಮಾನಿಸಿದ್ದಾರೆ.
2017-18ನೇ ಸಾಲಿನ ಶಾಸಕರ ವಾಜಪೇಯಿ ನಗರ ವಸತಿ ಯೋಜನೆಯ 300 ಆಸರೆ ಮನೆಗಳ ವಿತರಣೆಯನ್ನು ಕಾನೂನು ಬಾಹೀರವಾಗಿ ನಡೆಸಲಾಗಿದೆ. ಕೆಲ ಸದಸ್ಯರೇ ಹಣ ಪಡೆದು ತಮಗೆ ಬೇಕಾದವರಿಗೆ ಮನೆ ಹಾಕಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಅದನ್ನು ಮರುಪರಿಶೀಲನೆ ಮಾಡಿ ಅರ್ಹರಿಗೆ ಮಾತ್ರ ಮನೆ ಒದಗಿಸಿಕೊಡಬೇಕು.
ಅಲ್ಲಿವರೆಗೂ ಈಗ ನಡೆಸಲಾಗುತ್ತಿರುವ ಜಿಪಿಎಸ್ ಕಾರ್ಯ ಸ್ಥಗಿತಗೊಳಿಸಬೇಕು. ಅವ್ಯವಹಾರದಲ್ಲಿ ಭಾಗಿಯಾಗಿರುವ ಮುಖ್ಯಾಧಿಕಾರಿ ಮಾರುತಿ ನಡುವಿನಕೇರಿ ಅವರನ್ನು ಅಮಾನತು ಮಾಡಬೇಕು. ಅಕ್ರಮವಾಗಿ ಹಣ ಪಡೆದ ಸದಸ್ಯರ ಸದಸ್ಯತ್ವ ಅನರ್ಹಗೊಳಿಸಬೇಕು. ಮಹಿಳೆಯರಿಗೆ ಶೌಚಾಲಯ ನಿರ್ಮಿಸಬೇಕು. ಪ್ರತಿ ವಾರ್ಡುಗಳಲ್ಲಿ ಶುದ್ಧ ಕುಡಿವ ನೀರಿನ ಘಟಕ ಸ್ಥಾಪಿಸಬೇಕು. ಯಾವುದಾದರೂ ವೃತ್ತವೊಂದರಲ್ಲಿ ಶರಣ ವೀರೇಶ್ವರರ ಪುತ್ಥಳಿ ನಿರ್ಮಿಸಬೇಕು. ಬೀದಿ ದೀಪ ಅಳವಡಿಸಬೇಕು. ಆರೋಗ್ಯ ಕೇಂದ್ರಕ್ಕೆ ತಜ್ಞ ವೈದ್ಯರ ನೇಮಿಸಬೇಕು ಮುಂತಾದ ಬೇಡಿಕೆ ಇಟ್ಟು ಧರಣಿ ನಡೆಸಲಾಗುತ್ತಿದೆ.
ಶಾಸಕರ ಬೆಂಬಲಿಗರ ಕೈವಾಡ ಆರೋಪ: ಈ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ಸಂಘಟನೆ ಅಧ್ಯಕ್ಷ ಶಿವಾನಂದ ವಾಲಿ, ಶಾಸಕರ ಕೆಲ ಬೆಂಬಲಿಗರೆ ಅಕ್ರಮವಾಗಿ ಹಣ ವಸೂಲಿ ಮಾಡಿದ್ದಾರೆ ಎನ್ನುವ ಆರೋಪ ಕೇಳಿ ಬರುತ್ತಿದೆ. ಇದು ಶಾಸಕರ ಹೆಸರಿಗೆ ಕಳಂಕ ತರುವಂಥದ್ದಾಗಿದೆ.
ಶಾಸಕರು ಈ ಬಗ್ಗೆ ಗಂಭೀರವಾಗಿ ಚಿಂತನೆ ನಡೆಸಿ ತಪ್ಪಿತಸ್ಥ ಬೆಂಬಲಿಗರ ವಿರುದ್ಧ ಕ್ರಮ ಕೈಗೊಳ್ಳಬೇಕು. ಅಲ್ಲದೆ ಮನೆ ವಿತರಿಸುವ ಕಮೀಟಿ ಅಧ್ಯಕ್ಷರು ಶಾಸಕರೇ ಆಗಿದ್ದು ಅರ್ಹರಿಗೆ ಮಾತ್ರ ಮನೆ ವಿತರಣೆ ಆಗುವಂತೆ ನೋಡಿಕೊಳ್ಳಬೇಕು ಎಂದು ಒತ್ತಾಯಿಸಿದರು.
ಮಾತುಕತೆ ವಿಫಲ: ಧರಣಿ ವಿಷಯ ತಿಳಿದು ಮುದ್ದೇಬಿಹಾಳ ಪೊಲೀಸ್ ಠಾಣೆ ಪಿಎಸೈ ಮಲ್ಲಪ್ಪ ಮಡ್ಡಿ ಸ್ಥಳಕ್ಕೆ ಭೇಟಿ ನೀಡಿ ಅಹವಾಲು ಆಲಿಸಿದರು. ಬೇಡಿಕೆಗಳ ಕುರಿತ ಮನವಿ ಸಲ್ಲಿಸಿದಲ್ಲಿ ಅದನ್ನು ಸಂಬಂಧಿಸಿದವರಿಗೆ ರವಾನಿಸಿ ಬೇಡಿಕೆ ಈಡೇರಿಕೆ ನಿಟ್ಟಿನಲ್ಲಿ ಪ್ರಯತ್ನಿಸಲಾಗುತ್ತದೆ.
ಅಲ್ಲಿತನಕ ಧರಣಿ ಕೈಬಿಡುವಂತೆ ಮನವಿ ಮಾಡಿಕೊಂಡರು. ಇದನ್ನೊಪ್ಪದ ಧರಣಿ ನಿರತರು ವಿಜಯಪುರ ಜಿಲ್ಲಾಧಿಕಾರಿಗಳು, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿಗಳು ಹಾಗೂ ಸ್ಥಳೀಯ ಶಾಸಕರು ಸ್ಥಳಕ್ಕೆ ಭೇಟಿ ನೀಡಿ ಕ್ರಮ ಕೈಗೊಳ್ಳುವವರೆಗೆ ಧರಣಿ ಮುಂದುವರಿಸುತ್ತೇವೆ ಎಂದು ತಿಳಿಸಿದರು.
ಮುತ್ತು ಹೊಸಮಠ, ಸಂಗಮೇಶ ಕೆಂಭಾವಿ, ಮಲ್ಲಿಕಾರ್ಜುನ ಕೆಂಭಾವಿ, ಮಾಳಿಂಗರಾಯ ವನಹಳ್ಳಿ, ಅಮರೇಶ ಲೊಟಗೇರಿ, ರಮೇಶ ಗಂಗನಗೌಡರ, ವರುಣಗೌಡ ಗಂಗನಗೌಡರ, ಮಹಾಂತೇಶ ಹೆಸರೂರ, ಗಂಗು ಜೋಗಿ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ
Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ
Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್
BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ
SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು
MUST WATCH
ಹೊಸ ಸೇರ್ಪಡೆ
ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ
Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ
Gobi Manchurian ಬ್ಯಾನ್ ಎಫೆಕ್ಟ್: ಚಾಟ್ಸ್ ಮಾರಾಟ ಕುಸಿತ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು