Muddebihala:ಕಬ್ಬಿನ ತೂಕದಲ್ಲಿ ಮೋಸ ತಡೆಯಲು ಇಲೆಕ್ಟ್ರಾನಿಕ್ ವೇಯಿಂಗ್ ಮೆಷಿನ್: ಸಚಿವ ಪಾಟೀಲ


Team Udayavani, Oct 29, 2023, 2:49 PM IST

8-muddebihala

ಮುದ್ದೇಬಿಹಾಳ: ಕೆಲವು ಸಕ್ಕರೆ ಕಾರ್ಖಾನೆಯವರು ರೈತರು ಕಾರ್ಖಾನೆಗೆ ತರುವ ಕಬ್ಬಿನ ತೂಕದಲ್ಲಿ ಮೋಸ ಮಾಡುತ್ತಿರುವ ಬಗ್ಗೆ ದೂರು ಕೇಳಿಬರುತ್ತಿದೆ. ರೈತರು ಈ ಬಗ್ಗೆ ಆಧಾರ ಸಮೇತ ದೂರು ಸಲ್ಲಿಸಿದರೆ ಅಂಥ ಕಾರ್ಖಾನೆಗಳ ವಿರುದ್ಧ ಕ್ರಮ ಜರುಗಿಸಲಾಗುತ್ತದೆ. ಮುಂದಿನ ವರ್ಷದಿಂದ ಈ ಅಕ್ರಮ ತಡೆಯಲು ಸರ್ಕಾರದ ವತಿಯಿಂದಲೇ ಇಲೆಕ್ಟ್ರಾನಿಕ್ ವೇಯಿಂಗ್ ಮಷಿನ್ ಅಳವಡಿಸಲಾಗುತ್ತದೆ ಎಂದು ಸಕ್ಕರೆ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ.

ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಕುಂಟೋಜಿಯಲ್ಲಿ ಆ.29ರ ರವಿವಾರ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಡಾ. ಚನ್ಮವೀರ ದೇವರ ಪಟ್ಟಾಧಿಕಾರ ಮಹೋತ್ಸವ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಲು ಆಗಮಿಸಿದ್ದ ವೇಳೆ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಸಕ್ಕರೆ ಕಾರ್ಖಾನೆಯಲ್ಲಿ ಉತ್ಪತ್ತಿಯಾಗುವ ಇಥೆನಾಲ್ ಸೇರಿ ಎಲ್ಲ ಉಪ ಉತ್ಪನ್ನಗಳ ಲಾಭಾಂಶ ರೈತರಿಗೆ ಹಂಚಿಕೆ ಮಾಡಬೇಕು. ಸರ್ಕಾರ ನಿಗದಿಪಡಿಸಿದ ಎಂ.ಆರ್.ಪಿ. ದರದಂತೆ ಕಬ್ಬು ಖರೀದಿಸಬೇಕು. ರೈತರಿಗೆ ಉಪಯುಕ್ತವಾಗಿ ಕೆಲಸ ಮಾಡಬೇಕು. ಈ ಬಗ್ಗೆ ಸರ್ಕಾರ ಹೊರಡಿಸಿರುವ ಆದೇಶ ಕಡ್ಡಾಯವಾಗಿ ಪಾಲಿಸಬೇಕು ಎಂದರು.

ವಿಜಯಪುರ ಜಿಲ್ಲೆಗೆ ಬಸವ ಜಿಲ್ಲೆ, ಬಸವ ನಾಡು ಎನ್ನುವ ಹೆಸರು ಇಡಲು ಚರ್ಚೆ ನಡೆದಿರುವುದು ರಾಜಕೀಯ ಲಾಭದ ಹೊರತಾಗಿರಬೇಕು ಎಂದು ಪುನರುಚ್ಚರಿಸಿದ ಅವರು ನಾನೂ ಬಸವಾಭಿಮಾನಿ, ಬಸವ ನಾಡಿನ ಬಸವಭಕ್ತ. ರಾಜಕೀಯ ಕಾರಣಕ್ಕಾಗಿ ಹೆಸರು ಬದಲಾವಣೆ ವಿಷಯ ಮುನ್ನಲೆಗೆ ತರುವುದು ಶೋಭೆ ತರುವಂಥದ್ದಲ್ಲ ಎಂದರು.

ಡಿಸಿಸಿ ಬ್ಯಾಂಕ್ ಗೆ ಅವಿರೋಧ ಸಂತಸ: ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಗೆ ಮತ್ತೆ ನನ್ನನ್ನು ಅದ್ಯಕ್ಷನನ್ನಾಗಿ ಅವಿರೋಧ ಆಯ್ಕೆ ಮಾಡಿರುವುದು ಸಂತಸ ತರುವಂಥದ್ದು. ಬ್ಯಾಂಕಿನ ಶತಮಾನೋತ್ಸವ ಸಂಭ್ರಮದಲ್ಲಿ ಇದು ಮಹತ್ವದ ಬೆಳವಣಿಗೆಯಾಗಿದೆ. ಆದರೆ ಬ್ಯಾಂಕ್ ನ ನಿರ್ದೇಶಕರ ಅವಿರೋಧ ಆಯ್ಕೆಗೆ ಮುದ್ದೇಬಿಹಾಳ ಪಿಕೆಪಿಎಸ್ ಮತಕ್ಷೇತ್ರ ಸ್ಪರ್ಧೆ ನೀಡಿ ಅವಿರೋಧ ನಾಗಾಲೋಟಕ್ಕೆ ಬ್ರೇಕ್ ಹಾಕಿದ್ದು ವಿಷಾಧನೀಯ ಎಂದರು.

ಕುಂಟೋಜಿ ಸಂಸ್ಥಾನ ಹಿರೇಮಠದ ಡಾ.ಚನ್ನವೀರ ದೇವರು ಇದ್ದರು. ಇದಕ್ಕೂ ಮುನ್ನ ಸಚಿವರು ಸಂಗಮನಾಥ ಮತ್ತು ಬಸವಣ್ಣನ ದರ್ಶನಾಶಿರ್ವಾದ ಪಡೆದುಕೊಂಡರು.

ಟಾಪ್ ನ್ಯೂಸ್

1-eeqwew

Ban; ಎಂಡಿಎಚ್‌, ಎವರೆಸ್ಟ್‌ ಮಸಾಲೆಗಳ ಮೇಲೆ ಅಮೆರಿಕ ಕೂಡ ನಿಷೇಧ?

1-modi

Congress ಗೆದ್ದರೆ 370ನೇ ವಿಧಿ ವಾಪಸ್‌: ಮೋದಿ ಆರೋಪ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eeqwew

Ban; ಎಂಡಿಎಚ್‌, ಎವರೆಸ್ಟ್‌ ಮಸಾಲೆಗಳ ಮೇಲೆ ಅಮೆರಿಕ ಕೂಡ ನಿಷೇಧ?

1-modi

Congress ಗೆದ್ದರೆ 370ನೇ ವಿಧಿ ವಾಪಸ್‌: ಮೋದಿ ಆರೋಪ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.