ಧರಣಿಗೆ ವೈದ್ಯರು-ವಕೀಲರ ಬೆಂಬಲ


Team Udayavani, Dec 6, 2018, 12:49 PM IST

vij-2.jpg

ಮುದ್ದೇಬಿಹಾಳ: ಪಟ್ಟಣದ ಅಂಬೇಡ್ಕರ್‌ ವೃತ್ತದಲ್ಲಿ ಹುನಗುಂದ-ಮುದ್ದೇಬಿಹಾಳ-ತಾಳಿ ಕೋಟೆ ರಾಜ್ಯ ಹೆದ್ದಾರಿ ನಿರ್ಮಾಣ ಹೋರಾಟ ಸಮಿತಿ ನೇತೃತ್ವದಲ್ಲಿ ಹೆದ್ದಾರಿ ಅಗಲೀಕರಣಕ್ಕಾಗಿ ನಡೆಯುತ್ತಿರುವ ಧರಣಿ ಸತ್ಯಾಗ್ರಹಕ್ಕೆ ಬುಧವಾರ ವಕೀಲರು, ವೈದ್ಯರು, ಕ್ರಿಯೇಟಿವ್‌ ಫ್ರೆಂಡ್ಸ್‌ ಕ್ಲಬ್‌
ಸದಸ್ಯರು ಧರಣಿಯಲ್ಲಿ ಪಾಲ್ಗೊಂಡು ಬೆಂಬಲ ಸೂಚಿಸಿದರು.

ವಕೀಲರು ಕೋರ್ಟ್‌ ಕಲಾಪದಿಂದ ದೂರ ಉಳಿದು, ತಹಶೀಲ್ದಾರ್‌ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿ, ಅಂಬೇಡ್ಕರ್‌ ವೃತ್ತದಲ್ಲಿ ಮಾನವ ಸರಪಳಿ ರಚಿಸಿ ಪ್ರತಿಭಟಿಸುವ ಮೂಲಕ ಹೋರಾಟಕ್ಕೆ ಹೆಚ್ಚಿನ ಬಲ ತಂದುಕೊಟ್ಟರು. ಪಟ್ಟಣದ ಎಲ್ಲ ಖಾಸಗಿ ವೈದ್ಯರು ಒಂದು ಗಂಟೆ ಕಾಲ ತಮ್ಮ ಆಸ್ಪತ್ರೆಗಳನ್ನು ಸಾಂಕೇತಿಕವಾಗಿ ಬಂದ್‌ ಮಾಡಿ ಧರಣಿಯಲ್ಲಿ ಪಾಲ್ಗೊಂಡಿದ್ದರು. ಹಿರಿಯ ವೈದ್ಯ ಡಾ| ಎ.ಎಂ. ಮುಲ್ಲಾ, ಡಾ| ಮಹಾಂತೇಶ ಅಂಗಡಿ ಇನ್ನಿತರರು ಮಾತನಾಡಿ, ಹೋರಾಟ ಊರಿನ ಹಿತಕ್ಕಾಗಿ ನಡೆಸುತ್ತಿರುವಂಥದ್ದು. ಇದಕ್ಕೆ ಎಲ್ಲರೂ ಬೆಂಬಲಿಸಬೇಕು ಎಂದರು.

ವೈದ್ಯರಾದ ಡಾ| ಎ.ಬಿ. ಹೊಕ್ರಾಣಿ, ಡಾ| ಉತ್ಕರ್ಷ ನಾಗೂರ, ಡಾ| ಎಂ.ಎಂ. ಅಥಣಿ, ಡಾ| ಎಂ.ಎಂ. ಹಿರೇಮಠ, ಡಾ| ನಾಯಕ್‌, ಡಾ| ಜುಲ್ಪೆ, ಡಾ| ಡಿ.ಬಿ. ಓಸ್ವಾಲ್‌, ಡಾ| ವೀರೇಶ ಪಾಟೀಲ, ಡಾ| ವೀರೇಶ ಇಟಗಿ, ಡಾ| ಎಸ್‌.ಕೆ. ಶಿವಯೋಗಿಮಠ ಮತ್ತಿರರು ಪಾಲ್ಗೊಂಡಿದ್ದರು.

