ಹೈಕಮಾಂಡ್ ನಿರ್ಣಯ ಉಲ್ಟಾ ಮಾಡಿಸಿದ ಹೆಮ್ಮೆ ಇದೆ: ದಿಂಗಾಲೇಶ್ವರ ಶ್ರೀ


Team Udayavani, Aug 17, 2021, 10:00 PM IST

ಹೈಕಮಾಂಡ್ ನಿರ್ಣಯ ಉಲ್ಟಾ ಮಾಡಿಸಿದ ಹೆಮ್ಮೆ ಇದೆ: ದಿಂಗಾಲೇಶ್ವರ ಶ್ರೀ

ಮುದ್ದೇಬಿಹಾಳ: ಯಡಿಯೂರಪ್ಪನವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸುವಲ್ಲಿ ಕೆಟ್ಟ ಜಾತಿ ವ್ಯವಸ್ಥೆ ಕೆಲಸ ಮಾಡಿತ್ತು. ಅದರ ವಿರುದ್ಧ ಸ್ವಾಮೀಜಿಗಳೆಲ್ಲ ಒಟ್ಟಾಗಿ ನಿಂತು ಬಿಜೆಪಿ ಹೈಕಮಾಂಡ್ ನಿರ್ಣಯ ಉಲ್ಟಾ ಮಾಡಿಸಿರುವ ಹೆಮ್ಮೆ ನಮಗಿದೆ ಎಂದು ಯಡಿಯೂರಪ್ಪ ಪರ ಮಠಾಧೀಶರನ್ನು ಸಂಘಟಿಸಿ ಬೆಂಗಳೂರಿನಲ್ಲಿ ಸಭೆ ನಡೆಸಿದ್ದ ಬಾಲೆಹೊಸೂರಿನ ಶ್ರೀ ದಿಂಗಾಲೇಶ್ವರ ಮಠದ ದಿಂಗಾಲೇಶ್ವರ ಮಹಾಸ್ವಾಮೀಜಿಯವರು ಹೇಳಿದರು.

ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕು ಕುಂಟೋಜಿ ಸಂಸ್ಥಾನ ಹಿರೇಮಠದಲ್ಲಿ ಮಠದ ಮುಖ್ಯಸ್ಥರಾದ ಚನ್ನವೀರ ದೇವರ ನೇತೃತ್ವದಲ್ಲಿ ಮಂಗಳವಾರ ರಾತ್ರಿ ಏರ್ಪಡಿಸಿದ್ದ ಕೊರೊನಾ ಆಪದ್ಘಾಂಧವರಿಗೆ ಪ್ರಶಸ್ತಿ ಪ್ರದಾನ, ಧರ್ಮ ಸಮನ್ವಯ ಸಮಾರಂಭದಲ್ಲಿ ಅವರು ಮಾತನಾಡಿದರು. ಯಡಿಯೂರಪ್ಪನವರು ರಾಜ್ಯದ ತುಂಬೆಲ್ಲ ಸಂಚರಿಸಿ, ತಮ್ಮ ಜೀವನದ ಸುಧೀರ್ಘ ಆಯುಷ್ಯವನ್ನು ಪಕ್ಷ ಕಟ್ಟಲು ಸವೆಸಿದ್ದರು. ಇಂಥ ವ್ಯಕ್ತಿಗೆ ರಾಜ್ಯವಾಳಲು ಕೆಲವರು ಬಿಡಲಿಲ್ಲ. ಅನ್ಯ ಕಾರ್ಯಕ್ಕೆ ಬೆಂಗಳೂರಿಗೆ ತೆರಳಿದ್ದ ನಮಗೆ ಈ ವಿಷಯ ಗೊತ್ತಾಯ್ತು. ಇದರ ಹಿನ್ನೆಲೆ ಕೆದಕಿದಾಗ ಕೆಟ್ಟ ಜಾತಿ ವ್ಯವಸ್ಥೆ ಯಡಿಯೂರಪ್ಪನವರಿಗೆ ತೊಂದರೆ ಕೊಡ್ತಿರೋದು ಗೊತ್ತಾಯ್ತು. ಈ ನಾಡನ್ನು, ನಮ್ಮ ಸಂಸ್ಕೃತಿಯನ್ನು ಜಾತಿ ಅನ್ನೋ ಶತೃ ನಾಶ ಮಾಡಬಾರದು ಅನ್ನೋ ಕಾರಣಕ್ಕಾಗಿ ನಾವು ಯಡಿಯೂರಪ್ಪನವರ ಪರ ನಿಲ್ಲಬೇಕಾಯಿತು ಎಂದರು.

