ಡಿಕೆಶಿ ಪ್ರತಿಕೃತಿ ದಹಿಸಿ ಪ್ರತಿಭಟನೆ


Team Udayavani, Oct 20, 2018, 3:44 PM IST

vij-2.jpg

ವಿಜಯಪುರ: ಲಿಂಗಾಯತ ಪ್ರತ್ಯೇಕ ಧರ್ಮ ಹೋರಾಟದ ವಿಷಯದಲ್ಲಿ ಲಿಂಗಾಯತ ವಿರೋಧಿ ಹೇಳಿಕೆ ನೀಡಿರುವ ಸಚಿವ ಡಿ.ಕೆ. ಶಿವಕುಮಾರ ಹೇಳಿಕೆ ಖಂಡಿಸಿ ನಗರದಲ್ಲಿ ರಾಷ್ಟ್ರೀಯ ಬಸವ ಸೇನೆ ಶಿವಕುಮಾರ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಿತು.

ಶುಕ್ರವಾರ ನಗರದ ಬಸವೇಶ್ವರ ವೃತ್ತದಲ್ಲಿ ರಾಷ್ಟ್ರೀಯ ಬಸವಸೇನಾ ನೇತೃತ್ವದಲ್ಲಿ ಜಮಾಯಿಸಿದ ಲಿಂಗಾಯತ ಪ್ರತ್ಯೇಕ ಧರ್ಮ ಹೋರಾಟಗಾರರು, ಸಚಿವ ಡಿ.ಕೆ. ಶಿವಕುಮಾರ ಪ್ರತಿಕೃತಿ ದಹಿಸಿ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. 

ಈ ಸಂದರ್ಭದಲ್ಲಿ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಸಂಘಟನೆ ಜಿಲ್ಲಾಧ್ಯಕ್ಷ ಡಾ| ರವಿಕುಮಾರ ಬಿರಾದಾರ, ಲಿಂಗಾಯತ ನಾಯಕರ ಏಳ್ಗೆ ಸಹಿಸದೇ ಈ ರೀತಿಯ ಅಸಂಬದ್ಧ ಹೇಳಿಕೆ ನೀಡುತ್ತಿದ್ದಾರೆ. ಲಿಂಗಾಯತರ ಸ್ವಾಭಿಮಾನ ಕೆಣಕಿ ಅಪಮಾನ ಮಾಡಿರುವ ಡಿ.ಕೆ. ಶಿವಕುಮಾರ ಅವರನ್ನು ಸಂಪುಟದಿಂದ ಕೈ ಬಿಡುವಂತೆ ಆಗ್ರಹಿಸಿದರು.

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಲಿಂಗಾಯತ ಪ್ರತ್ಯೇಕ ಧರ್ಮ ಮಾನ್ಯತೆ ಹೋರಾಟದ ವಿಷಯದಲ್ಲಿ ನಮ್ಮ ಮನವಿಗೆ ಕಾನೂನಾತ್ಮಕ ಪರಿಶೀಲನೆ ನಡೆಸಿಯೇ ಮುಂದಿನ ಕ್ರಮ ಕೈಗೊಂಡಿದೆ. ಇದಕ್ಕಾಗಿ ನಿವೃತ್ತ ನ್ಯಾ|ನಾಗಮೋಹನದಾಸ ನೇತೃತ್ವದಲ್ಲಿ ತಜ್ಞರ ಸಮಿತಿ ರಚಿಸಿ ಅವರ ವರದಿ ಪಡೆದು, ನಂತರ ವರದಿ ಅಧರಿಸಿ ಕೇಂದ್ರ ಸರಕಾರಕ್ಕೆ ಶಿಫಾರಸು ಮಾಡಿದ್ದರು. ಈ ವಿಷಯದಲ್ಲಿ ಸಿದ್ದರಾಮಯ್ಯ ಅವರು ರಾಜಕೀಯ ಅಥವಾ ಪಕ್ಷಪಾತ ಮಾಡಿಲ್ಲ ಎಂದರು.