ಕ್ರಿಯೇಟಿವ್‌ ಫ್ರೆಂಡ್ಸ್‌ ಕ್ಲಬ್‌ನ ಗೆಳೆಯರ ಬಳಗದ 20ಕ್ಕೂ ಹೆಚ್ಚು ಸದಸ್ಯರು ಕ್ಲಬ್‌ ಅಧ್ಯಕ್ಷ ಅಶೋಕ ರೇವಡಿ ನೇತೃತ್ವದಲ್ಲಿ ಧರಣಿಗೆ ಬೆಂಬಲ ಸೂಚಿಸಿ ಕೆಲ ಹೊತ್ತು ಪಾಲ್ಗೊಂಡಿದ್ದು ಬೇಡಿಕೆ ಈಡೇರದಿದ್ದಲ್ಲಿ ಎಲ್ಲರೂ ಧರಣಿಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಭರವಸೆ ನೀಡಿದರು. ಊರಿನ ಹಿತಕ್ಕಾಗಿ ಎಂಥದ್ದೇ ಹೋರಾಟ ನಡೆದರೂ ಬೆಂಬಲಿಸುವುದಾಗಿ ತಿಳಿಸಿದರು. ಪದಾಧಿಕಾರಿಗಳಾದ ಪಾರಸ್‌ ಪೋರವಾಲ, ಮಾಣಿಕಚಂದ ದಂಡಾವತಿ, ಡಿ.ಬಿ. ವಡವಡಗಿ, ಸಿದ್ದರಾಜ ಹೊಳಿ, ಬಸಯ್ಯ ನಂದಿಕೇಶ್ವರಮಠ ಬೇಡಿಕೆ ಈಡೇರಿಕೆ ಅವಶ್ಯಕತೆ ಕುರಿತು ಮಾತನಾಡಿದರು.

ವಕೀಲರಿಂದ ಮಾನವ ಸರಪಳಿ: ಹೋರಾಟಕ್ಕೆ ಬೆಂಬಲ ನೀಡಲು ನಿರ್ಧರಿಸಿದ ಎಲ್ಲ ವಕೀಲರು ನ್ಯಾಯವಾದಿಗಳ ಸಂಘದಲ್ಲಿ ಸಭೆ ಸೇರಿ ಕೋರ್ಟ್‌ ಕಲಾಪದಿಂದ ದೂರ ಉಳಿಯುವ ಠರಾವು ಸ್ವೀಕರಿಸಿದರು. ನಂತರ ಎಲ್ಲರೂ ಸಾಮೂಹಿಕವಾಗಿ ತಹಶೀಲ್ದಾರ್‌ ಕಚೇರಿಗೆ ತೆರಳಿ ಮುಖ್ಯಮಂತ್ರಿಗೆ ಬರೆದ ಮನವಿ ಪತ್ರವನ್ನು ತಹಶೀಲ್ದಾರ್‌ ಎಂ.ಎಸ್‌. ಬಾಗವಾನ ಅವರಿಗೆ ಸಲ್ಲಿಸಿದರು.

ಹೆದ್ದಾರಿ ಅಗಲೀಕರಣ ಕುರಿತು 28-11-2018ರಂದು ಮನವಿ ಕೊಟ್ಟಿದ್ದರೂ ಜಿಲ್ಲಾಧಿಕಾರಿ ಸ್ಪಂದಿಸಿಲ್ಲದಿರುವುದು ವಿಪರ್ಯಾಸ ಎಂದು ತಿಳಿಸಿ ಹೆದ್ದಾರಿ ಅಗಲೀಕರಣ ಬೇಡಿಕೆ ಈಡೇರಿಸುವ ಕುರಿತು ಮನವಿಯಲ್ಲಿ ಒತ್ತಾಯಿಸಲಾಗಿದೆ. ನಂತರ ತಹಶೀಲ್ದಾರ್‌ ಕಚೇರಿಯಿಂದ ಪಾದಯಾತ್ರೆ ಮೂಲಕ ಅಂಬೇಡ್ಕರ್‌ ವೃತ್ತಕ್ಕೆ ಆಗಮಿಸಿ ಮಾನವ ಸರಪಳಿ ನಿರ್ಮಿಸಿದರು. ಇದರಿಂದಾಗಿ ಕೆಲಹೊತ್ತು ರಸ್ತೆ ಸಂಚಾರ್‌ ಬಂದ್‌ ಆಗಿ ಸಾರ್ವಜನಿಕರು ಪರದಾಡುವಂತಾಯಿತು.
 
