ನಿರುದ್ಯೋಗ ನಿವಾರಣೆಗೆ ಸಕ್ಕರೆ ಕಾರ್ಖಾನೆ ಸ್ಥಾಪನೆ


Team Udayavani, Aug 25, 2022, 8:46 PM IST

23

ಹೂವಿನಹಿಪ್ಪರಗಿ: ನಿರುದ್ಯೋಗ ಸಮಸ್ಯೆಯಿಂದ ಬಳಲುತ್ತಿರುವ ಈ ಭಾಗದ ಯುವಕರನ್ನು ಉದ್ಯೋಗಸ್ಥರನ್ನಾಗಿ ಮಾಡುವ ನಿಟ್ಟಿನಲ್ಲಿ ಸಿಂದಗಿ ತಾಲೂಕಿನ ಮಲಘಾಣ ಗ್ರಾಮದಲ್ಲಿ ಸುಮಾರು 350 ಕೋಟಿ ರೂ. ವೆಚ್ಚದಲ್ಲಿ ಸಕ್ಕರೆ ಕಾರ್ಖಾನೆ ನಿರ್ಮಾಣ ಮಾಡಿ ಉದ್ಯೋಗಸ್ಥರನ್ನಾಗಿ ಮಾಡುವ ಭರವಸೆಯನ್ನು ಶಾಸಕ ಸೋಮನಗೌಡ ಪಾಟೀಲ(ಸಾಸನೂರ) ನೀಡಿದರು.

ಬಸವನಬಾಗೇವಾಡಿ ತಾಲೂಕಿನ ರೆಬಿನಾಳ ಗ್ರಾಮದಲ್ಲಿ 2019-20ನೇ ಸಾಲಿನ ಮಳೆ ಪರಿಹಾರ ಕಾರ್ಯಕ್ರಮದಡಿ 50 ಲಕ್ಷ ರೂ. ವೆಚ್ಚದಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.

ಗ್ರಾಮದಲ್ಲಿ ಈಗಾಗಲೆ ಹಲವಾರು ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗಿದೆ. ದೇವಸ್ಥಾನಗಳ ಅಭಿವೃದ್ಧಿಗೆ ಅನುದಾನವನ್ನು ನೀಡಲಾಗಿದೆ. ಪ್ರಧಾನಿ ನರೇಂದ್ರ ಮೋದಿಜಿಯವರ ಕನಸಿನಂತೆ ಗ್ರಾಮೀಣ ಪ್ರದೇಶದ ಜನರು ಶುದ್ಧ ನೀರನ್ನು ಕುಡಿಯುವಂತಾಗಲು ಜಲ ಜೀವನ ಮಿಷನ್‌ ಯೋಜನೆ ಅಡಿಯಲ್ಲಿ ಪ್ರತಿ ಮನೆಗೆ ನಳ ಜೋಡಣೆ ಮಾಡಿ ಶುದ್ಧ ನೀರು ಒದಗಿಸಲಾಗಿದೆ ಎಂದು ಹೇಳಿದರು.

ಇಂಗಳೇಶ್ವರ ಗ್ರಾಮದಿಂದ ರೆಬಿನಾಳ ಗ್ರಾಮಕ್ಕೆ ಸುಸಜ್ಜಿತ ರಸ್ತೆ ನಿರ್ಮಾಣಕ್ಕಾಗಿ 5 ಕೋಟಿ ರೂ. ಮಂಜೂರಾಗಿದ್ದು ಶೀಘ್ರದಲ್ಲಿಯೇ ಕಾಮಗಾರಿ ಕೈಗೊಳ್ಳಲಾಗುವುದು. ರೈತಾಪಿ ಜನಗಳ ಹಿತ ಕಾಯುವ ಉದ್ದೇಶ ಹೊಂದಲಾಗಿದೆ. ಈ ನಿಟ್ಟಿನಲ್ಲಿ ವಿಜಯಪುರ 203 ಕಿ.ಮೀ. ಹಾಗೂ ಚಿಮ್ಮಲಗಿ 176 ಕಿ.ಮೀ. ಮುಖ್ಯ ಕಾಲುವೆಗೆ ಉಪ ಕಾಲುವೆ ನಿರ್ಮಾಣಕ್ಕೆ 680 ಕೋಟಿ ರೂ. ಮಂಜೂರಿಗಾಗಿ ಪ್ರಕ್ರಿಯೆ ಪ್ರಗತಿಯಲ್ಲಿದೆ. ಮಂಜೂರಾತಿ ದೊರೆತು ಯೋಜನೆ ಪೂರ್ಣಗೊಂಡಲ್ಲಿ ಜಿಲ್ಲೆಯ 1.25 ಲಕ್ಷ ಎಕರೆ ಜಮೀನು ನೀರಾವರಿಗೆ ಒಳಪಡಲಿದೆ ಎಂದರು.

