ವಿಜಯಪುರ ಜಿಲ್ಲೆಯಲ್ಲಿ ಸರಣಿ ಭೂಕಂಪದ ಅನುಭವ : ಭಯದಲ್ಲಿ ಜನತೆ
Team Udayavani, Aug 23, 2022, 7:32 AM IST
ವಿಜಯಪುರ: ಬಸವನಾಡಿನಲ್ಲಿ ಕಳೆದ ಮೂರು ದಿನಗಳಿಂದ ನಿರಂತರ ಐದಾರು ಬಾರಿ ಭೂಮಿ ಕಂಪಿಸಿದೆ. ಸತತವಾಗಿ ಭೂಕಂಪದ ಅನುಭವದಿಂದ ಜಿಲ್ಲೆಯ ಜನರು ಭಯಭೀತರಾಗಿದ್ದು, ಅಧ್ಯಯನ ನಡೆಸುವಂತೆ ಸರ್ಕಾರಕ್ಕೆ ಮನವಿ ಮಾಡಲು ಜಿಲ್ಲಾಡಳಿತ ನಿರ್ಧರಿಸಿದೆ.
ಭಾನುವಾರ ರಾತ್ರಿ 6-27ಕ್ಕೆ ಬಸವನಬಾಗೇವಾಡಿ ತಾಲೂಕಿನ ಉಕ್ಕಲಿ ಗ್ರಾಮದಲ್ಲಿ ಹಾಗೂ 3-13ಕ್ಕೆ, ಸೋಮವಾರ ಮಧ್ಯಾಹ್ನ 4-26, ರಾತ್ರಿ 9-23 ಕ್ಕೆ ವಿಜಯಪುರ ನಗರದ ಬಹುತೇಕ ಭಾಗಗಳಲ್ಲಿ ಭೂಮಿ ಕಂಪಿಸಿದೆ. ಶನಿವಾರ ರಾತ್ರಿ 8-16 ನಗರದಲ್ಲಿ ಭೂಮಿ ಕಂಪಿಸಿತ್ತು.
ಹೀಗೆ ಕಳೆದ ಮೂರು ದಿನಗಳಿಂದ ಐದಾರು ಬಾರಿ ಭೂಮಿ ಕಂಪಿಸಿದ್ದು, ಮನೆಗಳು ಅಲುಗಾಡಿ, ವಸ್ತುಗಳು ಕೆಳಗೆ ಬೀಳುತ್ತಿವೆ. ಭೂಕಂಪನದ ಭೀತಿಯಿಂದಾಗಿ ಜಿಲ್ಲೆಯ ಜನರು ಮನೆಗಳ ಒಳಗೆ ನಿಲ್ಲಲೂ ಭಯಪಡುವಷ್ಟು ಆತಂಕ ಸೃಷ್ಟಿಯಾಗಿದೆ.
ಈ ಮಧ್ಯೆ ಅಪಾಯ ರಹಿತ ಭೂಕಂಪ ಸಂಭವಿಸಿದ ಉಕ್ಕಲಿ ಗ್ರಾಮಕ್ಕೆ ಕಂದಾಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಸ್ಥಳೀಯರಿಂದ ಮಾಹಿತಿ ಸಂಗ್ರಹಿಸಿದೆ.
ಮತ್ತೊಂದೆಡೆ ಜಿಲ್ಲೆಯಲ್ಲಿ ಸತತವಾಗಿ ಲಘು ಭೂಕಂಪ ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಜನರು ಆತಂಕದಲ್ಲಿದ್ದಾರೆ. ಹೀಗಾಗಿ ಅಧ್ಯಯನ ನಡೆಸಲು ಭೂಗರ್ಭ ತಜ್ಞರ ತಂಡ ಕಳಿಸುವಂತೆ ಸರ್ಕಾರಕ್ಕೆ ಮನವಿ ಮಾಡಲು ಜಿಲ್ಲಾಡಳಿತ ನಿರ್ಧರಿಸಿದೆ. ಮಂಗಳವಾರ ಸರ್ಕಾರಕ್ಕೆ ಈ ಬಗ್ಗೆ ಪತ್ರ ಬರೆಯುವುದಾಗಿ ಜಿಲ್ಲಾಧಿಕಾರಿ ಡಾ.ವಿ.ಬಿ. ದಾನಮ್ಮನವರ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