Vijayapura ಕನ್ನಡಿಗರನ್ನು ಕೆರಳಿಸಬೇಡಿ : ಯತ್ನಾಳ ಎಚ್ಚರಿಕೆ
Team Udayavani, Nov 1, 2023, 6:48 PM IST
ವಿಜಯಪುರ : ಮಹಾರಾಷ್ಟ್ರ ರಾಜ್ಯದಲ್ಲಿ ಮರಾಠಿ ಮೀಸಲು ಹೋರಾಟದ ನೆಪದಲ್ಲಿ ಕರ್ನಾಟಕದ ಸಾರಿಗೆ ಸಂಸ್ಥೆಗಳ ಬಸ್ಗಳಿಗೆ ಬೆಂಕಿ ಹಚ್ಚುವ ಮೂಲಕ ಕನ್ನಡಿಗರನ್ನು ಕೆರಳಿಸುವ ಕೆಲಸ ಮಾಡಲಾಗುತ್ತಿದೆ. ಅನಗತ್ಯವಾಗಿ ಕನ್ನಡಿಗರನ್ನು ಕೆರಳಿಸಬೇಡಿ ಎಂದು ಎಂದು ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ ಯತ್ನಾಳ ಎಚ್ಚರಿಸಿದ್ದಾರೆ.
ಬುಧವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಕರ್ನಾಟಕದ ಬಸ್ಗಳಿಗೆ ಬೆಂಕಿ ಹಚ್ಚಿರುವ ಕೃತ್ಯ ಖಂಡನಾರ್ಹ. ಮರಾಠಿ ಮೀಸಲಾತಿಗೆ ಹೋರಾಟ ಮಾಡಬೇಕೆ ಹೊರತು, ಕರ್ನಾಟಕದ ಬಸ್ಗಳಿಗೆ ಬೆಂಕಿ ಹಚ್ಚುವ ಕೆಲಸ ತರವಲ್ಲ ಎಂದು ಹರಿಹಾಯ್ದರು.
ಮಹಾರಾಷ್ಟ್ರದಲ್ಲಿನ ಮರಾಠ ಮೀಸಲು ಹೋರಾಟ ಮಹಾರಾಷ್ಟ್ರ ಸರ್ಕಾರದ ವಿರುದ್ದ ಇರಬೇಕೆ ಹೊರತು, ಕರ್ನಾಟಕ ರಾಜ್ಯದ ಆಸ್ತಿ ಹಾನಿ ಮಾಡುವ ಹಾಗೂ ಕನ್ನಡಿಗರ ಮೇಲೆ ಹರಿಹಾಯುವುದಲ್ಲ ಎಂದು ಕುಟುಕಿದರು.
ಕರ್ನಾಟಕ ಮಹಾರಾಷ್ಟ್ರ ರಾಜ್ಯಗಳ ಮಧ್ಯೆ ಕೌಟುಂಬಿಕ ಬಾಂಧವ್ಯಗಳಿವೆ, ಕರ್ನಾಟಕದ ಜನರು ವೈದ್ಯಕೀಯ ಸೇವೆಗಾಗಿ ಮಹಾರಾಷ್ಟ್ರದ ರಾಜ್ಯದ ಹಲವು ನಗರಗಳಿಗೆ ಹೋಗುತ್ತಾರೆ. ಮರಾಠಿ ಮೀಸಲು ಹೋರಾಟದ ನೆಪದಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯ ನಡೆಸಿದರೆ ಸಮಸ್ಯೆ ಸೃಷ್ಟಿಯಾಗಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ
Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್