ಲಂಚದ ಹಣ ಪಡೆಯುವಾಗಲೇ ಎಸಿಬಿ ಬಲೆಗೆ ಬಿದ್ದ ಡಿಎಚ್ಓ ಕಛೇರಿ ವ್ಯವಸ್ಥಾಪಕ ಮನೋಹರ
Team Udayavani, Jan 27, 2021, 10:40 PM IST
ವಿಜಯಪುರ : ನೌಕರರೊಬ್ಬರ ನೇಮಕ ತಾನೇ ಮಾಡಿಸಿದ್ದಾಗಿ ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದ ಡಿಎಚ್ಓ ಕಛೇರಿ ವ್ಯವಸ್ಥಾಪಕ ಲಂಚದ ಹಣ ಪಡೆಯುವಾಗಲೇ ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.
ವಿಜಯಪುರ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ದಂತ ಸಹಾಯಕರಾಗಿ ಸಂತೋಷ ಸದಾಶಿವ ಚಲವಾದಿ ಎಂಬವರು ಆಯ್ಕೆಯಾಗಿದ್ದರು. ಕರ್ತವ್ಯಕ್ಕೆ ಹಾಜರಾಗಿ ವರದಿ ಮಾಡಿಕೊಂಡ ಬಳಿಕ ನಿನ್ನ ನೇಮಕ ನನ್ನಿಂದಲೇ ಆಗಿದ್ದು, ಇದಕ್ಕಾಗಿ ಜಿಲ್ಲಾ ಆರೋಗ್ಯಾಧಿಕಾರಿ ಹಾಗೂ ಜಿಲ್ಲಾ ಮಕ್ಕಳ ಮತ್ತು ತಾಯಂದಿರ ಪುನರ್ವಸತಿ ಅಧಿಕಾರಿಗೆ ತಲಾ 15 ಸಾವಿರ ರೂ. ಲಂಚ ಕೊಡಬೇಕು. ಇದಕ್ಕಾಗಿ ಒಟ್ಟು 30 ಸಾವಿರ ರೂ. ಹಣ ನೀಡುವಂತೆ ಆರೋಪಿ ಜಿಲ್ಲಾ ಆರೋಗ್ಯಾಧಿಕಾರಿ ಕಛೇರಿಯ ವ್ಯವಸ್ಥಾಪಕ ಮನೋಹರ ಪಾಟೀಲ ಪದೇ ಪದೇ ಹಣಕ್ಕೆ ಬೇಡಿಕೆ ಇಟ್ಟು ಹಣ ಕೊಡಲು ಪೀಡಿಸುತ್ತಿದ್ದ.
ಇದಲ್ಲದೇ ಸಂತೋಷ ಅವರ ಚಿಕ್ಕಪ್ಪ ಬಾಬಾಸಾಹೇಬ ಅವರಿಗೂ ಒತ್ತಡ ಹೇರುತ್ತಿದ್ದ. ಈ ವಿಷಯ ತಿಳಿದ ಸಂತೋಷ ಎಸಿಬಿ ಅಧಿಕಾರಿಗಳಿಗೆ ದೂರು ನೀಡಿದ್ದು, ಬುಧವಾರ ತಮ್ಮ ಕಛೇರಿಯಲ್ಲಿ ಲಂಚ ಪಡೆಯುತ್ತಿದ್ದಾಗಲೇ ಮನೋಹರ ಹಣದ ಸಮೇತ ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿದ್ದಾನೆ.
ಎಸಿಬಿ ವಿಜಯಪುರ ಡಿಎಸ್ಪಿ ಎಂ.ಕೆ.ಗಂಗಲ್, ಸಿಪಿಐ ಗಳಾದ ಹರಿಶ್ಚಂದ್ರ, ರಮೇಶ್ವರ, ಕವಟಗಿ ನೇತೃತ್ವದಲ್ಲಿ ಅಶೋಕ ಸಿಂಧೂರ, ಸುರೇಶ ಜಾಲಗೇರಿ, ಸದಾಶಿವ ಕೋಟ್ಯಾಳ, ಮಾಳಪ್ಪ ಸಲಗೊಂಡ ಇತರರು ಇದ್ದ ತಂಡ ದಾಳಿ ನಡೆಸಿ, ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ
MUST WATCH
ಹೊಸ ಸೇರ್ಪಡೆ
Davanagere; ಗಾಯಿತ್ರಿ ಸಿದ್ದೇಶ್ವರ್ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