Vijayapura: ಡಿಕೆ ಶಿವಕುಮಾರ್ ಎಂದಿಗೂ ಮುಖ್ಯಮಂತ್ರಿ ಆಗಲಾರರು: ಭವಿಷ್ಯ ನುಡಿದ ಯತ್ನಾಳ್


Team Udayavani, Aug 18, 2023, 6:29 PM IST

DK Shivakumar will never become Chief Minister says Basanagouda patil yatnal

ವಿಜಯಪುರ: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರಾಜ್ಯದ ಸೂಪರ್ ಸಿ.ಎಂ. ರೀತಿ ವರ್ತಿಸುತ್ತಿದ್ದಾರೆ, ಮುಖ್ಯಮಂತ್ರಿ ಸಿದ್ಧರಾಮಯ್ಯ ದುರ್ಬಲಗೊಳಿಸಿ ಮುಖ್ಯಮಂತ್ರಿಯಾಗುವ ಹುನ್ನಾರ ನಡೆಸಿದ್ದಾರೆ. ಆದರೆ ಶಿವಕುಮಾರ್ ಎಂದಿಗೂ ಮುಖ್ಯಮಂತ್ರಿ ಆಗಲಾರರು ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಭವಿಷ್ಯ ನುಡಿದಿದ್ದಾರೆ.

ಶುಕ್ರವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ತಮ್ಮ ಬೆನ್ನಿಗೆ 15 ಶಾಸಕರಿದ್ದರೂ ಹೆಚ್ಚು ಶಾಸಕರ ಬೆಂಬಲ ಇರುವ ಸಿದ್ಧರಾಮಯ್ಯ ಅವರನ್ನು ಅಧಿಕಾರದಿಂದ ಕೆಳಗಿಳಿಸಲು ಶಿವಕುಮಾರ ಸಂಚು ರೂಪಿಸುತ್ತಿದ್ದಾರೆ. ಬಿಜೆಪಿ ಪಕ್ಷಕ್ಕೆ ಹೋದವರು ಮರಳಿ ಬರುತ್ತಾರೆ ಎನ್ನುವ ಹೇಳಿಕೆ ಹಿಂದೆ ಸಿದ್ದರಾಮಯ್ಯ ಶಕ್ತಿ ಕುಗ್ಗಿಸುವ ಹುನ್ನಾರ ಅಡಗಿದೆ ಎಂದು ವಿಶ್ಲೇಷಿಸಿದರು.

ಸಿದ್ಧರಾಮಯ್ಯ ಅವರ ವಿರುದ್ಧ ಇರುವ ಶಾಸಕರನ್ನು ಒಗ್ಗೂಡಿಸಿ ಇದಕ್ಕಾಗಿ ರಾಜಕೀಯವಾಗಿ ಮುಗಿಸಲು ಡಿಸಿಎಂ ದೊಡ್ಡ ಯೋಜನೆಯನ್ನೇ ಮಾಡಿದ್ದಾರೆ. ಇದಕ್ಕಾಗಿ ದೆಹಲಿಯಲ್ಲಿ ಯಾರ್ಯಾರ ಮನೆಗೆ ತಿರುಗಿ, ಬ್ಲ್ಯಾಕ್ ಮೇಲ್ ಮಾಡಿದ್ದಾರೆ ಎಂದು ನನಗೆ ಗೊತ್ತಿದೆ ಎಂದು ಆರೋಪಿಸಿದರು.

ಶಿವಕುಮಾರ್ ಅವರಿಂದ ಏನೆಲ್ಲ ನೋವು ಅನುಭವಿಸಿದರೂ ಸಿದ್ದರಾಮಯ್ಯ ಸುಮ್ಮನಿದ್ದಾರೆ. ಈ ನೋವೇ ಅವರು ಶಿವಕುಮಾರ ಅವರಿಗೆ ಅಧಿಕಾರ ಬಿಟ್ದಟುಕೊಡದಂತೆ ಮಾಡಲಿದೆ. ನಾನೇ ಕಾಂಗ್ರೆಸ್ ಕೊನೆ ಮುಖ್ಯಮಂತ್ರಿ ಎನ್ನುವ ಸ್ಥಿತಿ ಇದ್ದು, 5 ತಿಂಗಳಾದರೂ ಸರಿ, 5 ವರ್ಷವಾದರೂ ಸರಿ ಸಿದ್ಧರಾಮಯ್ಯ ಅವರೇ ಮುಖ್ಯಮಂತ್ರಿ ಆಗಿರಲಿದ್ದಾರೆ. ಹೀಗಾಗಿ ಸಿ.ಎಂ. ಆಗುವ ಭಾಗ್ಯ ಶಿವಕುಮಾರಗೆ ಸಿಗುವುದಿಲ್ಲ ಎಂದು ಲೇವಡಿ ಮಾಡಿದರು.