ಅಂದಿನ ಸರ್ಕಾರದಲ್ಲಿ ಸಚಿವರಾಗಿದ್ದು ವಾಸ್ತವ ಸ್ಥಿತಿಯನ್ನು ತಿಳಿದಿದ್ದರೂ ಸಿದ್ದರಾಮಯ್ಯ ಸರ್ಕಾರ ಲಿಂಗಾಯತ ಪ್ರತ್ಯೇಕ ಧರ್ಮ ಮಾನ್ಯತೆ ಪ್ರಸ್ತಾವನೆ ವಿಷಯದಲ್ಲಿ ತಪ್ಪು ಮಾಡಿದೆ ಎಂದು ಡಿ.ಕೆ. ಶಿವಕುಮಾರ ಹೇಳಿಕೆ ನೀಡುವ ಮೂಲಕ ಲಿಂಗಾಯತರ ಆಸ್ಮಿತೆ ಪ್ರಶ್ನಿಸಿದ್ದಾರೆ. ಲಿಂಗಾಯತರ ಸ್ವಾಭಿಮಾನ ಕೆಣಕುವ ಮೂಲಕ ಸಚಿವ ಶಿವಕುಮಾರ ಅಕ್ಷಮ್ಯ ಅಪರಾಧ ಮಾಡಿದ್ದಾರೆ.

ಲಿಂಗಾಯತ ಧರ್ಮಿಯರಿಗೆ ಶಿವಕುಮಾರ ಹೇಳಿಕೆ ಮೂಲಕ ಅವಮಾನ ಮಾಡಿದ್ದು, ಲಿಂಗಾಯತರಿಗೆ ಅಲ್ಪಸಂಖ್ಯಾತ ಸ್ಥಾನಮಾನ ಸಿಗಬಾರದೆಂಬ ದುರುದ್ದೇಶ ಹೊಂದಿದ್ದಾರೆ ಆರೋಪಿಸಿದರು. 

ಸಿದ್ದರಾಮಯ್ಯನವರ ಸರಕಾರ ಯಾವುದೇ ತಪ್ಪು ಮಾಡಿಲ್ಲ.ಧರ್ಮಕ್ಕೂ ರಾಜಕಾರಣಕ್ಕೂ ಯಾವುದೇ ಸಂಬಂಧವಿಲ್ಲ, ಒಕ್ಕಲಿಗರ ಪ್ರಾಬಲ್ಯವಿರುವ ದಕ್ಷಿಣ ಕರ್ನಾಟಕ ಹಾಗೂ ಕರಾವಳಿ ಕರ್ನಾಟಕದಲ್ಲಿ ಕಾಂಗ್ರೆಸ ಏಕೆ ಗೆದ್ದಿಲ್ಲ ಎಂಬುದಕ್ಕೆ ಡಿಕೆಶಿ ಉತ್ತರಿಸಬೇಕು ಎಂದು ಕಾರ್ಯಕರ್ತರು ಪ್ರಶ್ನಿಸಿದರು.

ಗಂಗಾಧರ ಸಾಲಕ್ಕಿ, ಶಾಂತವೀರ ಥಾಲಬಾವಡಿ, ಪ್ರದೀಪ ತೊರವಿ, ನಿಂಗಪ್ಪ ಸಂಗಾಪುರ, ಶರಣಗೌಡ ಬಿರಾದಾರ, ಜಗದೀಶ ಬಳೂತಿ,ಸಂಜಯ ಕೋಟ್ಯಾಳ, ಡಾ| ಮಹಾಂತೇಶ ಮಡಿಕೇಶ್ವರ, ಶಿವರಾಜ ಕೋಟ್ಯಾಳ, ಸುನೀಲ ಜಂಗಮಶೆಟ್ಟಿ, ನೀಲಕಂಠ ಹಳ್ಳಿ, ಅರುಣ ಹಳ್ಳಿ ಇತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. 

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.