ಬೆಳೆ ಹಾನಿ ಪರಿಹಾರ ಒದಗಿಸಲು ಆಗ್ರಹ
Team Udayavani, Jul 26, 2022, 6:02 PM IST
ತಾಳಿಕೋಟೆ: ಕೃಷಿ ಹಾಗೂ ಕೂಲಿಯನ್ನೆ ನಂಬಿರುವ ರೈತರು ಸಾಲ ಮಾಡಿ ಸತತ ಕಳೆದ ಮೂರು ವರ್ಷದಿಂದ ವಿಮೆ ಕಂತು ತುಂಬಿದ್ದಾರೆ. ಇತ್ತ ಬೆಳೆಯೂ ಬಂದಿಲ್ಲ, ಮತ್ತೂಂದೆಡೆ ಪರಿಹಾರವೂ ಬಂದಿಲ್ಲ. ಕೂಡಲೇ ಫಸಲ್ ಬೀಮಾ ಯೋಜನೆ ಮೇಲೆ ರೈತರು ನಂಬಿಕೆ ಕಳೆದುಕೊಳ್ಳುವ ಮುಂಚೆ ಪರಿಹಾರ ಒದಗಿಸಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ಸಂಗಮೇಶ ಸಗರ ಒತ್ತಾಯಿಸಿದರು.
ಸೋಮವಾರ ಉಪ ತಹಶೀಲ್ದಾರ್ ಗೆ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ಮನವಿ ಸಲ್ಲಿಸಿ ಮಾತನಾಡಿದ ಅವರು, ತಾಲೂಕಿನ ಕೆಲವು ಕಡೆಗಳಲ್ಲಿ ಒಂದು ಪ್ರದೇಶದ ಕೆಲವು ರೈತರಿಗೆ ಫಸಲ್ ಬೀಮಾ ಯೋಜನೆ ಹಣ ಜಮೆಯಾದರೆ ಇನ್ನೊಂದು ಪ್ರದೇಶದ ರೈತರಿಗೆ ಹಣ ಜಮೆಯಾಗಿಲ್ಲ. ಕೆಲವು ಪ್ರದೇಶದ ರೈತರಿಗೆ ಹೆಚ್ಚಿಗೆ ಹಣ ಜಮೆಯಾದರೆ ಇನ್ನೊಂದು ಪ್ರದೇಶದ ರೈತರಿಗೆ ಕಡಿಮೆ ಹಣ ಜಮೆಯಾಗಿದೆ ಎಂದರು.
ವಿಮೆ ಕಂಪನಿಯವರು ಅವೈಜ್ಞಾನಿಕವಾಗಿ ವರದಿ ಸಲ್ಲಿಸಿದ ಅಧಿಕಾರಿಗಳ ಕುಮ್ಮಕ್ಕಿನಿಂದ ವಿಮೆ ಹಣ ಗೋಲಮಾಲ್ ಮಾಡಲು ನಡೆದಿರುವ ಕುತಂತ್ರವೆಂಬುದು ಮೇಲ್ನೋಟಕ್ಕೆ ಕಾಣುತ್ತಿದೆ. ವೀಕ್ಷಣೆ ಮಾಡುವವರು ಬೇರೆ ಕಡೆ ಕುಳಿತು ಅಂದಾಜು ವರದಿ ಸಲ್ಲಿಸಿದಾಗಲೂ ಈ ಘಟನೆ ನಡೆದಿರಲು ಸಾಧ್ಯತೆಗಳಿವೆ ಎಂದು ಆರೋಪಿಸಿದರು.
ಫಸಲ್ ಬಿಮಾ ಯೋಜನೆ ಬಗ್ಗೆ ರೈತರು ಸಂಪೂರ್ಣ ನಂಬಿಕೆ ಕಳೆದುಕೊಳ್ಳುತ್ತಿದ್ದಾರೆ. ಅದಕ್ಕೂ ಮುಂಚೆ ಜನರಿಗೆ ಸೂಕ್ತ ನ್ಯಾಯ ಒದಗಿಸಬೇಕು. ಅದೇ ರೀತಿ ಈಗಾಗಲೇ ನಮ್ಮ ಜಿಲ್ಲೆಯಲ್ಲಿ ಮುಂಗಾರು ಸಂಪೂರ್ಣ ಕೈ ಕೊಟ್ಟು ರೈತರು ಬೀಜ ಗೊಬ್ಬರ ಭೂಮಿಗೆ ಚೆಲ್ಲಿ ಮುಗಿಲಿನತ್ತ ಮುಖ ಮಾಡಿದ್ದಾರೆ. ಅದಕ್ಕೆ ಮಾಡಿದ ಸಾಲ ಹೇಗೆ ತೀರಿಸುವುದು ಎಂಬ ಚಿಂತೆಯಲ್ಲಿದ್ದಾರೆ. ಆದಷ್ಟು ಬೇಗ ಹಳೆಯ ವಿಮೆ ಜಮಾ ಆಗುವಂತೆ ಮತ್ತು ಈ ವರ್ಷದ ಮುಂಗಾರು ವಿಫಲ ಎಂದು ಘೋಷಿಸಿ ರೈತರಿಗೆ ಸೂಕ್ತ ಪರಿಹಾರ ಒದಗಿಸಿಕೊಡಬೇಕೆಂದು ಒತ್ತಾಯಿಸಿದರು.
ಕಲಕೇರಿ ಪಟ್ಟಣದ ಅಧ್ಯಕ್ಷ ಶಾಂತಯ್ಯ ಗಣಾಚಾರಿ, ಹೋಬಳಿ ಅಧ್ಯಕ್ಷ ಮೆಹಬೂಬ ಭಾಷಾ ಮನಗೂಳಿ, ಉಪಾಧ್ಯಕ್ಷ ಪುಂಡಲೀಕ ಚವ್ಹಾಣ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್
BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ
SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು
Muddebihal: ಆಕಸ್ಮಿಕ ಬೆಂಕಿ: 2 ಲಕ್ಷ ಮೌಲ್ಯದ ಗುಜರಿ ಸಾಮಗ್ರಿ ಬೆಂಕಿಗಾಹುತಿ
BJP; ಜಿಗಜಿಣಗಿ ಹಠಾವೋ, ಬಿಜೆಪಿ ಬಚಾವೋ ಘೋಷಣೆ, ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!