ತನಿಖೆ ನಡೆಸಲಿ: ಒಂದೊಮ್ಮೆ ಬಿಜೆಪಿ ಸರ್ಕಾರದಲ್ಲಿ ಭ್ರಷ್ಟಾಚಾರ ನಡೆದಿರುವ ಕುರಿತು ತನಿಖೆ ನಡೆಸಲು ಈ ಸರ್ಕಾರಕ್ಕೆ ಧೈರ್ಯ ಇದೆಯೇ, ಇದ್ದರೆ 6 ತಿಂಗಳಲ್ಲಿ ತನಿಖೆ ಮುಗಿಸಲಿ. ಬಿ.ಎಸ್.ಯಡಿಯೂರಪ್ಪ ವಿರುದ್ಧ ನಾನು ಮಾಡಿರುವ ಆರೋಪದ ಕುರಿತು ತನಿಖೆ ಮಾಡಿದರೂ ಎದುರಿಸಲು ಸಿದ್ಧನಿದ್ದೇನೆ. ನಮ್ಮಲ್ಲಿಯೂ ಭ್ರಷ್ಟರಿದ್ದರೆ ತನಿಖೆಯಿಂದಾದರೂ ಬಿಜೆಪಿ ಸ್ವಚ್ಛಗೊಳ್ಳಲಿದೆ ಎಂದರು.

ಬಿಜೆಪಿ ಸರ್ಕಾರ ಇದ್ದಾಗ 40 ಪರ್ಸೆಂಟ್ ಕಮೀಷನ್ ಪಡೆದಿತ್ತು ಎಂಬುದಕ್ಕೆ ಸಚಿವ ಎಂ.ಬಿ.ಪಾಟೀಲ ಅವರ ಬಳಿ ಆಡಿಯೋ, ವಿಡಿಯೋ ಇದ್ದರೆ ಬಿಡುಗಡೆ ಮಾಡಲಿ. ಕ್ಯಾಸೆಟ್ ಕಾಲ ಹೋಗಿ ಪೆನ್‍ಡ್ರೈವ್ ಕಾಲ ಬಂದಿದೆ ಎಂದು ಛೇಡಿಸಿದರು.

ಎಂ.ಬಿ.ಪಾಟೀಲ ಅವರು ಐದು ವರ್ಷ ಸಚಿವನಾಗಿರುತ್ತೇನೆ ಎಂಬ ಭ್ರಮೆಯಲ್ಲಿದ್ದಾರೆ. ಯತ್ನಾಳ್ ವಿಡಿಯೋ ನನ್ನ ಬಳಿ ಇವೆ ಬಿಡುಗಡೆ ಮಾಡುತ್ತೇನೆ ಎಂದಿರುವ ಸಚಿವ ಪಾಟೀಲ ಅವರಿಗೆ ಅಧಿಕಾರದ ಅರಳು ಮರಳು ಹಿಡಿದಿದೆ ಎಂದು ಕುಟುಕಿದರು.

ವರ್ಗಾವಣೆ ದಂಧೆಯಲ್ಲಿ ತೊಡಗಿರುವ ಕಾಂಗ್ರೆಸ್ ಸರ್ಕಾರಕ್ಕೆ ಸಾರಿಗೆ ಸಂಸ್ಥೆಯ ಸಿಬ್ಬಂದಿ ವೇತನ ನೀಡಲೂ ಸಾಧ್ಯವಾಗದ ದುಸ್ಥಿತಿ ಇದೆ. ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಬಳಿ ಪೆನ್ ಡ್ರೈವ್ ಇದೆ ಎಂದು ಬ್ಲಾಕ್‍ಮೇಲ್ ಮಾಡಿ ಬಾಯಿ ಮುಚ್ಚಿಸುವ ಬೆದರಿಕೆ ತಂತ್ರ ಬೇಡ. ಧೈರ್ಯ ಇದ್ದರೆ ಯಾರ್ಯಾರ ಡೈವ್, ಯಾರ್ಯಾರ ಪೆನ್ ಇದೆಯೋ ಬಿಡುಗಡೆ ಮಾಡಲಿ. ಯಾರ್ಯಾರದ್ದು ಏನೇನಿದೆ ಎಂಬುದು ನನಗೂ ಗೊತ್ತಿದೆ. ಇಂಥ ಹೇಳಿಕೆ ಕೊಡುವವರದ್ದು ಏನೇನಿದೆ ಎಂಬುದೂ ನನಗೆ ಗೊತ್ತಿದೆ. ಆದರೆ ನಾನು ಬ್ಲ್ಯಾಕ್ ಮೇಲ್ ಮಾಡಲಾರೆ ಎಂದು ಟೀಕಾ ಪ್ರಹಾರ ನಡೆಸಿದರು.

ಬಾಂಬೆ ಟೀಂ ಮತ್ತೆ ಕಾಂಗ್ರೆಸ್ ಸೇರ್ಪಡೆಯಾಗುತ್ತಾರೆ ಎಂಬುದೆಲ್ಲ ಊಹಾಪೋಹ ಹಾಗೂ ಕಾಂಗ್ರೆಸ್ ನಡೆಸಿರುವ ಅಪ್ರಚಾರ. ಶಾಸಕ ಮುನಿರತ್ನ ಬಿಜೆಪಿ ಪಕ್ಷದಲ್ಲೇ ನನ್ನ ರಾಜಕೀಯ ಜೀವನ ಕೊನೆಗೊಳ್ಳಲಿದೆ ಎಂದಿದ್ದಾರೆ. ಇಂಥ ಅಪಪ್ರಚಾರದಿಂದ ಭಯ ಹುಟ್ಟಿಸಿ, ಲೋಕಸಭಾ ಚುನಾವಣೆಗೆ ವಾತಾವರಣ ವಾಮ ಮಾರ್ಗದ ಸಿದ್ಧತೆ ನಡೆಸಿದ್ದಾರೆ ಎಂದು ಟೀಕಿಸಿದರು.

ಕಾಂಗ್ರೆಸ್ ಏನೇ ತಂತರ ಮಾಡಿದರೂ ಲೋಕಸಭೆ ಚುನಾವಣೆಯಲ್ಲಿ ದೇಶಕ್ಕೆ ನರೇಂದ್ರ ಮೋದಿ ಅವರನ್ನು ಪ್ರಧಾನಿ ಮಾಡಲು ರಾಜ್ಯದಲ್ಲಿ ಬಿಜೆಪಿ ಮತ್ತೆ 25 ಸ್ಥಾನ ಗೆಲ್ಲುವುದು ಖಚಿತ. ದೇಶಕ್ಕೆ ರಾಹುಲ್ ಗಾಂಧಿ, ಮಮತಾ ಬ್ಯಾನರ್ಜಿ ಇಂತವರ ನಾಯಕತ್ವ ದೇಶಕ್ಕೆ ಬೇಕಿಲ್ಲ. ಭಾರತವನ್ನು ವಿಶ್ವದ ಆರ್ಥಿಕ ಬಲಿಷ್ಠ ರಾಷ್ಟ್ರಗಳಲ್ಲಿ 5ನೇ ಸ್ಥಾನಕ್ಕೆ ತಂದಿರುವ ಮೋದಿ ಅವರ ನಾಯಕತ್ವ ಬೇಕಿದ್ದು, ದೇಶದ ಮತದಾರರು ಮತ್ತೊಮ್ಮೆ ಮೋದಿ ಅವರ ಕೈ ಬಲಪಡಿಸಲಿದ್ದಾರೆ ಎಂದರು.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರನ್ನು ಬಿಜೆಪಿ ಮುಖಂಡ ಎಸ್.ಟಿ.ಸೋಮಶೇಖರ್ ಭೇಟಿ ಮಾಡಿದ್ದರಲ್ಲಿ ತಪ್ಪೇನಿದೆ. ಜೆ.ಎಚ್.ಪಟೇಲ್ ಅವರು ಮುಖ್ಯಮಂತ್ರಿಯಾಗಿದ್ದಾಗ ಬಿಜೆಪಿ ಶಾಸಕನಾಗಿದ್ದ ನಾನು ಪಟೇಲರು ಮತ್ತೊಮ್ಮೆ ರಾಜ್ಯದ ಮುಖ್ಯಮಂತ್ರಿಯಾಗಲಿ ಎಂದಿದ್ದೆ. ಅಧಿಕಾರದಲ್ಲಿರುವ ನಾಯಕರನ್ನು ವಿಪಕ್ಷದವರು ಭೇಟಿ ಮಾಡುವುದು ಸಾಮಾನ್ಯ. ರಾಜಕೀಯದ ಹೊರತಾಗಿ ಭೇಟಿ ಮಾಡಿದರೆ ತಪ್ಪೇನಿದೆ ಎಂದರು.

ಬಿಜೆಪಿಗೆ ಓಟು ಹಾಕಿದವರು ರಾಕ್ಷಸರು ಎಂದು ಸುರ್ಜೆವಾಲಾ ಹೇಳಿಕೆಗೆ ತೀಕ್ಷ ಪ್ರತಿಕ್ರಿಯೆ ನೀಡಿರುವ ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ, ಸುರ್ಜೇವಾಲಾ ಭಾರತೀಯ ಮತದಾರರನ್ನು ಅವಮಾನ ಮಾಡಿದ್ದಾರೆ. ಕಾಂಗ್ರೆಸ್ ಸಂಸ್ಕೃತಿಯೇ ರಾಕ್ಷಸತ್ವದಿಂದ ಕೂಡಿದೆ. ಅದರ ವಂಶದ ಹಿನ್ನೆಲೆಯಲೇ ಸರಿ ಇಲ್ಲ, ಅದು ಹೈಬ್ರಿಡ್ ತಳಿಯ ರಾಕ್ಷಸ ಸಂತತಿ. ಕಾಂಗ್ರೆಸ್ ಪಕ್ಷ ಎಂಥ ಮನಸ್ಥಿತಿ ಹೊಂದಿದೆ ಎಂಬುದನ್ನು ದೇಶದ ಮತದಾರರು ಇನ್ನಾದರೂ ಅರ್ಥೈಸಿಕೊಳ್ಳಬೇಕು ಎಂದರು.

ಟಾಪ್ ನ್ಯೂಸ್

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.