ತೊಗರಿ ಖರೀದಿ ಕೇಂದ್ರಕ್ಕೆ ಆಗ್ರಹ
Team Udayavani, Jan 21, 2020, 1:18 PM IST
ದೇವರಹಿಪ್ಪರಗಿ: ಯಲಗೋಡ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ತೊಗರಿ ಖರೀದಿ ಕೇಂದ್ರ ಮಂಜೂರು ಮಾಡುವಂತೆ ಆಗ್ರಹಿಸಿ ಗ್ರಾಮಸ್ಥರು ತಹಶೀಲ್ದಾರ್ ವೈ.ಬಿ. ನಾಗಠಾಣ ಅವರಿಗೆ ಮನವಿ ಸಲ್ಲಿಸಿದರು.
ಪಟ್ಟಣದ ತಹಶೀಲ್ದಾರ್ ಕಚೇರಿಗೆ ಆಗಮಿಸಿದ ಗ್ರಾಮಸ್ಥರು ಹಾಗೂ ಪ್ರಗತಿಪರ ಸಂಘಟನೆಗಳ ಪದಾಧಿ ಕಾರಿಗಳು ಗ್ರಾಮಕ್ಕೆ ತೊಗರಿ ಖರೀದಿ ಕೇಂದ್ರ ಮಂಜೂರು ಮಾಡುವಂತೆ ಆಗ್ರಹಿಸಿದರು. ಈ ವೇಳೆ ಸಾಯಬಣ್ಣ ಬಾಗೇವಾಡಿ ಮಾತನಾಡಿ, ಗ್ರಾಮದ ಪಿಕೆಪಿಎಸ್ ವ್ಯಾಪ್ತಿಗೆ ಮೂರರಿಂದ ನಾಲ್ಕು ಗ್ರಾಮಗಳು ಬರುತ್ತಿದ್ದು ಈ ಗ್ರಾಮಗಳ ರೈತರಿಗೆ ಅನುಕೂಲವಾಗುವಂತೆ ತೊಗರಿ ಖರೀದಿ ಕೇಂದ್ರ ಆರಂಭಿಸಬೇಕು.
ಗ್ರಾಮದಲ್ಲಿ ಖರೀದಿ ಕೇಂದ್ರಕ್ಕೆ ಸಹಕಾರಿಯಾಗುವಂತೆ 150 ಟನ್ ಸಾಮರ್ಥ್ಯದ ಸಂಗ್ರಹಣಾಲಯಗಳು ಲಭ್ಯವಿವೆ. ಈ ಎಲ್ಲ ಕಾರಣಗಳನ್ನು ಪರಿಶೀಲಿಸಿ ಅಗತ್ಯವಾದ ಕೇಂದ್ರ ಮಂಜೂರು ಮಾಡಬೇಕು ಎಂದು ಒತ್ತಾಯಿಸಿದರು.
ರಾಜು ಮೆಟಗಾರ, ಮಲ್ಲು ಜಮಾದಾರ, ಆಕಾಶ ಬೂದಿಹಾಳ, ಉಮೇಶ ಇಂಗಳಗಿ, ಸೋಮಶೇಖರ ಹೊಸಮನಿ, ಬಸವರಾಜ ನಾಟೀಕಾರ,ಅರವಿಂದ , ಪರಶುರಾಮ ನಾಟೀಕಾರ, ಮಲಕಣ್ಣ ಸುಣಗಾರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Bengaluru: ಕದಂಬ ಹೋಟೆಲ್ ಸ್ಫೋಟ ಮಾಡುವುದಾಗಿ ಬೆದರಿಕೆ