ಪ್ರತಿ ಮನೆಗೂ ನರೇಗಾ ಜಾಬ್‌ಕಾರ್ಡ್‌ ವಿತರಣೆ ಕಡ್ಡಾಯ

ನರೇಗಾ ಉದ್ಯೋಗ ಚೀಟಿ ಹೊಂದಿದ ಕುಟುಂಬ ಸರಕಾರದ ಪ್ರತಿ ಸೌಲಭ್ಯ ಪಡೆದುಕೊಳ್ಳಬಹುದು.

Team Udayavani, Jan 23, 2021, 5:25 PM IST

ಪ್ರತಿ ಮನೆಗೂ ನರೇಗಾ ಜಾಬ್‌ಕಾರ್ಡ್‌ ವಿತರಣೆ ಕಡ್ಡಾಯ

ವಿಜಯಪುರ: ಗ್ರಾಮೀಣ ದುಡಿಯುವ ಕೈಗಳಿಗೆ ಕೆಲಸ ಕೊಟ್ಟು, ಆರ್ಥಿಕ ಸಬಲೀಕರಣ ಮಾಡುವಲ್ಲಿ ಮಹಾತ್ಮ ಗಾಂಧೀಜಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಸಹಕಾರಿ ಆಗಿದೆ. ಅದರಲ್ಲೂ ಮಹಿಳೆಯರ ಆರ್ಥಿಕ ಪ್ರಗತಿಯಲ್ಲಿ ಪ್ರಧಾನ ಪಾತ್ರ ವಹಿಸುತ್ತಿರುವುದೇ ನರೇಗಾ ಯೋಜನೆ ಎಂದು ಐಇಸಿ ಸಂಯೋಜಕ ಕುಮಾರಯ್ಯ ಚಿಕ್ಕಮಠ ಹೇಳಿದರು.

ಬಸವನವಾಗೇವಾಡಿ ತಾಲೂಕಿನ ಡೋಣೂರು ಗ್ರಾಮದಲ್ಲಿ ಪಂಚಾಯತ್‌ ವ್ಯಾಪ್ತಿಯ 6 ಗ್ರಾಮಗಳಲ್ಲಿ ಮಹಿಳಾ ಕಾಯಕ ಶಕ್ತಿ ಅಭಿಯಾನಕ್ಕೆ ವಾದ್ಯಮೇಳದೊಂದಿಗೆ ಚಾಲನೆ ನೀಡಿ ಅವರು ಮಾತನಾಡಿದರು. ಈ ವಿಶೇಷ ಅಭಿಯಾನ ಮೂಲಕ ಮಹಿಳಾ ಪ್ರಧಾನ ಕುಟುಂಬಗಳನ್ನು ಗುರುತಿಸುವುದು, ಸ್ವ ಸಹಾಯ ಸಂಘಗಳ ಭಾಗವಹಿಸುವಿಕೆಗೆ ಉತ್ತೇಜನ ನೀಡುವುದಾಗಿದೆ. ಮಹಿಳೆಯರು ಈ ವಿಶೇಷ ಅಭಿಯಾನದಲ್ಲಿ ಪಾಲ್ಗೊಳ್ಳಬೇಕು ಎಂದು ಸಲಹೆ ನೀಡಿದರು.

ನರೇಗಾ ಉದ್ಯೋಗ ಚೀಟಿ ಹೊಂದಿದ ಕುಟುಂಬ ಸರಕಾರದ ಪ್ರತಿ ಸೌಲಭ್ಯ ಪಡೆದುಕೊಳ್ಳಬಹುದು. ಬಿಪಿಎಲ್‌ ಕಾರ್ಡ್‌ ಮಾದರಿಯಲ್ಲಿ ಪ್ರತಿ ಕುಟುಂಬ ಸದಸ್ಯರು ಗ್ರಾಪಂ ಮೂಲಕ ಉದ್ಯೋಗ ಕಾರ್ಡ್‌ ಪಡೆದುಕೊಳ್ಳಬೇಕು. ಉದ್ಯೋಗ ಖಾತ್ರಿ ಯೋಜನೆಯಲ್ಲಿ ವಾರ್ಷಿಕ 100 ದಿನದ ಕೂಲಿ ಕೆಲಸ ಮಾಡಿ, 28,500 ರೂ. ವೇತನ ಪಡೆಯಲು ಅವಕಾಶವಿದೆ. ಗ್ರಾಪಂನಲ್ಲಿ ಮಹಿಳೆಯ ಭಾಗವಹಿಸುವಿಕೆ ಕೇವಲ ಶೇ. 34 ರಷ್ಟಿದ್ದು, ಶೇ. 50ಕ್ಕೆ ಹೆಚ್ಚಿಸುವ ಪ್ರಯತ್ನ ಮಾಡಬೇಕಿದೆ ಎಂದರು.

ಗ್ರಾಮೀಣಾಭಿವೃದ್ಧಿ ಆಯುಕ್ತಾಲಯದ ಐಇಸಿ ವೃತ್ತಿಪರರಾದ ಸುವರ್ಣಾ ಕಂಬಿ ಮಾತನಾಡಿ, ಮಹಿಳೆಯರು ಪ್ರಸ್ತುತ ಕಲೆ, ಸಾಹಿತ್ಯ, ರಾಜಕೀಯ, ಶಿಕ್ಷಣ ಸೇರಿದಂತೆ ಎಲ್ಲ ರಂಗದಲ್ಲೂ ವಿಶೇಷವಾಗಿ ಗುರುತಿಸಿಕೊಂಡಿದ್ದಾರೆ. ಹೀಗಾಗಿ ಗ್ರಾಮೀಣ ಪ್ರದೇಶದ ಮಹಿಳೆಯರು ಆರ್ಥಿಕವಾಗಿ ಸಬಲರಾಗಬೇಕಿದೆ. ನೀವು ನಿಮ್ಮ ಗ್ರಾಮದ ಹೊಲ, ಗದ್ದೆಗಳಲ್ಲಿ ಕೆಲಸ ಮಾಡುವ ಜೊತೆಗೆ ಬೇಸಿಗೆ ದಿನಗಳಲ್ಲಿ ನರೇಗಾ ಕೆಲಸವನ್ನು ಮಾಡಬಹುದು ಎಂದರು.

ಪಿಡಿಒ ಮುತ್ತಣ್ಣ ಇವಣಗಿ, ಕಾರ್ಯದರ್ಶಿ ಸುರೇಶ, ಶ್ರೀಶೈಲ ಉಮನಾಬಾದಿ, ಸಾಧು ಮಹಾರಾಜ, ಮೆಹಬೂಬ್‌ ಹಿಪ್ಪರಗಿ ಸೇರಿದಂತೆ ಡೋಣೂರು, ಎಂಭತನಾಳ, ನಿಗಿನಾಳ, ಬೊಮ್ಮನಹಳ್ಳಿ, ಮಸಬಿನಾಳ ಗ್ರಾಪಂ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮಸ್ಥರು ಇದ್ದರು.

ಟಾಪ್ ನ್ಯೂಸ್

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್‌ 500 ಕೋಟಿ ರೂ. ಖರ್ಚು’

Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್‌ 500 ಕೋಟಿ ರೂ. ಖರ್ಚು’

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಕಾರಿಗೆ ಪೆಟ್ರೋಲ್‌ ಬದಲು ಡೀಸೆಲ್‌ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.