ತಿಕೋಟಾದಲ್ಲಿ ಬಿತ್ತನೆ ಬೀಜ ವಿತರಣೆಗೆ ಚಾಲನೆ
Team Udayavani, Jun 3, 2021, 10:10 PM IST
ವಿಜಯಪುರ: ತಿಕೋಟಾ ಪಟ್ಟಣದ ರೈತ ಸಂಪರ್ಕ ಕೇಂದ್ರದಲ್ಲಿ ಮುಂಗಾರು ಹಂಗಾಮಿನ ಬಿತ್ತನೆ ಬೀಜ ವಿತರಣೆಯನ್ನು ಆರಂಭಗೊಂಡಿತು.
ಸರಕಾರದ ನಿರ್ದೇಶನದಂತೆ ರಿಯಾಯಿತಿ ದರದಲ್ಲಿ ಸಜ್ಜೆ, ಶಕ್ತಿಮಾನ ಗೋವಿನಜೋಳ, ತೊಗರಿ, ಹೆಸರು ಮುಂತಾದ ಬಿತ್ತನೆ ಬೀಜಗಳನ್ನು ವಿತರಣೆ ಮಾಡಲು ಸ್ಥಳೀಯ ಕೃಷಿ ಅಧಿ ಕಾರಿ ಟಿ.ಎ. ಸೋಲಾಪುರಕರ ತಿಳಿಸಿದ್ದಾರೆ. ಕೋವಿಡ್ ನಿಯಮದಂತೆ ಸಾಮಾಜಿಕ ಅಂತರ ಪಾಲನೆ, ಮಾಸ್ಕ್ ಧರಿಸುವುದು ಸೇರಿದಂತೆ ರೈತರಿಗೆ ಸೂಚನೆಗಳನ್ನು ಅನುಸರಿಸುವಂತೆ ತಿಳಿಸಿ ವಿತರಣೆ ಆರಂಭಗೊಂಡಿದೆ. ತಾಲೂಕಿನಲ್ಲಿ ಮುಂಗಾರು ಮಳೆ ಆರಂಭವಾಗಿದ್ದು ಎಲ್ಲ ರೈತರು ಸರಕಾರದ ಸೌಲಭ್ಯ ಪಡೆದುಕೊಂಡು ಉತ್ತಮ ಬಿತ್ತನೆ ಬೀಜ ಪಡೆದು ಅ ಧಿಕ ಇಳುವರಿ ಹೊಂದಿ ಆರ್ಥಿಕವಾಗಿ ಸಬಲರಾಗಲು ಕೋರಲಾಗಿದೆ. ಕೃಷಿ ಅ ಧಿಕಾರಿ ಬಿ.ಆರ್. ಬೋರಗಿ, ನಿವೃತ್ತ ಸಹಾಯಕ ಕೃಷಿ ಅ ಧಿಕಾರಿ ಸೋಮಶೇಖರ ಜತ್ತಿ, ಎ.ಬಿ. ಪಾಟೀಲ, ಎಸ್ .ಬಿ. ಬಿರಾದಾರ, ಮುಸ್ತಾಕ್ ಬಾಳಿಕಾಯಿ, ಮುತ್ತಪ್ಪ ಶಿರಹಟ್ಟಿ, ಕಿರಣ ಜತ್ತಿ, ಅಶೋಕ ಅವಟಿ, ಶಿವಾನಂದ ಬಂಡಗಾರ, ಜಗದೀಶ ದಿಂಡೂರ, ಕಲ್ಲಪ್ಪ ಕಂಠಿ, ಕುಬೇರ ಹಟ್ಟಿ, ಮೀಯಾಸಾಬ ಮುಲ್ಲಾ ಇದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ
MUST WATCH
ಹೊಸ ಸೇರ್ಪಡೆ
Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್
ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ
Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