ವಿಜಯಪುರ ಜಿಲ್ಲೆಯಲ್ಲಿ ಭೂಕಂಪದ ಅನುಭವ, ಮನೆ ಬಿಟ್ಟು ಹೊರಗೆ ಓಡಿ ಬಂದ ಜನ
Team Udayavani, Jun 13, 2021, 9:21 AM IST
ವಿಜಯಪುರ: ಜಿಲ್ಲೆಯ ಭಾನುವಾರ ನಸುಕಿನಲ್ಲಿ 2-25 ರಿಂದ 2-30 ರ ಅವಧಿಯಲ್ಲಿ ಹಲವು ಕಡೆಗಳಲ್ಲಿ ಭೂಕಂಪನದ ಅನುಭವವಾಗಿದೆ. ಇದರಿಂದಾಗಿ ಜನರು ಮನೆಯಿಂದ ಹೊರಗೆ ಓಡಿ ಬಂದು ಜಾಗರಣೆ ಮಾಡಿದ ಘಟನೆ ನಡೆದಿದೆ.
ವಿಜಯಪುರ ನಗರದ ಗ್ಯಾಂಗ್ ಬಾವಡಿ ಪ್ರದೇಶದಲ್ಲಿ ನಸುಕಿನ 2-29 ಕ್ಕೆ, ಲೋಹಗಾಂವ್ ಗ್ರಾಮದಲ್ಲಿ ಬೆಳಿಗ್ಗೆ 2-27 ರ, ಅರಕೇರಿ, ಕಳ್ಳಕವಟಗಿ ಸೇರಿದಂತೆ ವಿಜಯಪುರ ಗ್ರಾಮೀಣ, ತಿಕೋಟ ತಾಲೂಕಿನ ಬಹುತೇಕ ಹಳ್ಳಿಗಳಲ್ಲಿ ಭೂಕಂಪದ ಅನುಭವ ಆಗಿದೆ.
ಜನರು ಗಾಢ ನಿದ್ದೆಯಲ್ಲಿ ಇದ್ದಾಗ ನಸುಕಿನಲ್ಲಿ ಜರುಗಿದ ಭೂಕಂಪದ ಅನುಭವ ಆಗುತ್ತಲೇ ಜನರು ಮನೆಗಳಿಂದ ಹೊರಗೆ ಓಡಿ ಬಂದಿದ್ದಾರೆ. ವಿದ್ಯಾವಂತರು ಭೂಕಂಪದ ಅನುಭವ ಆಗುತ್ತಲೇ ಖಚಿತ ಪಡಿಸಿಕೊಳ್ಳಲು ತಮ್ಮ ಮೊಬೈಲ್ ಮೂಲಕ ಗೂಗಲ್ ಸರ್ಚ್ ಮಾಡಿದ್ದಾರೆ.
ಇದನ್ನೂ ಓದಿ:ಎಲೆಕ್ಟ್ರಿಕ್ ಸ್ಕೂಟರ್ ಪ್ರಿಯರಿಗೆ ಸಿಹಿಸುದ್ದಿ: ಸಬ್ಸಿಡಿ ಹೆಚ್ಚಳ,ವಾಹನದ ದರ ಇಳಿಕೆ ಸಾಧ್ಯತೆ
ಮತ್ತೆ ಕೆಲವರು ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ಭೂಕಂಪದ ಅನುಭವ ಆಗಿರುವ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ.
ನಗರದ ಗ್ಯಾಂಗ್ ಬಾವಡಿ ನಿವಾಸಿ ಅರಕೇರಿ ಶಾಲೆ ಶಿಕ್ಷಕ ನಿಂಗಣ್ಣ ಅರವತ್ತು, ಲೋಹಗಾಂವ ವಸ್ತಿ ಪ್ರದೇಶದ ಸಂತೋಷ ಬಗಲಿ, ಕಳ್ಳಕವಟಗಿ ವಸ್ತಿ ಪ್ರದೇಶದ ನಿವಾಸಿ ಪರಮೇಶ ಗದ್ಯಾಳ ಹೀಗೆ ಹಲವರು ನಸುಕಿನಲ್ಲಿ 3-4 ಬಾರಿ ಭೂಮಿಯ ಆಳದಿಂದ ಭಾರಿ ಸದ್ದಿನ ಮೂಲಕ ಭೂಕಂಪನ ಅನುಭವ ಆಗಿದ್ದನ್ನು ಉದಯವಾಣಿ ಪತ್ರಿಕೆಗೆ ಖಚಿತ ಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ
ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು
KPTCL ಕಂಪೌಂಡ್ ಗೋಡೆ ಮೈಮೇಲೆ ಬಿದ್ದು ಕಾರ್ಮಿಕ ಸಾವು
BJP;ಯತ್ನಾಳ್ ಸೇರಿ ಯಾರೇ ಆಗಿದ್ದರೂ ಶಿಸ್ತು ಕ್ರಮ ಕೈಗೊಳ್ಳಬೇಕು: ಶಂಕರಗೌಡ
Vijayapura ಬಿಜೆಪಿಗೆ ಸಂಕಷ್ಟ: ಬಂಡಾಯ ಸ್ಪರ್ಧೆಗೆ ಸಜ್ಜಾದ ನಾಯಿಕ
MUST WATCH
ಹೊಸ ಸೇರ್ಪಡೆ
OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?
Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್ ಎಫ್ ಕೆನಡಿ ಹಿಟ್ಲರ್ ನನ್ನು ಬಂಧಿಸಿದ್ದು!
ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್ ರೋಲ್ ನಲ್ಲಿ ಫಾಫಾ
ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ
Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