ಕಲಗುರ್ಕಿ ಬಳಿ ರೈಲ್ವೆ ಸೇತುವೆ ಕಾಮಗಾರಿ ತ್ವರಿತಕ್ಕೆ ಆಗ್ರಹ


Team Udayavani, Sep 17, 2019, 3:25 PM IST

vp-tdy-2

ವಿಜಯಪುರ: ಕಲಗುರ್ಕಿ ಬಳಿ ರೈಲ್ವೆ ಸೇತುವೆ ನಿರ್ಮಾಣ ಕಾಮಗಾರಿ ತ್ವತರಿತಗೊಳಿಸುವಂತೆ ಆಗ್ರಹಿಸಿ ರೈತರು ನಗರದಲ್ಲಿ ಪ್ರತಿಭಟನಾ ರ್ಯಾಲಿ ನಡೆಸಿದರು.

ವಿಜಯಪುರ: ನೀರಾವರಿ ಕಾಲುವೆಗೆ ನೀರು ಹರಿಸಲು ಕಲಗುರ್ಕಿ ಬಳಿ ರೈಲ್ವೆ ಸೇತುವೆ ನಿರ್ಮಾಣ ಕಾಮಗಾರಿಯನ್ನು ತ್ವರಿತಗೊಳಿಸುವಂತೆ ಆಗ್ರಹಿಸಿ ರೈತರು ನಗರದಲ್ಲಿ ಪ್ರತಿಭಟನಾ ರ್ಯಾಲಿ ನಡೆಸಿದರು. ಐದು ದಿನಗಳಲ್ಲಿ ಕಾಮಗಾರಿ ಮುಗಿಸದಿದ್ದರೆ ರೈಲ್ವೆ ಹಳಿ ಮೇಲೆ ಮಲಗಿ ಪ್ರತಿಭಟಿಸುವುದಾಗಿ ಎಚ್ಚರಿಕೆ ನೀಡಿದರು.

ಸೋಮವಾರ ಅಖಂಡ ಕರ್ನಾಟಕ ರೈತ ಸಂಘದ ನೇತೃತ್ವದಲ್ಲಿ ರೈತರು ಪಾದಯಾತ್ರೆ ನಡೆಸಿದರು. ನಗರದ ಗಾಂಧಿಧೀಜಿ ವೃತ್ತದಿಂದ ಪ್ರತಿಭಟನೆ ಆರಂಭಿಸಿದ ಅನ್ನದಾತರು, ನಗರದಲ್ಲಿರುವ ರೈಲ್ವೆ ನಿಲ್ದಾಣಕ್ಕೆ ತೆರಳಿ ಪ್ರತಿಭಟನೆ ನಡೆಸಿ ನಂತರ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು.

ಈ ವೇಳೆ ಅಖಂಡ ಕರ್ನಾಟಕ ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಮಾತನಾಡಿ, ಜಿಲ್ಲೆಯ ನೀರಾವರಿ ಯೋಜನೆಗಳ ಕಾಮಗಾರಿ ವಿಷಯದಲ್ಲಿ ರೈಲ್ವೆ ಇಲಾಖೆ ಅಧಿಕಾರಿಗಳು ಕಲಗುರ್ಕಿ ರೈಲ್ವೆ ಸೇತುವೆಗಳ ಕೆಳಗೆ ಪುಸ್ಸಿಂಗ್‌ ಬಾಕ್ಸ್‌ ನಿರ್ಮಾಣ ನೆಪದಲ್ಲಿ ನೀರು ಹರಿಸುವುದನ್ನು ಸ್ಥಗಿತಗೊಳಿಸುತ್ತಿದ್ದಾರೆ. ಆರೇಳು ತಿಂಗಳ ಹಿಂದೆ ಕೂಡ ಕೂಡಗಿ ಬಳಿ ಪುಸ್ಸಿಂಗ್‌ ಬಾಕ್ಸ್‌ ಕಾಮಗಾರಿ ವಿಷಯದಲ್ಲೂ ಇದೇ ರೀತಿ ಸಮಸ್ಯೆ ಮಾಡಿದ್ದರಿಂದ ನೀರು ಹರಿಸುವುದನ್ನು ಸ್ಥಗಿತಗೊಳಿಸಿದ್ದರು. ನಮ್ಮ ಸಂಘಟನೆ ಮೂಲಕ ರೈತರು ಪ್ರತಿಭಟನೆ ನಡೆಸಿದ ಬಳಿಕ ನೀರು ಹರಿಸಲು ಅವಕಾಶ ಕಲ್ಪಿಸಿದ್ದರು ಎಂದು ದೂರಿದರು.

