30ರಂದು ಜಿಪಂ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ


Team Udayavani, Jun 21, 2020, 7:31 AM IST

30ರಂದು ಜಿಪಂ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ

ವಿಜಯಪುರ: ಶಿವಯೋಗೆಪ್ಪ ನೇದಲಗಿ ಅವರು ರಾಜೀನಾಮೆ ನೀಡಿದ್ದರಿಂದ ತೆರವಾಗಿರುವ ವಿಜಯಪುರ ಜಿಲ್ಲೆಯ ಜಿಪಂ ಅಧ್ಯಕ್ಷ ಸ್ಥಾನಕ್ಕೆ ಜೂ. 30ರಂದು ಚುನಾವಣೆ ದಿನಾಂಕ ನಿಗದಿಯಾಗಿದೆ. ಇದರಿಂದಾಗಿ ಜಿಲ್ಲೆಯಲ್ಲಿ ರಾಜಕೀಯ ಚಟುವಟಿಕೆಗಳು ಚುರುಕುಗೊಂಡಿವೆ.

ಕಾಂಗ್ರೆಸ್‌ ಆಂತರಿಕ ಒಪ್ಪಂದದಂತೆ ಅಧಿಕಾರ ಹಂಚಿಕೆ ಸೂತ್ರಕ್ಕಾಗಿ ಶಿವಯೋಗೆಪ್ಪ ನೇದಲಗಿ ಮೇ ಕೊನೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ಕುರಿತು ಚುನಾವಣಾಧಿಕಾರಿಗಳಾದ ಬೆಳಗಾವಿ ಪ್ರಾದೇಶಿಕ ಆಯುಕ್ತರು ಜಿಪಂ ಸಿಇಒ ಅವರಿಗೆ ಚುನಾವಣೆಗೆ ಅಗತ್ಯ ಇರುವ ಸಿದ್ಧತೆ ಮಾಡಿಕೊಳ್ಳುವಂತೆ ಸೂಚನೆ ನೀಡಿದ್ದಾರೆ.

42 ಸದಸ್ಯ ಬಲದ ವಿಜಯಪುರ ಜಿಪಂನಲ್ಲಿ ಬಿಜೆಪಿ 20 ಸದಸ್ಯರನ್ನು ಹೊಂದಿದ್ದು ದೊಡ್ಡ ಪಕ್ಷವಾಗಿದ್ದರೂ 18 ಸದಸ್ಯರನ್ನು ಮಾತ್ರ ಹೊಂದಿರುವ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನದಲ್ಲಿ ಕುಳಿತು ಈವರೆಗೆ ಅಧಿಕಾರ ನಡೆಸಿದೆ. ಕಾಂಗ್ರೆಸ್‌ ಅಧಿಕಾರ ಸೂತ್ರ ಹಿಡಿಯುವಲ್ಲಿ ಜೆಡಿಎಸ್‌ ಪಕ್ಷದ 3 ಸದಸ್ಯರಲ್ಲಿ ಇಬ್ಬರು ಹಾಗೂ ಓರ್ವ ಪಕ್ಷೇತರ ಸದಸ್ಯನ ಬೆಂಬಲ ಕಾರಣವಾಗಿದೆ. ಕಾಂಗ್ರೆಸ್‌ ಸದಸ್ಯರಾಗಿರುವ ನೀಲಮ್ಮ ಮೇಟಿ ಹಾಗೂ ಶಿವಯೋಗೆಪ್ಪ ನೇದಲಗಿ ಅವರು ಈ ಹಿಂದಿನ 4 ವರ್ಷಗಳ ಅವ ಧಿಯಲ್ಲಿ ಅಧ್ಯಕ್ಷರಾಗಿದ್ದರು. ಇದೀಗ ಕಾಂಗ್ರೆಸ್‌ ಅಧಿಕಾರ ಹಂಚಿಕೆ ಸೂತ್ರದ ಆಧಾರದಲ್ಲಿ ಸುಜಾತಾ ಕಳ್ಳಿಮನಿ ಅವರಿಗೆ ಕಾಂಗ್ರೆಸ್‌ಹೈಕಮಾಂಡ್‌ ಕೊಟ್ಟ ಮಾತಿನಂತೆ ನೇದಲಗಿ ಅವರಿಂದ ರಾಜೀನಾಮೆ ಕೊಡಿಸುವಲ್ಲಿ ಯಶಸ್ವಿಯಾಗಿದೆ.