ಜನತೆಯ ಸಹಕಾರದಿಂದ ಹಿಂದೆಂದೂ ಕಾಣದಷ್ಟು ಅಭಿವೃದ್ಧಿ ಕಾಮಗಾರಿಗಳನ್ನು ಕ್ಷೇತ್ರದಲ್ಲಿ ಕೈಗೊಳ್ಳಲಾಗಿದೆ. ಮೂಲಭೂತ ಸೌಲಭ್ಯಕ್ಕೆ ಒತ್ತು ನೀಡಲಾಗುವುದು. ಚುನಾವಣೆ ಸಂದರ್ಭದಲ್ಲಿ ಮಾತ್ರ ಪಕ್ಷ ಮತ್ತು ಸಂಘಟನೆಯಲ್ಲಿ ನನ್ನನ್ನು ತೊಡಗಿಸಿಕೊಳ್ಳುತ್ತೇನೆ. ಉಳಿದ ದಿನಗಳಲ್ಲಿ ನಾವೆಲ್ಲರೂ ಒಂದೇ ಆಗಿದ್ದು ಕ್ಷೇತ್ರದ ಅಭಿವೃದ್ಧಿಗಾಗಿ ಪಕ್ಷ ಭೇದ ಮರೆತು ಶ್ರಮಿಸೋಣ. ಪ್ರತಿಯೊಬ್ಬರೂ ಸರ್ಕಾರದ ಯೋಜನೆಗಳ ಸದುಪಯೋಗ ಪಡೆದುಕೊಂಡು ಸ್ವಾವಲಂಬಿಯಾಗಿ ಬದುಕು ಸಾಗಿಸುವಂತಾಗಲು ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ ಎಂದು ಹೇಳಿದರು.

ಗ್ರಾಮದ ಮುಖಂಡ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಮೇಶ ಮಸಬಿನಾಳ ಮಾತನಾಡಿ, ಶಾಸಕರು ಪ್ರತಿ ಗ್ರಾಮಗಳಿಗೂ ತೆರಳಿ ಅಭಿವೃದ್ಧಿ ಪರ ಕಾಮಗಾರಿಗಳನ್ನು ಕೈಗೊಳ್ಳುತ್ತ ಜನರೊಂದಿಗೆ ನಿಕಟ ಸಂಪರ್ಕ ಹೊಂದಿದ್ದಾರೆ. ಅಭಿವೃದ್ಧಿ ಹರಿಕಾರರಾದ ಶಾಸಕರ ಕೈ ಬಲ ಪಡಿಸಬೇಕಾಗಿದೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಬಸವನಬಾಗೇವಾಡಿ ಪುರಸಭೆ ಮುಖ್ಯಾಧಿಕಾರಿ ಬಸವರಾಜ ಹಿರೇಮಠ, ಬಿಜೆಪಿ ಮಂಡಲ ಅಧ್ಯಕ್ಷ ಭೀಮನಗೌಡ ಸಿದರಡ್ಡಿ, ಗ್ರಾಪಂ ಸದಸ್ಯ ಯಲ್ಲಪ್ಪ ಮಾದರ, ಮುಖಂಡರಾದ ಶರಣಗೌಡ ಬಿರಾದಾರ, ಚಿದಾನಂದ ಹಚ್ಯಾಳ, ಮಹಾಂತೇಶ ಮನಗೂಳಿ, ಚಂದ್ರಶೇಖರ ಮೇಲಿನಮನಿ, ಭೂ ಸೇನಾ ನಿಗಮದ ಎಇಇ ಆನಂದಸ್ವಾಮಿ ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.