ಧಾರವಾಡ-ದಕ್ಷಿಣ ಕನ್ನಡ ಚಾಂಪಿಯನ್‌


Team Udayavani, Nov 21, 2017, 2:33 PM IST

vij-1.jpg

ತಾಳಿಕೋಟೆ: ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ತಾಳಿಕೋಟೆಯ ಎಚ್‌.ಎಸ್‌. ಪಾಟೀಲ ಪಪೂ ಕಾಲೇಜ್‌ ಸಹಯೋಗದಲ್ಲಿ ಪಟ್ಟಣದಲ್ಲಿ ಎರಡು ದಿನ ನಡೆದ ಪಪೂ ಕಾಲೇಜುಗಳ ರಾಜ್ಯಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ಬಾಲಕರ ವಿಭಾಗದಲ್ಲಿ ಧಾರವಾಡ, ಬಾಲಕಿಯರ ವಿಭಾಗದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದರೆಯ ಆಳ್ವಾಸ್‌ ತಂಡ ಪ್ರಥಮ ಸ್ಥಾನ ಪಡೆದು ಪ್ರಶಸ್ತಿ ಮುಡಿಗೇರಿಸಿಕೊಂಡವು.

ಪಂದ್ಯಾವಳಿಯಲ್ಲಿ ರಾಜ್ಯದ 32 ಜಿಲ್ಲೆಗಳ 32 ಬಾಲಕರು ಹಾಗೂ 32 ಬಾಲಕಿಯರ ತಂಡ ಭಾಗವಹಿಸಿದ್ದವು. ಬಾಲಕರ ವಿಭಾಗದಲ್ಲಿ ಅತಿ ಪೈಪೋಟಿ ಒಡ್ಡಿದ ಧಾರವಾಡ ಜಿಲ್ಲೆ ತಂಡ ದಕ್ಷಿಣ ಕನ್ನಡ ಜಿಲ್ಲೆ ತಂಡವನ್ನು ಹಿಮ್ಮೆಟ್ಟಿಸಿ ಗೆಲುವು ತಮ್ಮದಾಗಿಸಿಕೊಂಡಿತು.  ಬಾಲಕಿಯರ ತಂಡದಲ್ಲಿ ತೀವ್ರ ಪೈಪೋಟಿ ಒಡ್ಡಿದ್ದ ಧಾರವಾಡ ತಂಡವನ್ನು ದಕ್ಷಿಣ ಕನ್ನಡ ಜಿಲ್ಲೆ ತಂಡ ಹಿಮ್ಮೆಟ್ಟಿಸಿ ಗೆಲುವು ತಮ್ಮದಾಗಿಸಿಕೊಂಡಿತು.

ಸ್ಕೋರ್‌ ವಿವರ: ಬಾಲಕರ ಫೈನಲ್‌ ಪಂದ್ಯದಲ್ಲಿ ಧಾರವಾಡ ತಂಡ 24-6 ಅಂಕಗಳಿಂದ ವಿಜಯ ಸಾಧಿಸಿತು. ತೀವ್ರ ಕುತೂಹಲ ಕೆರಳಿಸಿದ್ದ ಫೈನಲ್‌ ಪಂದ್ಯದಲ್ಲಿ ಮೊದಲ ಅರ್ಧದ ಪಂದ್ಯದಲ್ಲಿ 8-4 ಅಂಕಗಳಿಂದ ಧಾರವಾಡ ತಂಡ ಮುಂದೆ ಇತ್ತು. ಎರಡನೇ ಅರ್ಧ ಪಂದ್ಯದಲ್ಲಿ ದಕ್ಷಿಣ ಕನ್ನಡ ತಂಡ ಎದುರಾಳಿ ವಿರುದ್ಧ ಪ್ರತಿರೋಧ ತೋರದಿರುವುದ ರಿಂದ ಕೊನೆಯಲ್ಲಿ 24-6 ಅಂಕಗಳಿಂದ ಧಾರವಾಡ ತಂಡ ಗೆಲುವು ಸಾಧಿಸಿತು. ಧಾರವಾಡ ತಂಡದ ನಾಯಕ ಗೋಳಪ್ಪ ಹಿರೆಗೋಳ ಅದ್ಭುತ ಆಟ ಪ್ರದರ್ಶಿಸಿದರು.

