ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆ ಸ್ವಸಹಾಯಗುಂಪು ಸಮಾವೇಶಕ್ಕೆ ವೀರೇಂದ್ರ ಹೆಗ್ಗಡೆ ಚಾಲನೆ
Team Udayavani, Nov 12, 2021, 2:16 PM IST
ವಿಜಯಪುರ: ನಗರದಲ್ಲಿ ಶ್ರೀ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಟ್ರಸ್ಟ್ ಹಮ್ಮಿಕೊಂಡಿದ್ದ ಸ್ವಸಹಾಯ ಸಂಘಗಳ ಸಮಾವೇಶ ಹಾಗೂ ಸೌಲಭ್ಯ ವಿತರಣೆ ಸಮಾರಂಭಕ್ಕೆ ಧರ್ಮಸ್ಥಳ ಕ್ಷೇತ್ರದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರು ಚಾಲನೆ ನೀಡಿದರು.
ನಗರದ ಬಿಎಲ್ ಡಿಇ ಸಂಸ್ಥೆಯ ನೂತನ ಕ್ಯಾಂಪಸ್ ಆವರಣದಲ್ಲಿ ಹಮ್ಮಿಕೊಂಡಿದ್ದ ಸ್ವ-ಸಹಾಯ ಸಂಘಗಳ ಸಮಾವೇಶಕ್ಕೆ ಚಾಲನೆ ನೀಡಿದ ಬಳಿಕ ಮಾತಾನಾಡಿದ ಡಾ.ವೀರೇಂದ್ರ ಹೆಗ್ಗಡೆ ಅವರು, ಶ್ರೀಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯಿಂದ ವಿಜಯಪುರ ಜಿಲ್ಲೆಯ ಕೆರೆಗಳ ಹೂಳೆತ್ತುವ, ಶುದ್ದ ಕುಡಿಯೋ ನೀರಿನ ಘಟಕ ಸ್ಥಾಪನೆ ಮಾಡುವುದಾಗಿ ಪ್ರಕಟಿಸಿದರು.
ಶಾಸಕರಾದ ಎಂ.ಬಿ. ಪಾಟೀಲ, ಸೋಮನಗೌಡ ಪಾಟೀಲ, ದೇವಾನಂದ ಚವ್ಹಾಣ, ಜಿ.ಪಂ. ಮಾಜಿ ಅಧಕ್ಷೆ ಸುಜಾತಾ ಕಳ್ಳಿಮನಿ, ವಿದ್ಯಾರಾಣಿ ತುಂಗಳ ಇತರರು ಪಾಲ್ಗೊಂಡಿದ್ದರು.