ಈ ವಿಷಯದಲ್ಲಿ ಬಿಜೆಪಿ ಹೈಕಮಾಂಡ್ ಸೋತಿತು ಅಂತ ನಾವು ಹೇಳೊಲ್ಲ ಆದರೆ ಯಡಿಯೂರಪ್ಪಗೊಂದು ಬೆಲೆ ಕೊಟ್ತು ಅನ್ನೋ ಸಮಾಧಾನ ನಮಗಿದೆ. ಆದರೂ ಇವರಿಗೆ ಆಡಳಿತ ನಡೆಸಲು ಅವಕಾಶ ಕೊಡಲಿಲ್ಲ ಅನ್ನೋ ನೋವೂ ಇದೆ. ಸ್ವಾಮೀಜಿಗಳಿಗೇಕೆ ರಾಜಕೀಯ ಉಸಾಬರಿ ಅಂತ ಅನೇಕರು ಟೀಕಿಸಿದರು. ಆದರೆ ನಮ್ಮ ದೃಷ್ಟಿಯಲ್ಲಿ ಕಾವಿ ಹಾಕಿಕೊಳ್ಳೋದು ಊಟ ಮಾಡಿ ಮಠದಲ್ಲಿ ಮಲಗಲು ಅಲ್ಲ. ನಾಡಿನೊಳಗೆ ನ್ಯಾಯ, ನೀತಿ, ಸಂಸ್ಕೃತಿಯ ಉಳಿವಿಗಾಗಿ ಹೋರಾಡಲು. ಸ್ವಾಮೀಜಿಗಳು ಅನ್ಯಾಯ, ಅಸಂಸ್ಕೃತಿ, ದಾರಿದ್ರ್ಯ, ದುಷ್ಟ ಶಕ್ತಿ ವಿರುದ್ಧ ಹೋರಾಡಬೇಕು. ಅನ್ಯಾಯದ ವಿರುದ್ದ ಸೋಲೊಪ್ಪಿಕೊಳ್ಳಬಾರದು. ಅದನ್ನು ನಾವು ಮಾಡಿದ್ದೇವೆ ಎಂದರು.

ತಾಳಿಕೋಟೆ ಖಾಸ್ಗತೇಶ್ವರ ಮಠದ ಸಿದ್ದಲಿಂಗ ದೇವರು, ಮಸಬಿನಾಳದ ಸಿದ್ದರಾಮ ಸ್ವಾಮೀಜಿ, ಇಟಗಿ ಮೇಲಗದ್ದುಗೆ ಭೂಕೈಲಾಸ ಮಠದ ಗುರುಶಾಂತವೀರ ಶಿವಾಚಾರ್ಯರು ಸೇರಿ ಹಲವರು ಇದ್ದರು. ಕೊರೊನಾದಲ್ಲಿ ಮಾನವೀಯ ನೆಲೆಗಟ್ಟಿನಲ್ಲಿ ಕೆಲಸ ಮಾಡಿದ ಡಾ| ಮಹಮ್ಮದ ನಾಯ್ಕೋಡಿ, ಡಾ| ರಾಘವೇಂದ್ರ ಮುರಾಳ, ಸಿದ್ದಲಿಂಗ ದೇವರು, ಅಶೋಕ ನಾಡಗೌಡ ಇವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಎಸ್ಸೆಸ್ಸೆಲ್ಸಿಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ನಾಲತವಾಡದ ಸಂಜನಾ ಹಿರೇಮಠಳನ್ನು ಸನ್ಮಾನಿಸಲಾಯಿತು.

ಟಾಪ್ ನ್ಯೂಸ್

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.