ಕಂದಕ ಸೃಷ್ಟಿಸುವ ಕೆಲಸ ಮಾಡಬೇಡಿ: ಶ್ರೀಶೈಲ ಶ್ರೀ


Team Udayavani, Jan 10, 2018, 10:17 AM IST

10-10.jpg

ವಿಜಯಪುರ: ವೀರಶೈವ ಹಾಗೂ ಲಿಂಗಾಯತರನ್ನು ಬೇರ್ಪಡಿಸಲು ಯಾರಿಂದಲೂ ಸಾಧ್ಯವಿಲ್ಲ. ವೀರಶೈವ ಹಾಗೂ ಲಿಂಗಾಯತರಲ್ಲಿ ಒಡಕು ಹಾಗೂ ಕಂದಕ ಸೃಷ್ಟಿಸುವ ಕೆಲಸವನ್ನು ಯಾರೂ ಮಾಡಬಾರದು ಎಂದು ಶ್ರೀಶೈಲ ಜಗದ್ಗುರು ಡಾ| ಚನ್ನಸಿದ್ಧರಾಮ ಪಂಡಿತಾರಾಧ್ಯ
ಶಿವಾಚಾರ್ಯ ಭಗವತ್ಪಾದರು ಹೇಳಿದರು.

ತಾಲೂಕಿನ ಬಬಲೇಶ್ವರ ಬೃಹನ್ಮಠದ ಆವರಣದಲ್ಲಿ ಜರುಗಿದ ಹಾಗಲ್‌ ಕುಮಾರ ಶಿವಯೋಗಿಗಳ 150ನೇ ಜಯಂತ್ಯುತ್ಸವ ಹಾಗೂ ವೀರಶೈವ-ಲಿಂಗಾಯತ ಸಮನ್ವಯ ಜನಜಾಗೃತಿ  ಸಮಾವೇಶದ ಸಾನ್ನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು. ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟದ ಮುಂಚೂಣಿಯ  ಲ್ಲಿರುವ ವ್ಯಕ್ತಿಗಳು ವೀರಶೈವ ಬೇರೆ, ಲಿಂಗಾಯತ ಬೇರೆ ಎಂದು ಒಂದು ಕಡೆ, ಇನ್ನೊಂದು ಕಡೆ ವೀರಶೈವ ಎನ್ನುವುದು ಲಿಂಗಾಯತ ಧರ್ಮದ 99 ಉಪಪಂಗಡಗಳಲ್ಲಿ ಒಂದು ಎಂದು ಹೇಳುವ ಮೂಲಕಗೊಂದಲ ಸೃಷ್ಟಿಸುತ್ತಿದ್ದಾರೆ. ಮೊದಲು ಅವರಲ್ಲಿ ಈ ಸ್ಪಷ್ಟತೆ ಇಲ್ಲ ಎಂದರು. 

ವೀರಶೈವ-ಲಿಂಗಾಯತ ಒಂದೇ, ಎಂದೆಂದಿಗೂ ಒಂದೇ, ಲಿಂಗಾಯತ-ವೀರಶೈವ ಒಂದು-ವಿಶ್ವವೇ ನಮ್ಮ ಬಂಧು ಎಂದರು. ಬಬಲೇಶ್ವರ ಬೃಹನ್ಮಠದ ಡಾ| ಮಹಾದೇವ ಶಿವಾಚಾರ್ಯರು ಪ್ರಾಸ್ತಾವಿಕ ಮಾತನಾಡಿದರು. ಜಾಲಹಳ್ಳಿಯ ಜಯ ಶಾಂತಲಿಂಗೇಶ್ವರ ಸ್ವಾಮಿಗಳು ಸೇರಿದಂತೆ ಹಲವಾರು ಮಠಾಧೀಶರು ಭಾಗವಹಿಸಿದ್ದರು.

