ಬಸ್‌ಪಾಸ್‌ ಶೈಕ್ಷಣಿಕ ಅವಧಿ ವಿಸ್ತರಿಸಲು ಆಗ್ರಹ


Team Udayavani, Jul 4, 2022, 3:41 PM IST

19bus-pass

ವಿಜಯಪುರ: ಬಸ್‌ಪಾಸ್‌ ಅವಧಿ ವಿಸ್ತರಣೆ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಎಐಡಿಎಸ್‌ಒ ನೇತೃತ್ವದಲ್ಲಿ ವಿದ್ಯಾರ್ಥಿಗಳು ಬೇಡಿಕೆಗಳ ಫಲಕ ಪ್ರದರ್ಶಿಸಿ ಪ್ರತಿಭಟನೆ ನಡೆಸಿದರು.

ನೇತೃತ್ವ ವಹಿಸಿದ್ದ ಎಐಡಿಎಸ್‌ಒ ಜಿಲ್ಲಾ ಕಾರ್ಯದರ್ಶಿ ಕಾವೇರಿ ರಜಪೂತ ಮಾತನಾಡಿ, ರಾಜ್ಯದ ಪದವಿ ಹಾಗೂ ಇನ್ನಿತರ ಉನ್ನತ ಶಿಕ್ಷಣದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ಪಾಸ್‌ ಅನ್ನು ಸೆಪ್ಟೆಂಬರ್‌ 2021ರಲ್ಲಿ ನೀಡಲಾಗಿತ್ತು. ಆದರೆ ಅವರ ತರಗತಿಗಳು ನವೆಂಬರ್‌ನಲ್ಲಿ ಆರಂಭವಾಗಿವೆ. ಹಿಂದಿನಂತೆ ಶೈಕ್ಷಣಿಕ ಅವಧಿವರೆಗೆ ಪಾಸ್‌ ಮಾನ್ಯತೆ ವಿಸ್ತರಣೆ ಮಾಡಬೇಕು ಎಂದು ಆಗ್ರಹಿಸಿದರು.

ಮೊದಲ ವರ್ಷದ ವಿದ್ಯಾರ್ಥಿಗಳಿಗೆ ಡಿಸೆಂಬರ್‌ 2021ರಲ್ಲಿ ನೀಡಲಾಗಿತ್ತು. ವಿದ್ಯಾರ್ಥಿ ಬಸ್‌ಪಾಸ್‌ಗೆ ಅವರ ಶೈಕ್ಷಣಿಕ ವರ್ಷದ ಕೊನೆವರೆಗೂ ಮಾನ್ಯತೆ ಇರುತ್ತದೆ. ಇದು ಇಷ್ಟು ವರ್ಷಗಳವರೆಗೂ ನಡೆದುಕೊಂಡು ಬಂದಿರುವ ಪ್ರಕ್ರಿಯೆ. ಅಂದರೆ, ನವೆಂಬರ್‌ ತಿಂಗಳಲ್ಲಿ ತರಗತಿ ಆರಂಭದ ನಂತರ ಪಾಸ್‌ ಪಡೆದ ವಿದ್ಯಾರ್ಥಿಗಳು ಆಗಸ್ಟ್‌ವರೆಗೂ, ಡಿಸೆಂಬರ್‌ನಲ್ಲಿ ಪಾಸ್‌ ಪಡೆದ ವಿದ್ಯಾರ್ಥಿಗಳು ಸೆಪ್ಟೆಂಬರ್‌ವರೆಗೂ ಉಚಿತವಾಗಿ ಓಡಾಡಬಹುದಾಗಿದೆ ಎಂದು ವಿವರಿಸಿದರು.

ಆದರೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಏಕಾಏಕಿ ಜೂನ್‌ ತಿಂಗಳಿಗೆ ವಿದ್ಯಾರ್ಥಿ ಬಸ್‌ಪಾಸ್‌ ಅವಧಿ ಕೊನೆಗೊಳ್ಳಲಿರುವ ಕಾರಣ ಮುಂದಿನ ತಿಂಗಳಿನಿಂದ ದುಡ್ಡು ಕೊಟ್ಟು ಓಡಾಡಬೇಕು ಎಂದು ಹೇಳಿರುವುದು ವಿದ್ಯಾರ್ಥಿಗಳಲ್ಲಿ ಆತಂಕ ಸೃಷ್ಟಿಸಿದೆ. ಇದರಿಂದ ಗ್ರಾಮೀಣ ಬಡ ಕುಟುಂಬಗಳ ವಿದ್ಯಾರ್ಥಿಗಳಿಗೆ ಸಮಸ್ಯೆ ಉಂಟು ಮಾಡಿದೆ ಎಂದು ದೂರಿದರು.

ಹಲವು ವರ್ಷಗಳ ಹೋರಾಟದ ಫಲವಾಗಿ ವಿದ್ಯಾರ್ಥಿಗಳು ರಿಯಾಯಿತಿ ಪಾಸ್‌ ಅನ್ನು ಪಡೆದುಕೊಂಡಿದ್ದೇವೆ. ವಾಸ್ತವವಾಗಿ, ನಮ್ಮ ಹೋರಾಟ ಉಚಿತ ಪಾಸ್‌ ನೀಡಬೇಕು ಎಂಬುದೇ ಆಗಿದೆ. ಹೀಗಿರುವಾಗ, ಶೈಕ್ಷಣಿಕ ವರ್ಷದ ಅವಧಿ ಮುಗಿಯುವ ಮುನ್ನವೇ ಮಾನ್ಯತೆ ರದ್ದಾಗಿದೆ ದುಡ್ಡು ಕೊಟ್ಟು ಓಡಾಡಬೇಕು ಎನ್ನುವುದು, ಈಗಾಗಲೇ ಆರ್ಥಿಕ ಸಂಕಷ್ಟದಲ್ಲಿರುವ ವಿದ್ಯಾರ್ಥಿಗಳ ಮೇಲೆ ಮತ್ತಷ್ಟು ಹೊರೆ ಹೊರಿಸಿದಂತಾಗಿದೆ ಎಂದರು.

ಶಿಕ್ಷಣ ಉಳಿಸಿ ಸಮಿತಿ ಎಚ್‌.ಟಿ.ಭರತಕುಮಾರ ವಿದ್ಯಾರ್ಥಿಳ ಹೋರಾಟಕ್ಕೆ ಬೆಂಬಲಿಸಿ ಮಾತನಾಡಿದರು. ಸಂಘಟನೆಯ ದೀಪಾ ವಡ್ಡರ, ಅಜಿತ್‌, ವಿದ್ಯಾರ್ಥಿಗಳಾದ ಆಯಿಶಾ, ಹನುಮಂತ ಪಾಟೀಲ, ಹನುಮಂತ ಉಪ್ಪಾರ, ಮಹಾಂತೇಶ ಬಿರಾದಾರ, ವಿಕಾಸ್‌ ಬಡಿಗೇರ, ವಸಂತ ವಾಲೀಕಾರ, ಬಿ.ಹನುಮಂತ ಸೇರಿದಂತೆ ಇತರರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

1-qeqewqe

Amethi; ಸ್ಮೃತಿ ಇರಾನಿ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದ ವಿಕಾಸ್ ಅಗ್ರಹಾರಿ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್‌ 500 ಕೋಟಿ ರೂ. ಖರ್ಚು’

Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್‌ 500 ಕೋಟಿ ರೂ. ಖರ್ಚು’

Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ

Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

12-fusion

UV Fusion: ಆಕೆಗೂ ಒಂದು ಮನಸ್ಸಿದೆ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

1-qeqewqe

Amethi; ಸ್ಮೃತಿ ಇರಾನಿ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದ ವಿಕಾಸ್ ಅಗ್ರಹಾರಿ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.