ಇದೀಗ ಕಲಗುಕಿ-ತಳೆವಾಡ ಗ್ರಾಮದ ಬಳಿ ಹಾದು ಹೋಗಿರುವ ರೈಲ್ವೆ ಹಳಿ ಕೆಳಗಡೆ ಮುಳವಾಡ ಏತ ನೀರಾವರಿಗೆ ಸಂಬಂಧಿಸಿದ ಮನಗೂಳಿ ಶಾಖಾ ಕಾಲುವೆ ಹಾಯ್ದು ಹೋಗಿದ್ದು ಅಲ್ಲಿ ಪುಸ್ಸಿಂಗ್‌ ಬಾಕ್ಸ್‌ ಕಾಮಗಾರಿ ನಡೆಯುತ್ತಿದೆ. ಈ ನೆಪದಲ್ಲಿ ನೀರು ಹರಿಸುವುದನ್ನು ರೈಲ್ವೆ ಇಲಾಖೆ ತಡೆ ಹಿಡಿದಿದೆ. ಇದರಿಂದ ಆ ಭಾಗದ ಸುಮಾರು 15 ಹಳ್ಳಿಗಳಲ್ಲಿ ಕುಡಿಯುವ ನೀರಿನ ತತ್ವಾರ ಉಂಟಾಗಿದೆ. ಜಾನುವಾರುಗಳಿಗೆ ನೀರು ಸಿಗುತ್ತಿಲ್ಲ. ತಕ್ಷಣ ಕಾಮಗಾರಿ ನಿಲ್ಲಿಸಿ ಅಥವಾ ಪಕ್ಕದಲ್ಲಿ ಬೇರೆ ಕಾಲುವೆ ತೋಡಿ ಪೈಪ್‌ ಅಳವಡಿಸಿ ಕಾಲುವೆಗೆ ನೀರು ಹರಿಸಿ ಕೆರೆ ತುಂಬಿಸಲು ಅನುವು ಮಾಡಿಕೊಡಬೇಕು ಎಂದು ಆಗ್ರಹಿಸಿದರು.

ಧರಣಿ ಸ್ಥಳಕ್ಕೆ ಆಗಮಿಸಿ ಮನವಿ ಸ್ವೀಕರಿಸಿದ ಅಧಿಕಾರಿಗಳು, ಶೀಘ್ರವೇ ಸೇತುವೆ ಕಾಮಗಾರಿ ಮುಗಿಸಿ ನಾಲೆಗೆ ನೀರು ಹರಿಸಲು ಅವಕಾಶ ಕಲ್ಪಿಸಿಕೊಡುವುದಾಗಿ ಭರವಸೆ ನೀಡಿದರು. ಇದಕ್ಕೆ ಒಪ್ಪದ ರೈತರು ಕಾಮಗಾರಿ ಮುಗಿಸುವ ಕುರಿತು ನಿರ್ದಿಷ್ಟ ದಿನವನ್ನು ಪ್ರಕಟಿಸಬೇಕು ಎಂದು ಪಟ್ಟು ಹಿಡಿದರು. ಮೇಲಧಿಕಾರಿಗಳ ಗಮನಕ್ಕೆ ತಂದು ಆದಷ್ಟು ಶೀಘ್ರದಲ್ಲಿ ಸಮಸ್ಯೆ ಬಗೆಹರಿಸುವುದಾಗಿ ಸಮಜಾಯಿಸಿ ನೀಡಿದರು.

ಸಂಘಟನೆ ಜಿಲ್ಲಾಧ್ಯಕ್ಷ ಸಿದ್ರಾಮಪ್ಪ ರಂಜಣಗಿ, ಮುಖಂಡರಾದ ಅಪ್ಪುಗೌಡ ಪಾಟೀಲ (ಮನಗೂಳಿ), ಹುಣಶ್ಯಾಳ ಶ್ರೀಮಠದ ಸಂಗನಬಸವ ಶ್ರೀಗಳು ಹೋರಾಟ ಬೆಂಬಲಿಸಿ ಮಾತನಾಡಿದರು.

ಸದಾಶಿವ ಬರಟಗಿ, ಸಿದ್ರಾಮ ಅಂಗಡಗೇರಿ, ಹೊನಕೇರಪ್ಪ ತೆಲಗಿ, ಈರಣ್ಣ ದೇವರಗುಡಿ, ಶಾರದಾ ಲಮಾಣಿ, ಕೃಷ್ಣಪ್ಪ ಬಮರಡ್ಡಿ, ಮಲ್ಲಯ್ಯ ಮಠಪತಿ, ದಯಾನಂದ ವಸ್ತ್ರದ, ಶ್ರೀಶೈಲ ನಾಗೋಡ, ರಾಮಣ್ಣ ಶೀರಾಗೋಳ, ಸಿದ್ದನಗೌಡ ಬಿರಾದಾರ, ಚನ್ನಪ್ಪ ತೋಟದ, ವಿಠuಲ ಕರಿಗೇರ, ಮಹೇಶ ಬಿರಾದಾರ, ದ್ಯಾಮಣ್ಣ ಕಾಡಸಿದ್ದ, ಬಾಪು ಬೆಲ್ಲದ, ಸಿದ್ದು ದೇಸಾಯಿ, ರೇವಣಪ್ಪ ಕಾಡಸಿದ್ದ, ಶ್ರೀಶೈಲ ಸಂಗಾಪುರ, ಶಂಕ್ರಪ್ಪ ತೋಟದ, ಸಿದ್ದಪ್ಪ ಕಲಬೀಳಗಿ, ಪ್ರಭು ಬಸ್ತವಾಡ, ಯಲ್ಲಪ್ಪ ಬಿರಾದಾರ, ಬಸವರಾಜ ಬಮರಡ್ಡಿ, ಮಲ್ಲಪ್ಪ ತೋಟದ, ಲಕ್ಷ್ಮಣ ಬಾಲ್ಯಾಳ, ಈರಣ್ಣ ಪೂಜಾರಿ, ಚಿದಯ್ಯ ಮಠಪತಿ, ಕಲ್ಲಯ್ಯ ವಸ್ತ್ರದ ಸೇರಿದಂತೆ ಇತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.