ಈ ವೇಳೆ ಹಿರಿಯ ವಕೀಲರಾದ ಎಂ.ಎಚ್‌. ಹಾಲಣ್ಣವರ, ಎಂ.ಎಸ್‌. ನಾವದಗಿ, ಎಸ್‌.ಎಸ್‌. ಮಾಲಗತ್ತಿ, ಎಚ್‌.ವೈ. ಪಾಟೀಲ, ಎನ್‌.ಆರ್‌. ಮುದ್ನಾಳ, ವಿಜಯಮಹಾಂತೇಶ ಸಾಲಿಮಠ ಮಾತನಾಡಿ, ಯೋಜನಾ ವರದಿಯಲ್ಲಿನ ಬ್ಲೂಪ್ರಿಂಟ್‌ನಲ್ಲಿ ಇರುವಂತೆ ಹೆದ್ದಾರಿ ಕಾಮಗಾರಿ ನಡೆಸುತ್ತಿಲ್ಲ. ಹೆದ್ದಾರಿ ಬ್ಲೂಪ್ರಿಂಟ್‌ ಬಗ್ಗೆ ಮಾಹಿತಿ ಕೇಳಿದರೆ ಹುಬ್ಬಳ್ಳಿಯಲ್ಲಿ ಕಚೇರಿ ಹೊಂದಿರುವ ಕೆಆರ್‌ಡಿಸಿಎಲ್‌ನ ಅಧಿಕಾರಿಗಳು ಕೊಡುತ್ತಿಲ್ಲ.

ಗುತ್ತಿಗೆದಾರರು ಮನಸ್ಸಿಗೆ ಬಂದಂತೆ ಕೆಲಸ ಮಾಡುತ್ತಿದ್ದಾರೆ. ಕೆಲವೆಡೆ 7, 8, 9 ಮೀಟರ್‌ ಹೀಗೆ ಮನಸ್ಸಿಗೆ ಬಂದ ಅಳತೆಯಲ್ಲಿ ರಸ್ತೆ ಅಗಲಗೊಳಿಸುತ್ತಿದ್ದಾರೆ. ಅಗಲೀಕರಣಕ್ಕಾಗಿ ಈಗ ನಡೆದಿರುವ ಹೋರಾಟದಲ್ಲಿ ಯಾರದೇ ವೈಯುಕ್ತಿಕ ಸ್ವಾರ್ಥ ಇಲ್ಲ ಊರಿನ ಹಿತಾಸಕ್ತಿ ಇದೆ. ನಮ್ಮ ಪ್ರಾಣ ಕೊಟ್ಟಾದರೂ ಸರಿ ಬೇಡಿಕೆ ಈಡೇರುವ ತನಕ ಹೋರಾಟ ಕೈ ಬಿಡುವುದಿಲ್ಲ. ವಾರದೊಳಗೆ ಬೇಡಿಕೆ ಈಡೇರಿಸಬೇಕು. ಇಲ್ಲವಾದಲ್ಲಿ ವಕೀಲರೂ ಸಹಿತ ಉಪವಾಸ ಸತ್ಯಾಗ್ರಹ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಪರಮೇಶ ಮಾತಿನ ವಕೀಲರು, ಸಿದ್ದರಾಜ ಹೊಳಿ, ಬಸವರಾಜ ನಂದಿಕೇಶ್ವರಮಠ, ಭೀಮನಗೌಡ ಪಾಟೀಲ, ಮಹಾಂತೇಶಗೌಡ ಬಿರಾದಾರ, ಹಿರಿಯರಾದ ಮಲಘಾಣದ ಶಿವಲಿಂಗಪ್ಪಶೆಟ್ಟಿ ಮಹಾಜನಶಟ್ರಾ, ವಿವಿಧ ಸಂಘಟನೆಗಳ ಪ್ರಮುಖರಾದ ರಾಜೇಂದ್ರಗೌಡ ರಾಯಗೊಂಡ, ಸುರೇಶ ಪಾಟೀಲ ಇಂಗಳಗೇರಿ, ಮಂಜುನಾಥ ಕುಂದರಗಿ, ಅರುಣ ಪದಕಿ, ರಾಜುಗೌಡ ತುಂಬಗಿ, ಶಬ್ಬೀರ ಬಾಗಲಕೋಟೆ ಸೇರಿದಂತೆ ಹಲವರು ಇದ್ದರು. 

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.