ಪೌರತ್ವ ಕಾಯ್ದೆಯಿಂದ ತೊಂದರೆಯಾಗದು
ಬಿಜೆಪಿ ಕಾರ್ಯಕರ್ತರಿಂದ ಜಾಗೃತಿಕಾಂಗ್ರೆಸ್ನಿಂದ ಅರಾಜಕತೆ-ಗೊಂದಲ ಸೃಷ್ಟಿಸುವ ಕೆಲಸ
Team Udayavani, Jan 9, 2020, 11:54 AM IST
ದೇವರಹಿಪ್ಪರಗಿ: ಪೌರತ್ವ ಕಾಯ್ದೆಯಿಂದ ದೇಶದ ಯಾವೊಬ್ಬ ಭಾರತೀಯರಿಗೂ ತೊಂದರೆಯಾಗದು. ವಿನಾಕಾರಣ ಕಾಂಗ್ರೆಸ್ನವರು ದೇಶದಲ್ಲಿ ಅರಾಜಕತೆ ಉಂಟು ಮಾಡುತ್ತಿದ್ದಾರೆ ಎಂದು ಶಾಸಕ ಸೋಮನಗೌಡ ಪಾಟೀಲ ಸಾಸನೂರ ಹೇಳಿದರು.
ಪಟ್ಟಣದ ಡಾ| ಅಂಬೇಡ್ಕರ್ ವೃತ್ತದಲ್ಲಿ ಪೌರತ್ವ ಕಾಯ್ದೆ ಕುರಿತು ಜಾಗೃತಿ ಮೂಡಿಸುವ ಮಹಾಸಂಪರ್ಕ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ಕಾಯ್ದೆಯಿಂದ ತೊಂದರೆ ಇರದಿದ್ದರೂ ಕಾಂಗ್ರೆಸ್ ತನ್ನ ಬೇಳೆ ಬೇಯಿಸಿಕೊಳ್ಳಲು ಒಂದು ಸಮುದಾಯವನ್ನು ಎತ್ತಿ ಕಟ್ಟುತ್ತಿದೆ. ಸ್ವಾರ್ಥ ರಾಜಕೀಯಕ್ಕಾಗಿ ಅಮಾಯಕರನ್ನು ಬೀದಿಗಿಳಿಸುತ್ತಿದ್ದಾರೆ ಎಂದು ಆರೋಪಿಸಿದರು.
ಬಿಜೆಪಿ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಅಶೋಕ ಅಲ್ಲಾಪುರ ಮಾತನಾಡಿ, ಪೌರತ್ವ ಕಾಯ್ದೆ ಯಾರ ವಿರೋಧವೂ ಅಲ್ಲ-ಪರವೂ ಅಲ್ಲ. ದೇಶದ ಒಳಿತಿಗಾಗಿ ಜಾರಿಗೆ ತರಲಾಗುತ್ತಿದೆ. ಅದಕ್ಕಾಗಿ ಬಿಜೆಪಿ ಪಕ್ಷದ ವತಿಯಿಂದ ದೇವರಹಿಪ್ಪರಗಿ ಮತಕ್ಷೇತ್ರದಲ್ಲಿ ಮಹಾಸಂಪರ್ಕ ಅಭಿಯಾನ ಪ್ರಾರಂಭಿಸಲಾಗಿದೆ. ಕ್ಷೇತ್ರದ 6 ಮಹಾಶಕ್ತಿ ಕೇಂದ್ರಗಳ ಮೂಲಕ 353 ಬೂತ್ಗಳಿಗೂ ಕಾರ್ಯಕರ್ತರು ಮನೆ-ಮನೆಗೆ ತೆರಳಿ ಭಿತ್ತಿ ಪತ್ರ ಹಂಚುವ ಜೊತೆಗೆ ಜಾಗೃತಿ ಮೂಡಿಸಲಿದ್ದಾರೆ. ಅದಕ್ಕಾಗಿ ಎಲ್ಲರೂ ಸಹಕಾರ ನೀಡಬೇಕು ಎಂದರು.
ಮಂಡಲ ಅಧ್ಯಕ್ಷ ಭೀಮನಗೌಡ ಸಿದರೆಡ್ಡಿ, ರಮೇಶ ಮಸಬಿನಾಳ, ರಾಜು ಮೆಟಗಾರ, ಮಡುಗೌಡ ಬಿರಾದಾರ, ಸಂಗಮೇಶ ಮಸಬಿನಾಳ, ಶಂಖರಗೌಡ ಕೋಟಿಖಾನಿ, ಸೋಮು ಹಿರೇಮಠ, ರಾಘವೇಂದ್ರ ಗುಡಿಮನಿ, ಕಾಶೀನಾಥ ಚವ್ಹಾಣ, ಭೀಮನಗೌಡ ಲಚ್ಯಾಣ, ರಾವುತ್ ಅಗಸರ, ಶ್ರೀಕಾಂತ ಭಜಂತ್ರಿ, ರಮೇಶ ಈಳಗೇರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ
Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !