ಕಲಸು ಮೇಲೋಗರದ ಶಿಕ್ಷಣದಿಂದ ಗುಣಮಟ್ಟಕ್ಕೆ ಧಕ್ಕೆ


Team Udayavani, Mar 12, 2019, 11:44 AM IST

vij-1.jpg

ವಿಜಯಪುರ: ಅಂತಾರಾಷ್ಟ್ರೀಯ ಅಗ್ರಹಾರಗಳಿಗೆ ಶಿಕ್ಷಣದ ಗುಣಮಟ್ಟ ಆಹಾರವಾಗಬಾರದು. ಎಲ್ಲಿಂದ ಜ್ಞಾನಮುಖೀ ಶಿಕ್ಷಣ, ಉದ್ಯೋಗಮುಖೀ ಶಿಕ್ಷಣ ಎಂಬುದನ್ನು ನಿರ್ಧರಿಸಬೇಕು. ಎರಡನ್ನೂ ಒಟ್ಟೊಟ್ಟಿಗೆ ನೀಡುತ್ತೇವೆ ಎಂಬ ಕಲಸ ಮೇಲೋಗರ ನೀತಿಯಿಂದ ಕೆಲವರು ಕೀಳರಿಮೆ ಮತ್ತು ಕೆಲವರು ಮೇಲರಿಮೆ ಅನುಭವಿಸುವಂತಾಗುತ್ತಿದೆ ಎಂದು ನಾಡೋಜ ಬರಗೂರು ರಾಮಚಂದ್ರಪ್ಪ ಅಭಿಪ್ರಾಯಪಟ್ಟರು.

ಸೋಮವಾರ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ವಿಭಾಗದಲ್ಲಿ ರಾಜ್ಯ ಉನ್ನತ ಶಿಕ್ಷಣ ಪರಿಷತ್‌ ಹಾಗೂ ರಾಷ್ಟ್ರೀಯ ಉಚ್ಚತರ ಶಿಕ್ಷಾ ಅಭಿಯಾನ (ರೂಸಾ), ಎಂಎಚ್‌ ಆರ್‌ಡಿ ಇವರ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಉನ್ನತ ಶಿಕ್ಷಣದಲ್ಲಿ ಆದ್ಯತೆಗಳ ಪಲ್ಲಟ ಕುರಿತ ಒಂದು ದಿನದ ಸಾಮರ್ಥ್ಯ ವರ್ಧನೆ ಕಾರ್ಯಾಗಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಶಿಕ್ಷಣದ ಸಾರ್ವತ್ರೀಕರಣ ದೇಶದ ಬಹುದೊಡ್ಡ ಸಾಧನೆಯಾಗಿದೆ. ಮಹಿಳಾ ವಿವಿ ಸ್ಥಾಪನೆಯಾಗಿ ಮಹಿಳಾ ಸಬಲೀಕರಣಕ್ಕೆ ಬಹುದೊಡ್ಡ ವರದಾನವಾಗಿದೆ ಎಂದರು. ದೇಶದ ಆರ್ಥಿಕ ಬದಲಾವಣೆಗಳು ಸಾಮಾಜಿಕ, ಸಾಂಸ್ಕೃತಿಕ ಮ¤ತು ಶೈಕ್ಷಣಿಕ ಕ್ಷೇತ್ರದ ಮೇಲೂ ಪರಿಣಾಮ ಬೀರುತ್ತವೆ. ಶಿಕ್ಷಣ ಒಂದು ಸಮಗ್ರ ಘಟಕ. ಪ್ರಾಥಮಿಕ ಶಿಕ್ಷಣ ಬಿಟ್ಟು ಕೇವಲ ಉನ್ನತ ಶಿಕ್ಷಣದ ಕುರಿತು ಚರ್ಚಿಸಿದರೆ ಅದುಅರ್ಧ ಸತ್ಯವಾಗುತ್ತದೆ. ನಾವು ಹೇಗೆ ಪ್ರಾಥಮಿಕ ಶಿಕ್ಷಣ ಕೊಡುತ್ತೇವೆಯೋ ಹಾಗೆಯೇ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ದೊರೆಯುತ್ತದೆ ಎಂದು ಹೇಳಿದರು.

ಉನ್ನತ ಶಿಕ್ಷಣದ ಭೌತಿಕ ಅಭಿವೃದ್ಧಿಗೆ ಸಿಕ್ಕಷ್ಟು ಅನುದಾನ ಪ್ರಾಥಮಿಕ ಶಿಕ್ಷಣದ ಅಭಿವೃದ್ಧಿಗೆ ಸಿಗುತ್ತಿಲ್ಲ. ಕೇವಲ ಮಾಧ್ಯಮದಲ್ಲಿನ ಶಿಕ್ಷಣದ ಚರ್ಚೆಯೇ ನಿಜವಾದ ಪ್ರಾಥಮಿಕ ಶಿಕ್ಷಣದ ಚರ್ಚೆ ಎಂದು ಭಾವಿಸಬಾರದು. ಅದರಾಚೆಗೂ ಹೆಚ್ಚು ಚರ್ಚೆಗಳಿವೆ. ಅವುಗಳ ಕುರಿತು ಅವಲೋಕಿಸಬೇಕಿದೆ ಎಂದರು. 

