ಯುನೆಸ್ಕೋ ಜೀವವಿಜ್ಞಾನದ ಮುಖ್ಯಸ್ಥರಾಗಿ ವಿಜಯಪುರದ ಡಾ. ಕುಶಾಲದಾಸ್ ನೇಮಕ
ಈ ಪ್ರತಿಷ್ಠಿತ ಹುದ್ದೆಗೆ ನೇಮಕಗೊಂಡ ಏಷ್ಯಾದ ಪ್ರಥಮ ವ್ಯಕ್ತಿ ಎಂಬ ಕೀರ್ತಿಗೆ ಭಾಜನರಾದ ಕನ್ನಡಿಗ ಡಾ. ಕುಶಾಲ ದಾಸ್
Team Udayavani, Jul 22, 2020, 6:22 PM IST
ವಿಜಯಪುರ: ಯುನೆಸ್ಕೋ ಜೀವ ವಿಜ್ಞಾನ ಪೀಠದ ಮುಖ್ಯಸ್ಥರಾಗಿ ವಿಜಯಪುರ ಬಿ.ಎಲ್.ಡಿ.ಇ. ಡೀಮ್ಡ್ ವಿಶ್ವವಿದ್ಯಾಲಯ ಪ್ರಾಧ್ಯಾಪಕ ಡಾ. ಕುಶಾಲ ದಾಸ್ ನೇಮಕಗೊಂಡಿದ್ದಾರೆ.
ಇದರೊಂದಿಗೆ ಏಷ್ಯಾ ಖಂಡದಲ್ಲೇ ಈ ಸ್ಥಾನದ ಗೌರವ ಪಡೆದ ಮೊದಲಿಗ ಎಂಬ ಹಿರಿಮೆಗೂ ಪಾತ್ರರಾಗಿದ್ದಾರೆ
ಜೀವ ವಿಜ್ಞಾನ ಪೀಠದಡಿ ಅಮೇರಿಕಾ, ಇಂಗ್ಲೆಂಡ್ ಸೇರಿದಂತೆ 18 ದೇಶಗಳ ವಿವಿಧ ವಿಶ್ವವಿದ್ಯಾನಿಲಯಗಳಿಗೆ ಸ್ನಾತಕೋತ್ತರ ಮತ್ತು ಪಿ.ಎಚ್.ಡಿ ಪಠ್ಯಕ್ರಮವನ್ನು ಸಿದ್ಧಪಡಿಸುವುದು ಸೇರಿದಂತೆ ಜೀವ ವಿಜ್ಞಾನ ಕ್ಷೇತ್ರದಲ್ಲಿ ಯುನೆಸ್ಕೋ ಕೈಗೊಳ್ಳಬೇಕಾದ ಹಲವು ಕ್ರಮಗಳನ್ನು ನೋಡಿಕೊಳ್ಳುವುದು ಈ ಹುದ್ದೆಯ ಜವಾಬ್ದಾರಿಯಾಗಿರಲಿದೆ.
ಈ ಹುದ್ದೆಗೆ ನೇಮಕಗೊಂಡ ಏಷ್ಯಾದ ಮೊದಲ ವ್ಯಕ್ತಿ ಡಾ.ಕುಶಾಲ ದಾಸ್ ಆಗಿದ್ದು, ಪಠ್ಯಕ್ರಮದ ಜೊತೆಗೆ ಸಾರ್ವಜನಿಕ ಆರೋಗ್ಯ ಮತ್ತು ಪರಿಸರ ಸಮಸ್ಯೆಗಳನ್ನು ಪರಿಹರಿಸಲು ಈ ಪೀಠ ಮಾರ್ಗದರ್ಶನ ಮಾಡುತ್ತಲಿದೆ.
ಡಾ.ಕುಶಾಲ ದಾಸ್ ನೇಮಕ ಭಾರತೀಯ ವಿಜ್ಞಾನಿಯೊಬ್ಬರಿಗೆ ನೀಡಿದ ಗೌರವ ಎಂದು ಬಿ.ಎಲ್.ಡಿ.ಇ ಅಧ್ಯಕ್ಷ ಎಂ.ಬಿ.ಪಾಟೀಲ, ಡೀಮ್ಡ್ ವಿಶ್ವವಿದ್ಯಾಲಯದ ಉಪಕುಪತಿ ಡಾ.ಎಂ.ಎಸ್.ಬಿರಾದಾರ ಅವರು ಬಣ್ಣಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!
MUST WATCH
ಹೊಸ ಸೇರ್ಪಡೆ
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