ಅಧ್ಯಯನದೊಂದಿಗೆ ಕ್ರೀಡಾಸಕ್ತಿ ಬೆಳೆಸಿಕೊಳ್ಳಿ


Team Udayavani, Sep 4, 2017, 12:34 PM IST

VIJ-2.jpg

ಬಸವನಬಾಗೇವಾಡಿ: ವಿದ್ಯಾರ್ಥಿಗಳು ತಮ್ಮ ಅಧ್ಯಯನದೊಂದಿಗೆ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗವಹಿಸಬೇಕು ಎಂದು ಕರ್ನಾಟಕ ರಾಜ್ಯ ನಗರ ನೀರು ಸರಬುರಾಜು ಮತ್ತು ಒಳಚರಂಡಿ ನಿಗಮ ಮಂಡಳಿ ಅಧ್ಯಕ್ಷ ಶಾಸಕ ಶಿವಾನಂದ ಪಾಟೀಲ ಹೇಳಿದರು.

ಬಸವೇಶ್ವರ ದೇವಸ್ಥಾನದ ಇಂಟರ್‌ ನ್ಯಾಶನಲ್‌ ಶಾಲೆ ಮೈದಾನದಲ್ಲಿ ರವಿವಾರ ಕರ್ನಾಟಕ ಮಿನಿ ಫುಟ್‌ಬಾಲ್‌ ಅಸೋಸಿಯೇಶನ್‌ ಹಾಗೂ ಬಸವೇಶ್ವರ ದೇವಸ್ಥಾನದ ಇಂಟರ್‌ ನ್ಯಾಶನಲ್‌ ಶಾಲೆ ಸಹಯೋಗದಲ್ಲಿ ಹಮ್ಮಿಕೊಂಡಿರುವ ರಾಜ್ಯಮಟ್ಟದ ಮಿನಿ ಫುಟ್‌ಬಾಲ್‌ ಪಂದ್ಯಾವಳಿ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್ಚು ಹೆಚ್ಚು ರಾಜ್ಯ, ರಾಷ್ಟ್ರಮಟ್ಟದ ಕ್ರೀಡಾ ಚಟುವಟಿಕೆಗಳು ಜರುಗಿದಾಗ
ಮಾತ್ರ ಇಲ್ಲಿ ಅನೇಕ ಪ್ರತಿಭಾವಂತ ಕ್ರೀಡಾಪಟುಗಳಿಗೆ ಅವಕಾಶ ದೊರಕದಂತಾಗುತ್ತದೆ. ಈ ನಿಟ್ಟಿನಲ್ಲಿ ಇಂತಹ ಚಟುವಟಿಗಳು ಉತ್ತರ ಕರ್ನಾಟಕ ಭಾಗದಲ್ಲಿ ನಡೆಯಲಿ ಎಂದು ಹೇಳಿದರು.

ಪ್ರಾಥಮಿಕ ಹಂತದಿಂದಲೇ ದೈಹಿಕ ಶಿಕ್ಷಣದ ಬಗ್ಗೆ ಅರಿವು ಮೂಡಿಸಿ ಆರೋಗ್ಯವಂತ ಪ್ರಜೆಗಳ ನಿರ್ಮಾಣ ಮಾಡುವುದು ಅಗತ್ಯವಿದೆ. ಸದೃಢವಾದ ಶರೀರವಿದ್ದರೆ ಮಾತ್ರ ಬೌದ್ಧಿಕವಾಗಿ ಬೆಳೆಯಲು ಪೂರಕವಾಗುತ್ತದೆ. ವಿದ್ಯಾರ್ಥಿಗಳು ತಾವು ಗಳಿಸಿದ ಜ್ಞಾನವನ್ನು ಸಾಮರ್ಥಯವನ್ನಾಗಿ ಪರಿವರ್ತಿಸಿ ತನಗಾಗಿ, ದೇಶದ ಅಭಿವೃದ್ಧಿಗಾಗಿ ಬಳಕೆ ಮಾಡಿಕೊಂಡರೆ ಸಾರ್ಥಕವಾಗುತ್ತದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಉತ್ತಮ ಜ್ಞಾನ ಹೊಂದುವಂತಾಗಬೇಕೆಂದರು.

ಪ್ರಪಂಚದ ಪ್ರಸಿದ್ಧ ಕ್ರೀಡೆಗಳಲ್ಲಿ ಫುಟ್‌ಬಾಲ್‌ ಒಂದಾಗಿದೆ. ಈ ಕ್ರೀಡೆ ಕ್ರಿ.ಪೂ ಕಾಲದಿಂದಲೂ ಬಂದಿದೆ. ಫುಟ್‌ಬಾಲ್‌ದಲ್ಲಿ ಪೀಲೆ, ಮಡೋನಾ ಸೇರಿದಂತೆ ಶ್ರೇಷ್ಠ ಕ್ರೀಡಾಪಟುಗಳಿದ್ದಾರೆ. ಉತ್ತರ ಕರ್ನಾಟಕ ಭಾಗದಲ್ಲಿರುವ ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಇಂತಹ ಕ್ರೀಡಾಕೂಟ ಹಮ್ಮಿಕೊಂಡಿರುವದ ಶ್ಲಾಘನೀಯ ಎಂದರು.