ಕರ್ನಾಟಕ ಸಾಂಸ್ಕೃತಿಕ ವಿಶ್ವವಿದ್ಯಾಲಯದ ಕುಲಪತಿ ಪದ್ಮಾ ಶೇಖರ್‌ ಮಾತನಾಡಿ, ಸಾಂಪ್ರದಾಯಿಕ ಹೊದಿಕೆಯೊಳಗೆ ಸಿಲುಕಿರುವ ಮಹಿಳೆಗೆ ಆದ್ಯತೆಗಳ ಸ್ವೀಕಾರ ಕಷ್ಟವಾಗಿದೆ. ಉನ್ನತ ಶಿಕ್ಷಣದಲ್ಲಿ ಅರ್ಧದಷ್ಟು ಮಹಿಳೆಯರ ಪಾಲು ಇದೆ. ಇದಕ್ಕೆ ಕಾರಣ ಮಹಿಳೆಯರ ಹೋರಾಟದ ಫಲ. ಆದ್ದರಿಂದ ಮಹಿಳೆಯರ ಆದ್ಯತೆಗಳ ಪಲ್ಲಟವೂ ಕಾಲಕ್ಕೆ ತಕ್ಕಂತೆ ಬದಲಾಗುತ್ತ ಬರುತ್ತಿವೆ ಎಂದರು. ಗುಲ್ಬರ್ಗಾ ವಿವಿ ಕುಲಪತಿ ಎಸ್‌.ಆರ್‌. ನಿರಂಜನ್‌ ಮಾತನಾಡಿ, ಇಂದಿನ ವಾತಾವರಣದಲ್ಲಿ ಗುಣಮಟ್ಟದ ಶಿಕ್ಷಣ ಅವಶ್ಯಕತೆ ಇದೆ.
ಆದರೆ ಆ ಗುಣಮಟ್ಟದ ಶಿಕ್ಷಣವನ್ನು ನಾವು ಎಲ್ಲಿಂದ ಪಡೆಯಬೇಕು ಎಂಬುವುದರ ಚರ್ಚೆ ಆಗಬೇಕಿದೆ. ಎಂದರು. 

ಮಂಗಳೂರು ವಿಶ್ವವಿದ್ಯಾಲಯದ ಹಂಗಾಮಿ ಕುಲಪತಿ ಕೆ.ಕಿಶೋರಿ ನಾಯಕ ಮತ್ತು ಕನ್ನಡ ವಿಶ್ವವಿದ್ಯಾಲಯದ ಹಂಗಾಮಿ ಕುಲಪತಿ ಆರ್‌.ರಮೇಶ ಮಾತನಾಡಿದರು. ಕರ್ನಾಟಕ ರಾಜ್ಯಉನ್ನತ ಶಿಕ್ಷಣ ಪರಿಷತ್‌ ಕಾರ್ಯ ನಿರ್ವಾಹಕ ನಿರ್ದೇಶಕ ಡಾ| ಎಸ್‌.ಎ. ಕೋರಿ ಪ್ರಾಸ್ತಾವಿಕ ಮಾತನಾಡಿ, ದೇಶದಲ್ಲಿ 900 ವಿಶ್ವವಿದ್ಯಾಲಯಗಳು, 50,000 ಕಾಲೇಜುಗಳಿದ್ದರೂ ಸಹ ಉನ್ನತ ಶಿಕ್ಷಣದತ್ತ ಮುಖ ಮಾಡುತ್ತಿರುವ ವಿದ್ಯಾರ್ಥಿಗಳ ಸಂಖ್ಯೆಕಡಿಮೆಯಾಗುತ್ತಿದೆ ಎಂದು ವಿಷಾದಿಸಿದರು.ಅಕ್ಕಮಹಾದೇವಿ ಮಹಿಳಾ ವಿವಿ ಕುಲಪತಿ ಸಬಿಹಾ ಅಧ್ಯಕ್ಷತೆ ವಹಿಸಿದ್ದರು. ಮಹಿಳಾ ವಿಶ್ವವಿದ್ಯಾಲಯದ ಆರ್ಥಿಕ ಅಧಿಕಾರಿ ಎಸ್‌.ಬಿ. ಮಾಡಗಿ ವೇದಿಕೆಯಲ್ಲಿದ್ದರು. ಕುಲಸಚಿವೆ ಆರ್‌. ಸುನಂದಮ್ಮ ಸ್ವಾಗತಿಸಿದರು. ಡಾ| ಗಾಣಿಗೇರ ಭಾರತಿ ನಿರೂಪಿಸಿದರು. ಮೌಲ್ಯಮಾಪನ ಕುಲಸಚಿವ ಪಿ.ಜಿ. ತಡಸದ ವಂದಿಸಿದರು.

ನಮ್ಮಲ್ಲಿ ಉನ್ನತ ಶಿಕ್ಷಣಕ್ಕೆ ಅಗತ್ಯ ಇರುವ ಮೂಲಭೂತ ಸೌಕರ್ಯಗಳಿಲ್ಲದ ಕಾರಣ ನಮ್ಮ ಪ್ರತಿಭೆಗಳು ಆನಿವಾರ್ಯವಾಗಿ ಅನ್ಯ ದೇಶಗಳಿಗೆ ವಲಸೆ ಹೋಗುತ್ತಿವೆ. ಆದ್ದರಿಂದ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಮುಖ್ಯವಾಗಿ ಭೌತಿಕ, ಡಿಜಿಟಲ್‌, ಬೌದ್ಧಿಕ ಮತ್ತು ಭಾವನಾತ್ಮಕ ಸೌಕರ್ಯಗಳನ್ನು ಸೃಷ್ಟಿಸಬೇಕು 
 ಎಸ್‌.ಆರ್‌. ನಿರಂಜನ್‌ ಗುಲ್ಬರ್ಗಾ ವಿಶ್ವ ವಿದ್ಯಾಲಯ ಕುಲಪತಿ 

ಟಾಪ್ ನ್ಯೂಸ್

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.