ಮದ್ಯಪಾನ ಶಾಶ್ವತ ನಿಷೇಧಕ್ಕೆ ಆಗ್ರಹ
Team Udayavani, May 14, 2020, 5:27 AM IST
ವಿಜಯಪುರ: ರಾಜ್ಯದಲ್ಲಿ ಸಂಪೂರ್ಣವಾಗಿ ಮದ್ಯಪಾನ ನಿಷೇಧಿಸುವಂತೆ ಆಗ್ರಹಿಸಿ ಕಿತ್ತೂರ ರಾಣಿ ಚನ್ನಮ್ಮ ವಿಶ್ವ ಲಿಂಗಾಯತ ಪಂಚಮಸಾಲಿ ಸೇವಾ ಸಮಿತಿ ನೇತೃತ್ವದಲ್ಲಿ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಸಂಘಟನೆ ಮುಖಂಡ ದಾನೇಶ ಅವಟಿ ಮಾತನಾಡಿ, ರಾಜ್ಯದಲ್ಲಿ ಕೋವಿಡ್ ರೋಗ ಭೀತಿ ಮಿತಿ ಮೀರಿದ್ದು, ಇದರ ನಿಯಂತ್ರಣಕ್ಕೆ ನಡೆಯುತ್ತಿರುವ ಪ್ರಯತ್ನಗಳು ಪೂರ್ಣ ಪ್ರಮಾಣದಲ್ಲಿ ಫಲ ನೀಡಿಲ್ಲ. ಮತ್ತೂಂದೆಡೆ ಲಾಕ್ ಡೌನ್ ಸಂದರ್ಭದಲ್ಲಿ ರಾಜ್ಯ ಸರ್ಕಾರ ಮದ್ಯ ನಿಷೇ ಧಿಸಿದ್ದರಿಂದ ಮದ್ಯ ವ್ಯಸನಿಗಳ ಕುಟುಂಗಳು ನೆಮ್ಮದಿ ಜೀವನ ನಡೆಸುತ್ತಿದ್ದವು. ಆದರೆ ಇದೀಗ ಸರ್ಕಾರ ಮದ್ಯ ಮಾರಾಟ ಆರಂಭಿಸಿದ್ದು, ಮದ್ಯ ವ್ಯಸನಿಗಳ ಕುಟುಂಬಗಳು ಸಂಕಷ್ಟಕ್ಕೆ ಸಿಲಕುತ್ತಿವೆ ಎಂದು ವಿಷಾದಿಸಿದರು.
ಸಮಿತಿ ಅಧ್ಯಕ್ಷ ಸಿದ್ದು ಅವಟಿ ಮಾತನಾಡಿ, ಮದ್ಯ ವ್ಯಸನಿಗಳು ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಸೋಂಕು ಪಸರಿಸಲು ಮತ್ತಷ್ಟು ಪ್ರೇರಕರಾಗುತ್ತಿದ್ದಾರೆ. ಕಾರಣ ರಾಜ್ಯದಲ್ಲಿ ಪೂರ್ಣ ಪ್ರಮಾಣದಲ್ಲಿ ಪಾನ ನಿಷೇಧಿಸುವಂತೆ ಆಗ್ರಹಿಸಿದರು.
ಈ ಸಂದರ್ಭದಲ್ಲಿ ನಿಂಗಪ್ಪ ಸಂಗಾಪುರ, ಜಗದೀಶ ಬಳೂತಿ, ಅವಿನಾಶ ಚಂಚಲಕರ, ಮಹಿಬೂಬ ರೋಜಿ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ
Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್ 500 ಕೋಟಿ ರೂ. ಖರ್ಚು’
MUST WATCH
ಹೊಸ ಸೇರ್ಪಡೆ
Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು
New Jersey: ಸ್ಥಳೀಯ ಶಾಪ್ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
Mangaluru; ಕಾರಿಗೆ ಪೆಟ್ರೋಲ್ ಬದಲು ಡೀಸೆಲ್ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ
RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್