ಸುರಂಗ ಮಾರ್ಗ ಪುನಶ್ಚೇತನಕ್ಕೆ ಡಿಪಿಆರ್‌


Team Udayavani, Jul 12, 2017, 3:22 PM IST

12-BJP-3.jpg

ವಿಜಯಪುರ: ವಿಜಯಪುರ ನಗರಕ್ಕೆ ನೀರು ಪೂರೈಸುವ ಐತಿಹಾಸಿಕ ಸುರಂಗ ಮಾರ್ಗ ವ್ಯವಸ್ಥೆ ಪುನಶ್ಚೇತನಕ್ಕೆ ಪ್ರವಾಸೋದ್ಯಮ ಅಭಿವೃದ್ಧಿಗೆ ಸಮಗ್ರ ಯೋಜನಾ ವರದಿ ಸಿದ್ಧವಾಗಿದೆ. ಇರಾನ್‌ ದೇಶದ ತಜ್ಞರಿಂದ ಅಧ್ಯಯನ ನಡೆಯಲಿದ್ದು, ಇದಕ್ಕಾಗಿ 8 ಕೋಟಿ ರೂ. ಮಂಜೂರಾಗಿದೆ ಎಂದು ಜಿಲ್ಲಾ ಉಸ್ತುವಾರಿ ಹೊಂದಿರುವ ಜಲ ಸಂಪನ್ಮೂಲ ಸಚಿವ ಡಾ| ಎಂ.ಬಿ. ಪಾಟೀಲ ಹೇಳಿದರು.

ಮಂಗಳವಾರ ನಗರದ ಟಕ್ಕೆ ಪ್ರದೇಶದಲ್ಲಿ ಐತಿಹಾಸಿಕ ಸುರಂಗ ಮಾರ್ಗ ಪುನಶ್ಚೇತನ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ
ಅವರು, ಐತಿಹಾಸಿಕವಾಗಿ ಮಹತ್ವ ಪಡೆದಿರುವ ಇಂತಹ ಬಾವಿಗಳ ವ್ಯವಸ್ಥೆ ಇರಾನ್‌, ತುರ್ಕಿ, ಚೀನಾ, ಅಫಘಾನಿಸ್ತಾನ್‌ ಅಲ್ಲದೆ ಭಾರತದ ವಿಜಯಪುರ ಹಾಗೂ ಬೀದರ ನಗರಗಳಲ್ಲಿ ಕಾಣಲು ಸಾಧ್ಯವಿದೆ. ವಿಶ್ವದಲ್ಲೇ ವಿಶಿಷ್ಟವಾಗಿರುವ ವಿಜಯಪುರ ನಗರದ ಐತಿಹಾಸಿಕ ಸುರಂಗ ವ್ಯವಸ್ಥೆ ಅಧ್ಯಯನಕ್ಕೆ ಇರಾನ್‌ ದೇಶದಿಂದ ತಜ್ಞರೊಬ್ಬರು ಆಗಮಿಸಲಿದ್ದಾರೆ ಎಂದರು.

ಹೀಗಾಗಿ ಕೆರೆ, ಬಾವಿ, ಸುರಂಗ ಮಾರ್ಗ ವ್ಯವಸ್ಥೆಯ ಸಂಪೂರ್ಣ ಪುನಶ್ಚೇತನಕ್ಕೆ ಮುಂದಾಗಿದ್ದೇವೆ. ಇದಕ್ಕಾಗಿ ಪ್ರವಾಸೋದ್ಯಮ ಇಲಾಖೆ 8 ಕೋಟಿ ರೂ. ಮಂಜೂರು ಮಾಡಿದೆ. ಐತಿಹಾಸಿಕ ಸುರಂಗ ಮಾರ್ಗ ವಿದ್ಯುತ್‌ ಸಂಶೋಧನೆ ಇಲ್ಲದ ಆ ಕಾಲಘಟ್ಟದಲ್ಲಿ ರಾಜಧಾನಿಗೆ ಕುಡಿಯುವ ನೀರು, ನೀರಾವರಿ ಯೋಜನೆಗಾಗಿ ರೂಪುಗೊಂಡಿದೆ. ಪುನಶ್ಚೇತನದ ಜತೆಗೆ ಪ್ರವಾಸೋದ್ಯಮಕ್ಕೂ ಪೂರಕವಾಗುವಂತೆ  ಈ ಯೋಜನೆ ರೂಪಿಸಲಾಗುತ್ತಿದೆ ಎಂದರು. ಜಿಲ್ಲೆಯಲ್ಲಿ ಸಂಪೂರ್ಣ ಹಾಳಾಗಿದ್ದ ಐತಿಹಾಸಿಕ ಜಲಮೂಲ-ಜಲಸಂಗ್ರಹ ಬಾವಿಗಳ ಪುನಶ್ಚೇತನ ಕಾರ್ಯ ಯಶಸ್ವಿಯಾಗಿದ್ದು ಜಲಮಾರ್ಗ, ಸುರಂಗ ಮಾರ್ಗ ಗುರುತಿಸಿ ಜಲಸಂಗ್ರಹ ಹಾಗೂ ಸದ್ಬಳಕೆ ಮಾಡಿಕೊಳ್ಳುವ ಕಾರ್ಯಕ್ರಮ ರೂಪಿಸಲಾಗಿದೆ. ನೀರಿನ ಸಮಸ್ಯೆ ಬಗೆಹರಿಸುವ ದಿಸೆಯಲ್ಲಿ 22 ಐತಿಹಾಸಿಕ ಬಾವಿಗಳನ್ನು ಪುನಶ್ಚೇತನ ಮಾಡಲಾಗಿದೆ. ಮುಂದಿನ ವರ್ಷ ಇನ್ನೂ 20 ಬಾವಿಗಳ ಜೀರ್ಣೋದ್ಧಾರ ಕಾರ್ಯ ನಡೆಯಲಿದೆ ಎಂದರು. ಜಿಲ್ಲಾ ಧಿಕಾರಿ ಕೆ.ಬಿ. ಶಿವಕುಮಾರ, ಪಾಲಿಕೆ ಆಯುಕ್ತ ಶ್ರೀಹರ್ಷ ಶೆಟ್ಟಿ, ಪಾಲಿಕೆ ಸದಸ್ಯರಾದ ಅಬ್ದುಲ್‌ರಜಾಕ್‌ ಹೊರ್ತಿ, ಮೈನುದ್ದೀನ್‌ ಬೀಳಗಿ, ಉಮೇಶ ವಂದಾಲ, ವೂಡಾ ಮಾಜಿ ಅಧ್ಯಕ್ಷ ಚಂದ್ರಶೇಖರ ಶಟ್ಟಿ, ಜಲತಜ್ಞ ಪೀಟರ್‌ ಅಲೆಗಾಡರ್‌, ಡಾ| ಎಚ್‌.ಜಿ. ದಡ್ಡಿ, ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ದುರುಗೇಶ ರುದ್ರಾಕ್ಷಿ ಇದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.