ವಿಜಯಪುರ ಸೈನಿಕ ಶಾಲೆ ಪ್ರಾಚಾರ್ಯ ಕರ್ನಲ್‌ ಬಿಸ್ವಾಸ್‌ ಥೋಮಜಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಭಾವಿ ಭವಿಷ್ಯ ಉತ್ತಮವಾಗಿ ರೂಪಿಸಿಕೊಳ್ಳಲು ಬೇಕಾದ ಅಂಶಗಳನ್ನು ವಿದ್ಯಾರ್ಥಿ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ತಮ್ಮ ವ್ಯಾಸಂಗದೊಂದಿಗೆ ಕ್ರೀಡೆಯಲ್ಲಿ ಭಾಗವಹಿಸಿ ಸದೃಢ ದೇಹವನ್ನು ಹೊಂದುವಂತಾಗಬೇಕು. ಈ ಭಾಗದಲ್ಲಿ ಬಸವೇಶ್ವರ ದೇವಸ್ಥಾನದ ಇಂಟರ್‌ ನ್ಯಾಶನಲ್‌ ಶಾಲೆ ಇಲ್ಲಿನ ಆಡಳಿತ ಮಂಡಳಿ, ಶಾಲಾ ಸಿಬ್ಬಂದಿ ಸಹಕಾರದೊಂದಿಗೆ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದೆ. ಈ ಶಾಲೆಯಿಂದ ಉತ್ತಮ ಪ್ರತಿಭೆಗಳು ಹೊರಬರುವಂತಾಗಲಿ ಎಂದರು.

ಕರ್ನಾಟಕ ಮಿನಿ ಫುಟ್‌ಬಾಲ್‌ ಅಸೋಶಿಯೇಶನ್‌ ಕಾರ್ಯದರ್ಶಿ ರಾಜಕುಮಾರ ಹಲಬುರಗೆ ಮಾತನಾಡಿ, ತಾಲೂಕು ಮಟ್ಟದಲ್ಲಿ ಇದೇ ಮೊದಲ ಬಾರಿ ರಾಜ್ಯಮಟ್ಟದ ಮಿನಿ ಫುಟ್‌ಬಾಲ್‌ ಕ್ರೀಡಾಕೂಟ ಹಮ್ಮಿಕೊಂಡಿದೆ. ಕ್ರೀಡಾಕೂಟದಲ್ಲಿ ಭಾಗವಹಿಸುವ ಕ್ರೀಡಾಪಟುಗಳು ರಾಜ್ಯಮಟ್ಟದ ಪಂದ್ಯಾವಳಿಯಲ್ಲಿ ಭಾಗವಹಿಸುವ ಅವಕಾಶ ಸಿಗುತ್ತದೆ. ಕ್ರೀಡಾಕೂಟದಲ್ಲಿ ಪ್ರಥಮ, ದ್ವಿತೀಯ, ತೃತೀಯ ಸ್ಥಾನ ಪಡೆದ ತಂಡಗಳು ಅ. 12ರಂದು ಬೀದರನಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸುವ ಅವಕಾಶ ಪಡೆಯಲಿವೆ. ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ 30 ರಾಜ್ಯಗಳ ತಂಡಗಳು ಭಾಗವಹಿಸಲಿವೆ ಎಂದರು.

ಶಾಲಾ ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಈರಣ್ಣ ಪಟ್ಟಣಶೆಟ್ಟಿ, ಕೂಡಲಸಂಗಮ ಅಭಿವೃದ್ದಿ ಮಂಡಳಿ ಅಯುಕ್ತ ಮಹಾದೇವ ಮುರಗಿ, ಶಾಲಾ ಸಮಿತಿ ಉಪಾಧ್ಯಕ್ಷ ಎಂ.ಎಸ್‌. ಕೊಟ್ಲಿ, ಸದಸ್ಯರಾದ ಅನಿಲ ಅಗರವಾಲ, ಸಿದ್ದಣ್ಣ ಮೋದಿ, ಎಸ್‌.ಎಸ್‌. ಝಳಕಿ, ಡಾ| ಶೋಭಾ ಪಾಟೀಲ, ರವಿ ರಾಠೊಡ, ಸಿಪಿಐ ಮಹಾದೇವ ಶಿರಹಟ್ಟಿ, ಪ್ರಾಚಾರ್ಯೆ ರೋಹಿಣಿ ರೋಣದ ಇದ್ದರು.

ಎಸ್‌.ಎಂ. ಬಿಷ್ಟಗೊಂಡ ಸ್ವಾಗತಿಸಿದರು. ಎಸ್‌.ಪಿ.ಸಾಳುಂಕೆ ನಿರೂಪಿಸಿದರು.

ಟಾಪ್ ನ್ಯೂಸ್

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.