ವಚನ ಸಾಹಿತ್ಯಕ್ಕೆ ಉನ್ನತ ಗೌರವ: ಉಜ್ಜಯಿನಿ ಶ್ರೀ
ವಿಜಯಪುರ: ಬಹಳಷ್ಟು ಜನರು ವಚನಗಳು ತಮ್ಮ ಆಸ್ತಿ ಎಂಬಂತೆ ಹಾಗೂ ಪಂಚ ಪೀಠಗಳಿಗೂ-  ವಚನಗಳಿಗೂ ಸಂಬಂಧವಿಲ್ಲ ಎಂಬಂತೆ ಮಾತನಾಡುತ್ತಿದ್ದಾರೆ. ಬಸವಾದಿ ಶರಣರು ಹಾಗೂ ವಚನ ಸಾಹಿತ್ಯಕ್ಕೆ ಪಂಚಾಚಾರ್ಯರು ಉನ್ನತ ಗೌರವ ನೀಡಿದ್ದಾರೆ ಎಂದು ಉಜ್ಜಯಿನಿ ಜಗದ್ಗುರು
ಸಿದ್ಧಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರು ಹೇಳಿದರು.

ವೀರಶೈವ-ಲಿಂಗಾಯತ ಸಮನ್ವಯದ ಜನ ಜಾಗೃತಿ ಸಮಾವೇಶದ ಸಾನ್ನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿ, ಬಸವಣ್ಣನವರ ಮೇಲೆ ವಾಗೀಶ ಪಂಡಿತಾರಾಧ್ಯ ಶ್ರೀಗಳು ಉನ್ನತ ಸಂಶೋಧನೆ ಕೈಗೊಂಡಿದ್ದಾರೆ. ಈ ವಿಷಯವನ್ನು ಪ್ರತ್ಯೇಕವಾದಿಗಳು ಅರ್ಥ ಮಾಡಿಕೊಳ್ಳಬೇಕು ಎಂದರು. ಆಚರಣೆಯಿಂದ ವೀರಶೈವ, ಅನುಸರಣೆಯಿಂದ ಲಿಂಗಾಯತರಾಗಬೇಕು. ಯಾರನ್ನು ನಾವು ನಾಯಕರನ್ನಾಗಿಸಬೇಕು, ಯಾರನ್ನು ಒಪ್ಪಿಕೊಳ್ಳಬೇಕು ಎಂಬುದು ಆಲೋಚಿಸಿ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ತಮಗೆ ಕೊಟ್ಟ ಅಸ್ತ್ರ ಬಳಸಬೇಕು ಎಂದು ಕರೆ ನೀಡಿದರು.

ವೀರಶೈವ ಎನ್ನುವುದು ಧರ್ಮ, ಲಿಂಗಾಯತ ಎನ್ನುವುದು ಆಚರಣೆ. ಉದಾಹರಣೆ ಮೂಲಕ ವಿಶ್ಲೇಷಿಸುವುದಾದರೆ, ಇಸ್ಲಾಂ ಎನ್ನುವುದು ಧರ್ಮ, ನಮಾಜ್‌, ಹಜ್‌ ಹಾಗೂ ರೋಜಾ, ಜಕಾತ್‌ ಎನ್ನುವುದು ಆ ಧರ್ಮದ ಆಚರಣೆಗಳು. ಆಚರಣೆಗಳು ಎಂದ ಮಾತ್ರಕ್ಕೆ ನಮಾಜ್‌ ಎನ್ನುವುದು ಧರ್ಮವಾಗುವುದಿಲ್ಲ. ನಮಾಜ್‌ ಅನ್ನುವುದು ಧರ್ಮ ಎಂದು ಅವರು ಒಪ್ಪುವುದಿಲ್ಲ. ಅದರಂತೆ ವೀರಶೈವ ಎನ್ನುವುದು ಧರ್ಮ, ಲಿಂಗಾಯತ ಎನ್ನುವುದು ಆಚರಣೆ.
 ●ಡಾ| ಚಂದ್ರಶೇಖರ ಶಿವಾಚಾರ್ಯರು, ಕಾಶಿ ಜಗದ್ಗುರು 

ಟಾಪ್ ನ್ಯೂಸ್

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.