ಹೀಗಾಗಿ ಇದೀಗ ಜಿಲ್ಲೆಯಲ್ಲಿ ಮತ್ತೆ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಮ್ಯಾಜಿಕ್‌ ಸಂಖ್ಯೆ 22 ಸದಸ್ಯರು ಬೇಕು. ಜಿಪಂ ಅಧಿಕಾರದ ಗದ್ದುಗೆ ಮರಳಿ ಹಿಡಿಯಲು 18 ಸದಸ್ಯರ ಕಾಂಗ್ರೆಸ್‌ ಪಕ್ಷಕ್ಕೆ ಇಬ್ಬರು ಜೆಡಿಎಸ್‌ ಸದಸ್ಯರು ಹಾಗೂ ಓರ್ವ ಪಕ್ಷೇತರ ಬೆಂಬಲ ನೀಡಿದರೂ ಮ್ಯಾಜಿಕ್‌ ಸಂಖ್ಯೆಗೆ ಒಬ್ಬ ಸದಸ್ಯ ಕೊರತೆ ಎದುರಾಗಲಿದೆ. ಹೀಗಾಗಿ ಬಿಜೆಪಿ ಸಂಪರ್ಕದಲ್ಲಿರುವ ಜೆಡಿಎಸ್‌ ಇನ್ನೋರ್ವ ಸದಸ್ಯನನ್ನು ಮನವೊಲಿಸುವ ಕಾರ್ಯಕ್ಕೆ ಮುಂದಾಗಿದೆ ಎನ್ನಲಾಗಿದೆ.

ಪರಿಣಾಮ ಹೆಚ್ಚಿನ ಸದಸ್ಯರಿದ್ದರೂ ಅಧಿಕಾರ ಹಿಡಿಯವಲ್ಲಿ ಸಮರ್ಥ ನಾಯಕತ್ವದ ಕೊರತೆ ಎದುರಿಸುತ್ತಿರುವ ಬಿಜೆಪಿಯಲ್ಲಿನ ಒಡಕಿನ ಲಾಭ ಪಡೆಯಲು ಕಾಂಗ್ರೆಸ್‌ ಹೊಂಚು ಹಾಕುತ್ತಿದೆ. ಮತ್ತೂಂದೆಡೆ ಈಗಾಗಲೇ ಪ್ರಭುಗೌಡ ದೇಸಾಯಿ ಅವರ ಮೂಲಕ ಜಿಪಂ ಉಪಾಧ್ಯಕ್ಷ ಸ್ಥಾನದಲ್ಲಿ ಕುಳಿತಿರುವ ಬಿಜೆಪಿ, ಪ್ರಸಕ್ತ ಅವಧಿಯ ಜಿಪಂ ಆಡಳಿತದ ಕೊನೆಯಲ್ಲಿ ಪೂರ್ಣಾಧಿಕಾರ ಪಡೆಯುವ ಅವಕಾಶ ಪಡೆದಿದೆ. ಚುನಾಯಿತ ಸದಸ್ಯರ ಅಧಿಕಾರ  ಕೆಲವು ತಿಂಗಳು ಮಾತ್ರ ಬಾಕಿ ಇರುವಾಗ ಅಧಿಕಾರ ಪಡೆಯುವ ಕುರಿತು ಬಿಜೆಪಿ ಪಡಸಾಲೆಯಲ್ಲಿ ಗಂಭೀರ ಚರ್ಚೆ ನಡೆದಿದೆ.

ಡಿಸಿಎಂ ಲಕ್ಷ್ಮಣ ಸವದಿ ಅವರ ಹತ್ತಿರದ ಸಂಬಂಧಿ ನವೀನ ಅರಕೇರಿ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌. ಈಶ್ವರಪ್ಪ ಅವರ ಕುಲಬಾಂಧವ ಸಾಬು ಮಾಶ್ಯಾಳ ಮಧ್ಯೆ ಪೈಪೋಟಿ ನಡೆದಿದೆ. ಈ ಪೈಪೋಟಿ ಪಕ್ಷದಲ್ಲಿ ಬೇಗುದಿ ಮೂಡಿಸಿದರೆ, ಸುಜಾತಾ ಕಳ್ಳಿಮನಿ ಮೂಲಕ ಮತ್ತೆ ಕಾಂಗ್ರೆಸ್‌ ಜಿಪಂ ಗದ್ದುಗೆ ಏರುವುದು ಖಚಿತ.

ತೆರವಾಗಿರುವ ಜಿಪಂ ಅಧ್ಯಕ್ಷ ಸ್ಥಾನಕ್ಕೆ ಜೂ. 30 ರಂದು ಚುನಾವಣೆ ನಡೆಸಲು ಸರ್ಕಾರ ದಿನಾಂಕ ನಿಗದಿ ಮಾಡಿದೆ. ಪ್ರಾದೇಶಿಕ ಆಯುಕ್ತರ ಸೂಚನೆ ಮೇರೆಗೆ ಚುನಾವಣೆಗೆ ಅಗತ್ಯ ಇರುವ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. -ಗೋವಿಂದರಡ್ಡಿ, ಜಿಪಂ ಸಿಇಒ

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.