ಬಾಲಕಿಯರ ವಿಭಾಗದಲ್ಲಿ ದಕ್ಷಿಣ ಕನ್ನಡದ ಆಳ್ವಾಸ್‌ ಬಾಲಕಿಯರ ತಂಡ 33-5 ಅಂಕಗಳಿಂದ ಚಾಂಪಿಯನ್‌ ತಂಡವಾಗಿ ಹೊರ ಹೊಮ್ಮಿತು. ತೀವ್ರ ಕುತೂಹಲ ಕೆರಳಿಸಿದ್ದ ಪಂದ್ಯದಲ್ಲಿ ಆಳ್ವಾಸ್‌ ತಂಡ ಎದುರಾಳಿಗೆ ಅವಕಾಶ ನೀಡದೇ ಇರುವುದು ಕಂಡು ಬಂತು.

ಪಂದ್ಯದ ಮೊದಲಾರ್ಧದಲ್ಲಿ 18-3 ಅಂಕ ಪಡೆದು ಮುನ್ನಡೆ ಸಾಧಿಸಿತ್ತು. ಎರಡನೇ ಅರ್ಧ ಪಂದ್ಯದಲ್ಲಿ 33-5 ಅಂಕಗಳಿಂದ ಜಯ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಯಿತು. ಫೈನಲ್‌ ಪಂದ್ಯ ಸೋತ ಧಾರವಾಡ ತಂಡ ರನ್ನರ್‌ ಅಫ್‌ ಆಗಿ ಹೊರಹೊಮ್ಮಿತು. ಆಳ್ವಾಸ್‌ ತಂಡದ ಸಂಯೋಜನೆ ಆಟದಿಂದ ಪಂದ್ಯದಲ್ಲಿ ಗೆಲುವು ಸಾಧಿತು.

ಕ್ರೀಡಾಕೂಟದ ಉಸ್ತುವಾರಿಯನ್ನು ಎಸ್‌ಕೆಪಪೂ ಕಾಲೇಜಿನ ದೈಹಿಕ ಶಿಕ್ಷಕ ಆರ್‌.ಎಲ್‌. ಕೊಪ್ಪದ, ಎಚ್‌ಎಸ್‌ಪಿ ಪಪೂ ಕಾಲೇಜಿನ ಪ್ರಾಚಾರ್ಯ ವೆಂಕಟೇಶ ರಾಠೊಡ, ಮಲ್ಲು ರಾಯಗೊಂಡ, ಎಸ್‌.ಜಿ. ಮಂಗ್ಯಾಳ, ಅಶೋಕ ಕಟ್ಟಿ, ರಾವುತ ಪೂಜಾರಿ, ಶಿವು ನಾಯಕ, ಎಸ್‌.ಜಿ. ದೋತ್ರೆ ವಹಿಸಿದ್ದರು.

ಪಪೂ ಕಾಲೇಜಿನ ಉಪ ನಿರ್ದೇಶಕ ಅಂಕದ, ಬಿಪಿಎಡ್‌ ಕಾಲೇಜ್‌ ಪ್ರಾಚಾರ್ಯ ಭೀಮಣ್ಣ ಅರಕೇರಿ, ಕ್ಷೇತ್ರ ಶಿಕ್ಷಣಾಧಿ ಕಾರಿ ಎಸ್‌.ಡಿ.ಗಾಂಜಿ, ದೈಹಿಕ ಶಿಕ್ಷಣಾಧಿಕಾರಿ ಎಸ್‌.ಬಿ. ಚಲವಾದಿ, ಪ್ರಕಾಶ ಗೊಂಗಡಿ, ಸಂಗಮಾರ್ಯ ವಿದ್ಯಾ ಸಂಸ್ಥೆ ಅಧ್ಯಕ್ಷ ಎಚ್‌.ಎಸ್‌. ಪಾಟೀಲ, ಯುಥ್‌ ನ್ಪೋರ್ಟ್ಸ್ ಕ್ಲಬ್‌ ಸದಸ್ಯರು ಮೇಲುಸ್ತುವಾರಿ ವಹಿಸಿದ್ದರು. ಕ್ರೀಡಾಕೂಟದಲ್ಲಿ ಮುಖ್ಯ ನಿರ್ಣಾಯಕರಾಗಿ ವಿ.ಡಿ. ಪಾಟೀಲ, ರಮೇಶ ಪಾಟೀಲ, ಮಕಾಂದಾರ, ಸುರೇಶ ನಾಯಕ, ಭಜಂತ್ರಿ, ರಜಪೂತ ಕಾರ್ಯ ನಿರ್ವಹಿಸಿದರು.

„ಜಿ.ಟಿ. ಘೋರ್ಪಡೆ

ಟಾಪ್ ನ್ಯೂಸ್

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.